No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಮೆ ನಡಿಗೆಯ ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ | ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2025
in ಬೆಂಗಳೂರು ನಗರ
0
ಆಮೆ ನಡಿಗೆಯ ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ | ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈಗಾಗಲೇ ಸಿಬಿಐ #CBI ಮುಂದೆ ರಾಜ್ಯದ 74 ಪ್ರಕರಣಗಳು ತನಿಖೆಗೆ ಬಾಕಿ ಇರುವಾಗ ಬಿಜೆಪಿಯವರು ಹನಿಟ್ರಾಪ್ ಪ್ರಕರಣವನ್ನು #Honeytrap Case ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳುವ ಮೂಲಕ ತಮ್ಮ ತಿಳುವಳಿಕೆಯ ಕೊರತೆಯನ್ನು ಮತ್ತೊಮ್ಮೆ ಸಾಬೀತು ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ #Minister Priyank Kharge ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು ಏನೇ ನಡೆದರೂ ಅದನ್ನು ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ, ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಕರಣ ನಡೆದಾಗ ಬಿಜೆಪಿಯವರೆಲ್ಲ ತಡೆಯಾಜ್ಞೆ ತಂದಿದ್ದರು, ಅದರ ಬದಲು ಸಿಬಿಐ ತನಿಖೆಗೆ ವಹಿಸಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.
ಹನಿಟ್ರಾಪ್ ಕುರಿತು ಚರ್ಚೆಯಾಗುತ್ತಿದೆಯೇ ಹೊರತು ಈವರೆಗೆ ಯಾವುದೇ ದೂರು ದಾಖಲಾಗಿಲ್ಲ, ದೂರು ದಾಖಲಾದರೆ ಸಮರ್ಥವಾಗಿ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಸಮರ್ಥರಾಗಿರುವ ಅಧಿಕಾರಿಗಳಿದ್ದಾರೆ, ಇಷ್ಟಕ್ಕೂ ಹನಿಟ್ರಾಪ್ ವಿಷಯ ಬಗ್ಗೆ ಬಿಜೆಪಿಯವರು ಇಷ್ಟು ಆಸಕ್ತಿ ವಹಿಸುವುದಕ್ಕೆ ಕಾರಣವೇನು, ಭಯವೋ, ಕಾಳಜಿಯೋ? ಎಂದು ಕೇಳಿದ್ದಾರೆ.

Also read: ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಮಾನವಸಂಪನ್ಮೂಲದ ಕೊರತೆ ಇರುವುದರಿಂದ ಅನಗತ್ಯವಾಗಿ ಪ್ರಕರಣಗಳನ್ನು ನಮಗೆ ವಹಿಸಬೇಡಿ ಎಂದು ಸಿಬಿಐ ಹೇಳಿರುವ ಬಗ್ಗೆ ಬಿಜೆಪಿಯವರಿಗೆ ಅರಿವಿದೆಯೇ? ಇಷ್ಟಕ್ಕೂ ಸಿಬಿಐ ತನಿಖೆಗೆ ವಹಿಸಿದರೆ ಮಾನವ ಸಂಪನ್ಮೂಲವನ್ನು ರಾಜ್ಯ ಸರ್ಕಾರವೇ ಒದಗಿಸಿಕೊಡಬೇಕಾಗಿದೆ, 2024ರ ಜುಲೈ 17ರಂದೇ ಸಿಬಿಐ ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರ ಬರೆದಿತ್ತು, ರಾಜ್ಯದ ಅಧಿಕಾರಿಗಳಿಗೆ ತನಿಖೆ ನಡೆಸುವ ಸಾಮರ್ಥ್ಯ ಇರುವಾಗ ಸಿಬಿಐ ತನಿಖೆಯ ಅಗತ್ಯ ಏನಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶಿಸಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರವೇ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವಹಿಸಿದೆ ಎನ್ನುವುದನ್ನು ಬಿಜೆಪಿಗರು ನೆನಪು ಮಾಡಿಕೊಳ್ಳಲಿ, ಸಿಬಿಐಗೆ ವಹಿಸಿದ ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆಯ ಪ್ರಕರಣ, ಡಿ.ಕೆ ರವಿ ಆತ್ಮಹತ್ಯೆ ಪ್ರಕರಣ, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಜ್ಯದ ತನಿಖಾ ಸಂಸ್ಥೆಗಳು ಹೇಳಿದ್ದನ್ನೇ ಸಿಬಿಐ ಕೂಡ ತನ್ನ ತನಿಖಾ ವರದಿಯಲ್ಲಿ ಹೇಳಿದೆ. ಇದು ರಾಜ್ಯದ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಈಗಾಗಲೇ ಸಿಬಿಐ ಮುಂದೆ ರಾಜ್ಯದ ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ 74ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಇಂತಹ ಸ್ಥಿತಿ ಇರುವಾಗ ಪ್ರಕರಣಗಳ ಗಂಭೀರತೆಯನ್ನು ಮಾಪನ ಮಾಡದೆ ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರ ಅಪ್ರಬುದ್ಧತೆಯಲ್ಲದೆ ಇನ್ನೇನು ಎಂದು ಪ್ರಶ್ನೆ ಹಾಕಿದ್ದಾರಲ್ಲದೆ, ಈಗ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ ವಹಿಸಲಿಲ್ಲ,
ರಾಜ್ಯದಲ್ಲಿ ಹನಿಟ್ರಾಪ್ ಅನಿಷ್ಠವನ್ನು ಪರಿಚಯಿಸಿದ್ದೇ ಬಿಜೆಪಿಯವರು ಎನ್ನುವುದಕ್ಕೆ ಬಿಜೆಪಿ ಪಕ್ಷದವರ ಹೇಳಿಕೆಗಳೇ ಸಾಕ್ಷಿಯಾಗಿ ನಿಲ್ಲುತ್ತವೆ, ಅಪ್ಪ ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿಡಿ ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ ಶಾಸಕರು ತಡೆಯಾಜ್ಞೆಯನ್ನು ಪಡೆದಿದ್ದರು.

ಬಿಜೆಪಿಯಲ್ಲಿ ಸಿಡಿ ಫ್ಯಾಕ್ಟರಿ ಇದೆ, ಕೆಲವರು ಸಿಡಿ ಇಟ್ಟುಕೊಂಡೇ ಮಂತ್ರಿಯಾಗಿದ್ದಾರೆ ಎಂದೂ ಈ ಶಾಸಕರು ಆರೋಪಿಸಿದ್ದರು. ಈ ಎಲ್ಲಾ ಸಂದರ್ಭಗಳಲ್ಲಿ ಬಿಜೆಪಿಗೆ ಸಿಬಿಐ ನೆನಪಾಗಲಿಲ್ಲವೇ? ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಹಾಕಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                                 

Tags: BangaloreCBIHoneytrap CaseKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Priyank KhargeNews_in_KannadaNews_Kannadaಬೆಂಗಳೂರುಸಚಿವ ಪ್ರಿಯಾಂಕ್ ಖರ್ಗೆಸಿಬಿಐಹನಿಟ್ರಾಪ್ ಪ್ರಕರಣ
Share196Tweet123Send
Previous Post

ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

Next Post

ಬೆಂಗಳೂರು | ಹಾಲಿ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕೆ? ಬೆಸ್ಕಾಂ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Smart Meter Purchase Price is Scientific and Executed with Full Transparency: BESCOM MD Shivashankara

ಬೆಂಗಳೂರು | ಹಾಲಿ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕೆ? ಬೆಸ್ಕಾಂ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL