No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ | 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 27, 2024
in ಬೆಂಗಳೂರು ನಗರ
0
16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ | 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ “ಬಿಎಲ್‌ಆರ್‌ ಹಬ್ಬ” ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್‌ಆರ್‌ ಹಬ್ಬ 16 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಸಾರುವ ಹಾಗೂ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಿತು.

ಈ 16 ದಿನಗಳ ಬಿಎಲ್‌ಆರ್‌ ಹಬ್ಬದಲ್ಲಿ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ವಿಶೇಷ. ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯಲ್ಲಿರುವ ಸಭಾ ಮತ್ತು ಎನ್‌ಜಿಎಂಎ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದರಲ್ಲಿ ಹೆಸರಾಂತ ಕಲಾವಿದರ ಸಂಗೀತ ಕಚೇರಿಗಳು, ನಾಟಕ ಪ್ರದರ್ಶನ, ಜಾನಪದ ಕಲೆ ಪ್ರದರ್ಶನ, ಸಾಹಿತ್ಯ ಕಾರ್ಯಕ್ರಮಗಳು, ಕುವೆಂಪು ಅವರ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಗಲ-ಗಲ-ಗದ್ದಲ ಸೇರಿದಂತೆ 500ಕ್ಕೂ ಅಧಿಕ ಕಾರ್ಯಕ್ರಮಗಳು ಈ ಅವಧಿಯಲ್ಲಿ ಯಶಸ್ವಿಯಾಗಿ ನಡೆದಿವೆ. ಅಷ್ಟೆ ಅಲ್ಲದೆ, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ “ಬೆಂಗಳೂರು ಚಾಲೆಂಜ್‌” ಸ್ಪರ್ಧೆಯು ಹೆಚ್ಚು ಆಕರ್ಷಣೀಯವಾಗಿತ್ತು. ಜೊತೆಗೆ, “ಬಿಎಲ್‌ಆರ್‌ ಗೋಡೆ” ಉಪಕ್ರಮದ ಮೂಲಕ ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ ಮೂಡಿಸುವ ಸರಣಿ ನಡೆಯಿತು.  ಹೆಚ್ಚುವರಿಯಾಗಿ, ನಿಮ್ಮ ಉದ್ಯಾನವನದಲ್ಲಿ ಹಬ್ಬ, ರಿಚ್ಮಂಡ್ ರೋಡ್ ಮತ್ತು ಇತರವುಗಳನ್ನು ಒಳಗೊಂಡಂತೆ ಐದು ಪ್ರಮುಖ ಸ್ಥಳಗಳಲ್ಲಿ ಹಬ್ಬಗಳನ್ನು ವಿಭಿನ್ನವಾಗಿ ಆಚರಿಸಲಾಯಿತು.
ಬಿಎಲ್‌ಆರ್ ಹಬ್ಬ -2024 ಯಶಸ್ವಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಬಿಎಲ್‌ಆರ್ ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ಹೇಳಿದರು. ಈ ಹಬ್ಬವು ಬೆಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಹಾಗೂ ಎಲ್ಲಾ ಸಮುದಾಯವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಿದ್ದು ಸಂತಸ ತಂದಿದೆ. ಸ್ವಯಂ ಸೇವಕರ ಸಹಕಾರದಿಂದ ಯಾವುದೇ ಅಡೆತಡೆ ಇಲ್ಲದೇ ಬಿಎಲ್‌ಆರ್‌ ಹಬ್ಬ ಯಶಸ್ವಿಯಾಗಿ ನಡೆದಿದ್ದು, ಬೆಂಗಳೂರಿನ ನೈಜ ಪರಂಪರೆಯನ್ನು ಜಾಗತಿಕವಾಗಿಯೂ ಪ್ರಚೂರ ಪಡಿಸಿದೆ. ಈ ಹಬ್ಬವನ್ನು ಇನ್ನಷ್ಟು ಪ್ರಭಾವಶಾಲಿಯಾಗಿಸಲು ಎಲ್ಲಾ ರೀತಿಯ ಕಲಾವಿದರ ಸಹಕಾರ ಪ್ರಶಂಸನೀಯ. ಇನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೂ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು. ಒಟ್ಟಾರೆ ಬಿಎಲ್‌ಆರ್‌ ಹಬ್ಬ ಎರಡನೇ ಆವೃತ್ತಿಯೂ ತೆರೆ ಕಂಡಿದ್ದು, ಇದರ ಭಾಗವಾದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು.

Also read: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಂತಾಪ

ಅನ್‌ಬಾಕ್ಸಿಂಗ್‌ಬಿಎಲ್‌ಆರ್‌ ಫೌಂಡೇಶನ್‌ನ ಸಹ-ಸಂಸ್ಥಾಪಕಿ ಮಾಲಿನಿ ಗೋಯಲ್ ಮಾತನಾಡಿ, ಬಿಎಲ್‌ಆರ್‌ ಹಬ್ಬ ಬೆಂಗಳೂರಿನ ಶ್ರೀಮಂತ ವೈವಿಧ್ಯತೆ, ಸೃಜನಶೀಲತೆ, ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿಯುತ್ತದೆ. ನಮ್ಮ ದೃಷ್ಟಿ ನಗರದ ಸಾಂಪ್ರದಾಯಿಕ ಪರಂಪರೆಯನ್ನು ಅದರ ಆಧುನಿಕ ಗುರುತಿನೊಂದಿಗೆ ಸುಂದರವಾಗಿ ಜೋಡಿಸುವ ಈ ಹಬ್ಬವು ನಮ್ಮೆಲ್ಲರನ್ನೂ ಮನಸೂರೆಗೊಳಿಸಿತು. ಪ್ರತಿಯೊಬ್ಬರೂ ಬಿಎಲ್‌ಆರ್‌ ಹಬ್ಬದಲ್ಲಿ ಪಾಲ್ಗೊಂಡು ನಮ್ಮ ಸಾಂಸ್ಕೃತಿಕ ಅನುಭವವನ್ನು ಪಡೆದುಕೊಂಡಿರುವುದು ಸಂತಸ. ನಗರದ ವಿಶಿಷ್ಟ ಚೈತನ್ಯವನ್ನು ಆಚರಿಸಲು ಒಗ್ಗೂಡಿದ ಬೆಂಗಳೂರಿನ ಜನರಿಗೆ ಅಭಿನಂದನೆಗಳು ಎಂದರು.

ಬಿಎಲ್‌ಆರ್‌ ಹಬ್ಬದ ಮೂಲಕ ಬೆಂಗಳೂರನ್ನು ದಕ್ಷಿಣ ಏಷ್ಯಾದಲ್ಲಿಯೇ ಸಾಂಸ್ಕೃತಿಕ ಕೇಂದ್ರವನ್ನಾಗಿ ಗುರುತಿಸಿ ಪ್ರವಾಸಿಗರನ್ನು ಇತ್ತ ಆಕರ್ಷಿಸುವುದು ಹಾಗೂ ಸ್ಥಳೀಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ನಮ್ಮ ಆದ್ಯತೆ. ಜೊತೆಗೆ, ಬೆಂಗಳೂರನ್ನು ಜಾಗತಿಕ ನಕ್ಷೆಯಲ್ಲಿ ಸಾಂಸ್ಕೃತಿಕ ಕೇಂದ್ರಬಿಂದುವಾಗಿ ಗುರುತಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ಬಿಎಲ್‌ಆರ್‌ ಹಬ್ಬದ ಪ್ರಾಯೋಜಕರಲ್ಲಿ ಗೋ ನೇಟಿವ್, ಝೆರೋಧಾ, ಮಣಿಪಾಲ್ ಫೌಂಡೇಶನ್ ಮತ್ತು ಪ್ರೆಸ್ಟೀಜ್ ಗ್ರೂಪ್ ಸೇರಿವೆ. ಕಾರ್ಯಕ್ರಮದ ಪ್ರಾಯೋಜಕರು ಗೀತಾಂಜಲಿ ವಿಕ್ರಮ್ ಕಿರ್ಲೋಸ್ಕರ್, ಪ್ರೊಸಸ್ ಮತ್ತು ಕ್ವೆಸ್ ಕಾರ್ಪೊರೇಷನ್ ಸೇರಿವೆ.

ಹೆಚ್ಚಿನ ಮಾಹಿತಿಗಾಗಿ ಮತ್ತು BLR ಹಬ್ಬಾದ ಸಂಕ್ಷಿಪ್ತ ಮಾಹಿತಿಗಾಗಿ https://www.instagram.com/blrhubba/?hl=en ವೆಬ್‌ಸೈಟ್‌ಗೆ ಭೇಟಿ ನೀಡಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಂತಾಪ

Next Post

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್’ಸಿಟಿ ಸೇರಿ ಹಲವು ರೈಲುಗಳ ತಾತ್ಕಾಲಿಕವಾಗಿ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್'ಸಿಟಿ ಸೇರಿ ಹಲವು ರೈಲುಗಳ ತಾತ್ಕಾಲಿಕವಾಗಿ ರದ್ದು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL