Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಸಿಎಂ

ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

June 27, 2022
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭು ಕೆಂಪೇಗೌಡ Kempegowda ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ ಮಾಡುವ ಮೂಲಕ ಪ್ರತಿ ಜನರ ಬದುಕಿಗೂ ಕೊಡುಗೆ ನೀಡಿದ್ದಾರೆ. ವಿಜಯನಗರ ಸಾಮ್ರಾಜ್ಯ, ಜನರನ್ನು ನಾಡು ಕಟ್ಟಲು ಬಳಕೆ ಮಾಡಿದ ಸುವರ್ಣ ಯುಗ. ಸಕಾರಾತ್ಕಕ ಧೋರಣೆಯಿಂದ ನಾಡನ್ನು ಕಟ್ಟಿದ ಶ್ರೇಯ ಕೆಂಪೇಗೌಡರಿಗೆ ಸಲ್ಲುತ್ತದೆ. ಕೆಂಪೇಗೌಡರು ಹಾಕಿರುವ ಯೋಜನೆಗಳು, ಕನಸುಗಳು, ಅವರು ಕಟ್ಟಿರುವ ನಾಡನ್ನು ನಾವು ಬೆಳೆಸಿರುವ ಬಗ್ಗೆ ಸಿಂಹಾವಲೋಕನ ಮಾಡುವ ಸಂದರ್ಭವಿದು. ಬೆಂಗಳೂರು ಅಂತರರಾಷ್ಟ್ರೀಯ ನಗರ. ಕೆಂಪೇಗೌಡರು ಕೆರೆಕಟ್ಟೆಗಳನ್ನು, ಗ್ರಾಮಗಳನ್ನು ಕಟ್ಟಿದ್ದಾರೆ. ಸಮುದಾಯಗಳಿಗೆ ಹಾಗೂ ವ್ಯಾಪಾರಗಳಿಗೆ ಅವಕಾಶಗಳನ್ನು ಪೂರೈಸಿದ ದೂರದೃಷ್ಟಿಯ ನಾಯಕರಾಗಿದ್ದರು ಎಂದರು.
ವಿಸ್ತರಣೆಯಾಗಿರುವ ಬೆಂಗಳೂರಿಗೆ ಉತ್ತಮ ಮೂಲಭೂತ ಸೌಕರ್ಯ ಪೂರೈಕೆ:
ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದರ ಬಗ್ಗೆ ಸ್ಪಷ್ಟತೆ ಪಡೆದು ಕೆಲಸ ಮಾಡಿದರೆ ಯಾವುದೇ ಸಮಸ್ಯೆಯನ್ನೂ ಪರಿಹರಿಸಬಹುದು. ಸಮಸ್ಯೆಗಳನ್ನು ಆಯಾ ಕಾಲದಲ್ಲಿಯೇ ಪರಿಹರಿಸಬೇಕು. ಪ್ರತಿದಿನ 5 ಸಾವಿರಕ್ಕಿಂತ ಹೆಚ್ಚು ಹೊಸ ವಾಹನಗಳು ರಸ್ತೆಗೆ ಇಳಿಯುತ್ತವೆ. ಬೆಂಗಳೂರು ನಗರದಲ್ಲಿ ಜನರಿಗಿಂತ ವಾಹನಗಳ ಸಂಖ್ಯೆ ಜಾಸ್ತಿಯಾಗಿರುವುದು ವಾಸ್ತವಾಂಶ. ಬೆಂಗಳೂರಿನ ವಿಸ್ತರಣೆ ಬಹಳಷ್ಟು ಆಗಿದೆ. ಬೆಂಗಳೂರಿನಿಂದ 30-40 ಕಿ.ಮೀ. ವರೆಗೂ ನಗರ ಬೆಳೆದಿದ್ದು, ರಸ್ತೆ, ನೀರು,ಮೂಲಭೂತ ಸೌಕರ್ಯಗಳನ್ನು ಪೂರೈಸಬೇಕಿದೆ. ಸಮಸ್ಯೆಯನ್ನು ಗುರುತಿಸಿ ಪರಿಹಾರ ನೀಡಬೇಕಿದೆ. ಬೆಂಗಳೂರಿಗೆ ಮುಂದಿನ 40 ವರ್ಷಗಳವರೆಗೂ ಬಳಸಬಹುದಾದಂತಹ ಉತ್ತಮ ಸಾರಿಗೆ ವ್ಯವಸ್ಥೆ, ಗಟ್ಟಿಮುಟ್ಟಾದ ರಸ್ತೆ, ಮೂಲಭೂತ ಸೌಕರ್ಯ ಹಾಗೂ ಸ್ಯಾಟಿಲೈಟ್ ಟೌನ್‍ಗಳನ್ನು ನಿರ್ಮಿಸುವ ಚಿಂತನೆ. ಬೆಂಗಳೂರು ನಗರದಲ್ಲಿ ಸಾರಿಗೆಯನ್ನು ಸರಾಗಗೊಳಿಸಿ, ನಗರವನ್ನು ಅಭಿವೃದ್ಧಿಗೊಳಿಸಲು ಚಿಂತಿಸಲಾಗುತ್ತಿದೆ ಎಂದರು.

ಬೆಂಗಳೂರನ್ನು ನಾಲ್ಕು ದಿಕ್ಕುಗಳಿಂದಲೂ ಅಭಿವೃದ್ಧಿಗೊಳಿಸುವ ಉದ್ದೇಶ :
ಬೆಂಗಳೂರಿನಲ್ಲಿ ವಿವಿಧ ರಂಗಗಳಿಗೆ ಸಂಬಂಧಿಸಿದ 400 ವಿಶ್ವಮಟ್ಟದ ಸಂಶೋಧನಾ ಕೇಂದ್ರಗಳಿವೆ. 400 ಕ್ಕೂ ಹೆಚ್ಚು ಫಾರ್ಚೂನ್ ಕಂಪನಿಗಳಿವೆ. ಶೇ.43 ರಷ್ಟು ಎಫ್‍ಡಿಐ ಕರ್ನಾಟಕದಲ್ಲಿ ಆಗುತ್ತಿದೆ. ಇವುಗಳಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ನೀಡುವ ಮೂಲಕ ಆಧುನಿಕ ಬೆಂಗಳೂರನ್ನು ನಿರ್ಮಿಸಲು ಸಾಧ್ಯ. ಬೆಂಗಳೂರಿನಲ್ಲಿನ ನಮ್ಮತನವನ್ನು ಉಳಿಸಿಕೊಂಡು ನಗರವನ್ನು ಅಭಿವೃದ್ಧಿಗೊಳಿಸುವ ದೃಷ್ಟಿಕೋನವಿರಬೇಕು. ಬೆಂಗಳೂರು ನಾಲ್ಕು ದಿಕ್ಕುಗಳಿಂದಲೂ ಬೆಳೆಯಬೇಕು ಎಂಬ ನಾಡಪ್ರಭು ಕೆಂಪೇಗೌಡರ ಉದ್ದೇಶವಾಗಿತ್ತು. ಇದೇ ಮಾದರಿಯಲ್ಲಿ ಎಲ್ಲ ಸವಲತ್ತುಗಳಿರುವ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸುವ ಸರ್ಕಾರದ ಚಿಂತನೆ ಕೆಂಪೇಗೌಡರೇ ಪ್ರೇರಣೆಯಾಗಿದ್ದಾರೆ ಎಂದರು.
ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿ ಬೆಂಗಳೂರಿನ ಅಭಿವೃದ್ಧಿಗೆ ಕಾರಣ :
ಕೆಂಪೇಗೌಡರ ಪ್ರಶಸ್ತಿಗೆ ಮಹತ್ವವನ್ನು ತಂದುಕೊಡುವ ಕೆಲಸ ಅವರಿಂದಾಗಿದೆ. ಐಟಿ ಕ್ಷೇತ್ರವನ್ನು ಉತ್ಕಷ್ಟ ಮಟ್ಟಕ್ಕೆ ತಂದವರು ಎಸ್.ಎಂ.ಕೃಷ್ಣಾ ಅವರು. ಬೆಂಗಳೂರನ್ನು ಸಿಂಗಪೂರ್ ಮಾಡುವುದಾಗಿ ಅಂದು ಅವರು ಹೇಳಿದ್ದರು. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಬೆಂಗಳೂರನ್ನು ಸಿಂಗಾಪುರ ಮಾದರಿಯಲ್ಲಿ ಬೆಳೆಸಬಹುದಾಗಿತ್ತು. ಈಗಲಾದರೂ ದೂರದೃಷ್ಟಿಯಿಂದ ಕೆಲಸ ಮಾಡುವ ಅವಶ್ಯಕತೆ ಮತ್ತು ಅನಿವಾರ್ಯತೆ ಇದೆ. ಅವರ ದೂರದೃಷ್ಟಿ, ಕ್ರಿಯಾಶೀಲತೆ, ಬದ್ಧತೆ ಇವೆಲ್ಲವೂ ಬೆಂಗಳೂರಿನ ಅಭಿವೃದ್ಧಿಗೆ ಕಾರಣವಾಗಿವೆ. ಬೆಂಗಳೂರಿನ ಅಭಿವೃದ್ಧಿಯಲ್ಲಿ ಯುವಕರು, ಸಮಾಜಸೇವಕರ ಪಾತ್ರ ದೊಡ್ಡದಿದೆ ಎಂದರು.

Also read:ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ದೇಶದಲ್ಲಿಯೇ ಅತ್ಯುತ್ತಮ ವಿಮಾನ ನಿಲ್ದಾಣ:
ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಬಹುತೇಕ ಟರ್ಮಿನಲ್ -2 ಉದ್ಘಾಟನೆಯ ಸಂದರ್ಭದಲ್ಲಿ ಅನಾವರಣ ಮಾಡಲಾಗುವುದು. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಮಾಡಿಸುವ ಉದ್ದೇಶವಿದೆ. ಪ್ರತಿಮೆ ಕಾರ್ಯಕ್ಕೆ ಈಗಾಗಲೇ ಸುಮಾರು 85 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ 23 ಕೋಟಿ ರೂ. ಗಳನ್ನು ಸೌಂದರ್ಯೀಕರಣಕ್ಕೆ ಬಿಡುಗಡೆ ಮಾಡಲಾಗಿದೆ. ಕೆಂಪೇಗೌಡರ ಇತಿಹಾಸವನ್ನು ಬಿಂಬಿಸುವ ಕೆಲಸವನ್ನೂ ಇದು ಒಳಗೊಂಡಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ -2 ಸಿದ್ಧವಾದಾಗ ದೇಶದಲ್ಲಿಯೇ ಅತ್ಯುತ್ತಮ ವಿಮಾನನಿಲ್ದಾಣವಾಗಲಿದೆ. ಆ ಸಂದರ್ಭದಲ್ಲಿ ಕೆಂಪೇಗೌಡದ ಹೆಸರು ಶಾಶ್ವತವಾಗಿ ಉಳಿಯುವಂಥ ಕೆಲಸವಾಗಿದೆ. ನಾಡು ಕಟ್ಟಿದ ಕೆಂಪೇಗೌಡರ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವ ಕೆಲಸವಾಗಿದೆ ಎಂದರು.
ಯುವಕರ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಹತ್ವ :
ಮಾಗಡಿಯಲ್ಲಿ ಸುಮಾರು 50 ಕೋಟಿ ರೂ.ಗಳ ವೆಚ್ಚದಲ್ಲಿ ನಾಡಪ್ರಭುಗಳ ಇತಿಹಾಸ ಬಿಂಬಿಸುವ ಕೆಲಸವಾಗುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಂಪೇಗೌಡರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕೆಂದು 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 100 ಕೋಟಿ ರೂ.ಗಳ ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣ ಮಾಡುತ್ತೇವೆ. ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 150 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಸಮುದಾಯವನ್ನು ಕಟ್ಟಲೆಂದು ಯುವಕರ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಹತ್ವ ನೀಡಲಾಗುತ್ತಿದೆ. ಇದರ ರೂಪುರೇಷೆಗಳನ್ನು ಸಿದ್ಧಪಡಿಸಿ ಜುಲೈ ತಿಂಗಳಲ್ಲಿ ಅದಕ್ಕೆ ಚಾಲನೆ ನೀಡಲಾಗುವುದು ಎಂದರು.

ಕೆಂಪೇಗೌಡರು ಇಡೀ ನಾಡಿಗೆ ಸೇರಿದವರು. ಕೆಂಪೇಗೌಡರ ಕೀರ್ತಿ, ಶ್ರೇಯಸ್ಸಿಗೆ ಇನ್ನಷ್ಟು ಮೆರಗು ಕೊಡುವ ರೀತಿಯಲ್ಲಿ ಕರ್ನಾಟಕವನ್ನು ಕಟ್ಟಬೇಕಿದೆ. ಆಡಳಿತ ಮಾಡುವ ಸಂದರ್ಭದಲ್ಲಿ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ. ಹಲವಾರು ಸವಾಲುಗಳಿವೆ. ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಕರ್ನಾಟಕದ ಅಭಿವೃದ್ಧಿ ಮಾಡುತ್ತೇವೆ, ನವ ಕರ್ನಾಟಕದಿಂದ ನವ ಭಾರತದ ಅಭಿವೃದ್ಧಿ ಮಾಡುತ್ತೇವೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteKempegowdaLatest News KannadaNewsinKannadaNewsKannadaState Newsಕೆಂಪೇಗೌಡಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Next Post

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!