Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

November 28, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅತ್ತ ವಕ್ಪ್ ನೋಟಿಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ, ಇತ್ತ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಬಣದ ನಿಷ್ಠರು ಮಧ್ಯ ಕರ್ನಾಟಕ ರಾಜಧಾನಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ.

ಈ ಕುರಿತು ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಮಾಜಿ ಶಾಸಕರಾದ ಎಂ.ವೈ.ಸಂಪಂಗಿ, ಎಂ.ಡಿ.ಲಕ್ಷ್ಮಿನಾರಾಯಣ, ತಿಪ್ಪರಾಜು, ಬಸವರಾಜ್ ಸಭೆ ನಡೆಸಿ ದಾವಣಗೆರೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.
ಇದು ಯಾವುದೇ ವ್ಯಕ್ತಿಯ ಇಲ್ಲವೇ ಬಣದ ಪರವಾಗಿ ಸಮಾವೇಶ ನಡೆಸದೆ ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಿ ಹೊಸ ಹುರುಪು ತುಂಬಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಕುಮಾರಬಂಗಾರಪ್ಪ, ರಮೇಶ್ ಜಾರಕಿಹೊಳಿ ಮತ್ತಿತರರು ಪಕ್ಷದ ಅಧ್ಯಕ್ಷರ ಅನುಮತಿಯನ್ನು ಪಡೆಯದೆ ಚಿಹ್ನೆಯನ್ನು ಬಳಸದೆ ಜನಜಾಗೃತಿ ಅಭಿಯಾನಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು,ತಕ್ಷಣವೇ ವರಿಷ್ಠರು ಮಧ್ಯಪ್ರವೇಶಿಸಿ ಅ ಭಿಯಾನ ನಡೆಸದಂತೆ ಸ್ಪಷ್ಟ ಸೂಚನೆ ನೀಡಬೇಕೆಂದು ಪ್ರಮುಖರು ಒತ್ತಾಯಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಕೆಲವರು ಪಕ್ಷಕ್ಕಿಂತ ನಾನೇ ದೊಡ್ಡವನೆಂದು ಬಿಂಬಿಸಿಕೊಂಡು ನಾಲ್ಕಾರು ಜನರ ಮೂಲಕ ಅಭಿಯಾನ ನಡೆಸುತ್ತಿದ್ದಾರೆ. ಇದು ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.

Also read: ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ

ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದು ಈಗ ಪಾದಯಾತ್ರೆ ನಡೆಸುತ್ತಿರುವವರಲ್ಲ. ಪ್ರಧಾನಿ ನರೇಂದ್ರಮೋದಿ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ.

ಆದರೆ ಉದ್ದೇಶಪೂರ್ವಕವಾಗಿಯೇ ಪಕ್ಷದೊಳಗೆ ಬೆಂಬಲ ಸೂಚಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಯತ್ನಾಳ್ ಹಾಗೂ ಅವರ ತಂಡದ ವಿರುದ್ದ ಕಿಡಿಕಾರಿದರು.

ನೀವು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಟೀಕಿಸಿದರೆ ಮೋದಿ, ಮತ್ತು ಅಮಿತ್ ಷಾ ಅವರನ್ನು ಟೀಕಿಸಿದಂತೆ. ಯಡಿಯೂರಪ್ಪ ರಾಜಕೀಯಕ್ಕೆ ಬಂದಾಗ ಕೆಲವರು ಇನ್ನು ಕಣ್ಣೇ ಬಿಟ್ಟಿರಲಿಲ್ಲ. ಅಂಥವರು ಕೂಡ ನಾಲ್ಕು ಮಂದಿ ಕಟ್ಟಿಕೊಂಡು ಪ್ರಚಾರಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ.ಇದಕ್ಕೆ ಕವಡೆಕಾಸಿನ ಕಿಮ್ಮಿತ್ತಿನ ಬೆಲೆ ಇಲ್ಲ ಎಂದು ಕೆಂಡಕಾರಿದರು.
ದಾವಣಗೆರೆಯಲ್ಲಿ ನಾವು ಯಾವುದೇ ವ್ಯಕ್ತಿ ಅಥವಾ ಬಣದ ಪರವಾಗಿ ಸಮಾವೇಶ ಮಾಡುತ್ತಿಲ್ಲ. ಸಂಘಟನೆ ಪ್ರಬಲವಾಗಬೇಕು. ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿಸಬೇಕು ಇದು ನಮ್ಮ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ. ನಮ್ಮಲ್ಲಿ ಸಿಎಂ ಆಗುತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ನೀವು ನಡೆಸುತ್ತಿರುವ ಹೋರಾಟ ಸಿದ್ದರಾಮಯ್ಯ ಮೋರ್ಚಾ ಎಂದು ಹಿರಿಯ ಮುತ್ಸದ್ದಿ ವಿಶ್ವನಾಥ್ ಅವರೇ ಹೇಳಿದ್ದಾರೆ. ನರಿ ಕಥೆ ನಿಮಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕೋಲಾರದ ಮುಳಬಾಗಿಲು ಭೇಟಿ ಬಳಿಕ ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಬಿಜೆಪಿ ಬಲವರ್ಧನೆಗಾಗಿ, ಅಲ್ಲಿಂದ ಮುರುಡೇಶ್ವರ ದರ್ಶನ ಪಡೆದು ರವೀಂದ್ರ ನಾಥ್ ಪಾಟೀಲ್ ಅಧ್ಯಕ್ಷತೆಯಲ್ಲಿ ಪೂರ್ವ ಬಾವಿ ಸಭೆಯನ್ನು ನಡೆಸುತ್ತೇವೆ. ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ ಎಂದರು. 29 ರಂದು ಹತ್ತು ಗಂಟೆಗೆ ಹೊರಟು ಕೋಲಾರ ಮುಳಬಾಗಿಲು ಗಣೇಶನ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸುತ್ತೇವೆ. ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ಯಡಿಯೂರಪ್ಪ ಕಷ್ಟದಲ್ಲಿ ಪಕ್ಷ ಕಟ್ಟಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ತರಲು ಅವರ ಪಾತ್ರ ಪ್ರಮುಖವಾಗಿದೆ. ಪಕ್ಷ ಕಟ್ಟಿದ ನಾಯಕರ ಬಗ್ಗೆ ಮಾತನಾಡುವುದು ರಾಷ್ಟ್ರೀಯ ನಾಯಕರ ವಿರುದ್ಧ ಮಾತನಾಡಿದಂತೆ ಎಂದು ಕಿಡಿಕಾರಿದರು.

ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ ಎಂದು ಆರೋಪಿಸಿದರು. ನಮ್ಮಲ್ಲಿ ಸಿಎಂ ಆಗ್ತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ವಿಜಯೇಂದ್ರ ಸಾರಥ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಇದು ಕಾರ್ಯಕರ್ತರ ಒಕ್ಕೋಲರ ಅಭಿಪ್ರಾಯವಾಗಿದೆ. ಕೆಲವರು ಆಗಲೇ ನಮ್ಮ ಬಣದವರೇ ಮುಖ್ಯಮಂತ್ರಿಯಾಗಲಿ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಆಸೆ ಈಡೆರುವುದಿಲ್ಲ ಎಂದು ಪರೋಕ್ಷವಾಗಿ ಯತ್ನಾಳ್‍ಗೆ ತಿರುಗೇಟು ಕೊಟ್ಟರು.
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡಿ,ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಹೊಣೆ ಎಂದು ಹೇಳಿದ್ದಾರೆ. ಅವರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ಇವರು ಕಣ್ಣೇ ಬಿಟ್ಟಿರಲಿಲ್ಲ. ಕೇವಲ ನಾಲ್ಕೈದು ಜನರು ಸೇರಿ ರಾಜ್ಯಾಧ್ಯಕ್ಷರನ್ನು ಇಳಿಸುತ್ತೇವೆ ಎಂದು ಹೋದರೆ ಅದು ಅವರ ಭ್ರಮೆ ಎಂದು ಟೀಕಿಸಿದರು.

ಯತ್ನಾಳ್ ಟೀಮ್ ಜೊತೆ ಹೋಗಿ ಯುದ್ದ ಮಾಡುವುದಕ್ಕೆ ಆಗುವುದಿಲ್ಲ. ಆದರೆ ಅವರ ಟೀಕೆಗೆ ನಾವು ತಕ್ಕ ಉತ್ತರ ಕೊಡಬೇಕು. ಯತ್ನಾಳ್ ಪ್ರತ್ಯೇಕ ಹೋರಾಟದಿಂದ ಪಕ್ಷದಲ್ಲಿ ತೊಂದರೆಯಾಗಿದೆ. ಕಾರ್ಯಕರ್ತರು ಎಲ್ಲರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4
Tags: B Y VijayendraBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಿ.ವೈ. ವಿಜಯೇಂದ್ರಬೆಂಗಳೂರು
Previous Post

ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ

Next Post

ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!