ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪಘಾತಕ್ಕೀಡಾದ ಬಾಲಕ ತರಗತಿಯಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಗರದ ಮುನ್ನೇಕೊಳಲು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ನಿತೀಶ್ (7) ಮೃತಪಟ್ಟ ಬಾಲಕನಾಗಿದ್ದು, ರಾಜೇಶ್ ಮತ್ತು ಪ್ರಿಯಾ ದಂಪತಿಯ ಮಗ. ಶಾಲೆಗೆ ತೆರಳುವ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಬಸ್ ಡಿಕ್ಕಿ ಹೊಡೆದಿದ್ದು, ತದನಂತರವೂ ಶಾಲೆಗೆ ತೆರಳಿದ್ದ ಬಾಲಕನಿಗೆ ಶಿಕ್ಷಕರು ಆರೈಕೆ ಮಾಡಿದ್ದರು. ಸ್ವಲ್ಪ ಸಮಯದ ಬಳಿಕ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲೆಗೆ ಬಿದ್ದಿದ್ದ ಭಾರೀ ಏಟಿನಿಂದಾಗಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
Also read: ವಿಶ್ವೇಶ್ವರಯ್ಯನವರ ಜೀವನವೇ ನಮಗೆಲ್ಲಾ ಒಂದು ಆದರ್ಶ: ವಿಐಎಸ್’ಎಲ್ ಇಡಿ ಚಂದ್ವಾನಿ
ಘಟನೆಗೆ ಸಂಬಂಧಿಸಿದಂತೆ ಎಚ್ಎಎಲ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post