No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತ್ಯಾಧುನಿಕ ಆಟೋಲೋಗಸ್‌ ಕಾರ್ಟಿಲೇಜ್‌ ಕಸಿ ಶಸ್ತ್ರಚಿಕಿತ್ಸೆ: ಕ್ಷೀಪ್ರವಾಗಿ ಚೇತರಿಸಿಕೊಂಡ ಕ್ರೀಡಾಪಟು

ರಾಜ್ಯದಲ್ಲೇ ಮೊದಲ ಬಾರಿಗೆ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2022
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |     

ಫುಟ್‌ಬಾಲ್‌ ಆಟದಲ್ಲಿ ಪಾದದ ಕಾರ್ಟಿಲೇಜ್‌ ಗೆ ಹಾನಿಮಾಡಿಕೊಂಡಿದ್ದ ಕ್ರೀಡಾಪುಟುವಿಗೆ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಆಟೋಲೋಗಸ್‌ ಕಾರ್ಟಿಲೇಜ್‌ ಕಸಿ ಶಸ್ತ್ರಚಿಕಿತ್ಸೆಯನ್ನ ಜಯನಗರದ ಯುನೈಟೆಡ್‌ ಆಸ್ಪತ್ರೆಯ ವೈದ್ಯರು ನೆರವೇರಿಸಿದ್ದಾರೆ.

ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ ನಡೆಸಿದ ಈ ಅತ್ಯಾಧುನಿಕ ತಂತ್ರಜ್ಞಾನದ ಶಸ್ತ್ರಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ವೈದ್ಯರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಇತ್ತೀಚಿಗೆ ಅಜಯ್ ಎಂಬ ಯುವ ಫುಟ್‌ಬಾಲ್ ಆಟಗಾರ ಫುಟ್‌ಬಾಲ್ ಪಂದ್ಯವೊಂದರಲ್ಲಿ ತನ್ನ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಕೀಲುಗಳ ಕಾರ್ಟಿಲೆಜ್ ಸಮಸ್ಯೆಯನ್ನು ಸಾಮಾನ್ಯವಾಗಿ ಯಾವುದೇ ಶಸ್ತ್ರಚಿಕಿತ್ಸೆಗಳಿಲ್ಲದೆ ನಿವಾರಿಸಲಾಗುತ್ತದೆ. ದೀರ್ಘಕಾಲದ ವಿಶ್ರಾಂತಿ ತೆಗೆದುಕೊಳ್ಳುವುದು ಸಾಮಾನ್ಯವಾಗಿ ಭಾರತದಲ್ಲಿ ರೂಢಿಯಲ್ಲಿದೆ. ಆದರೆ ಇದು ಕ್ರೀಡಾಪಟುಗಳು ತಮ್ಮ ಚಟುವಟಿಕೆಗಳಲ್ಲಿ ಮುಂದುವರಿಯುವುದನ್ನು ತಡೆಯುತ್ತದೆ ಹಾಗೂ ನಿಧಾನವಾಗಿ ಚೇತರಿಸಿಕೊಳ್ಳುವ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮರಳಿ ಪಡೆದುಕೊಳ್ಳಲು ಬಹಳಷ್ಟು ಸಮಯಾವಕಾಶ ಬೇಡುತ್ತದೆ.
ನೂತನ ವಿಧಾನದ ಶಸ್ತ್ರಚಿಕಿತ್ಸೆಯ ಬಗ್ಗೆ ವಿವರಿಸಿದ ಯುನೈಟೆಡ್‌ ಆಸ್ಪತ್ರೆಯ ಕನ್ಸಲ್ಟೆಂಟ್‌ ಆರ್ಥೋಪಿಡಿಶಿಯನ್‌ ಡಾ ಪ್ರದ್ಯುಮ್ನ ಆರ್‌ ಅವರು “ಅಥ್ಲೆಟಿಕ್ ನಲ್ಲಿ ಪಾಲ್ಗೊಳ್ಳುವ ಮಂದಿಗೆ ಕೀಲಿನ ಕಾರ್ಟಿಲೆಜ್ ಗಾಯಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ವೃತ್ತಿಪರ ಕ್ರೀಡಾಪಟುಗಳು ಮತ್ತು ಕ್ರೀಡಾ ಹವ್ಯಾಸಿಗಳು ಕಾರ್ಟಿಲೆಜ್ ಹಾನಿಗೆ ಗುರಿಯಾಗುತ್ತಾರೆ. ಇದು ಟ್ವಿಸ್ಟ್ ಮಾಡುವಾಗ, ಜಂಪ್ ಮಾಡುವಾಗ ಜಿಗಿಯುವಾಗ ಮೊಳಕಾಲನ್ನು ತೀವ್ರವಾಗಿ ಬಾಗಿಸಿದಾಗ ಅಥವಾ ಹಠಾತ್ ಆಘಾತಕಾರಿ ಗಾಯದಿಂದಾಗಿ ಈ ಸಮಸ್ಯೆ ಕಾಣಿಸಿಕೊಳ್ಳಬಹುದು. ಇದನ್ನು ಗುಣಪಡಿಸುವ ಸೀಮಿತ ಚಿಕಿತ್ಸೆಗಳಿಂದಾಗಿ, ನೋವು ಹೆಚ್ಚಾಗಿರುತ್ತದೆ. ಹೆಚ್ಚಿನ ಬಾರಿ ಇದು ಅಪೂರ್ಣ ಚಿಕಿತ್ಸೆಗೆ ಕಾರಣವಾಗುತ್ತದೆ. ಚಿಕಿತ್ಸೆ ನೀಡದೆ ಬಿಟ್ಟರೆ, ಕಾರ್ಟಿಲೆಜ್ ಗಾಯಗಳು ಪ್ರೊಗ್ರೆಸ್ಸಿವ್ ಕೊಂಡ್ರೊಜೆನಿಕ್ ನಷ್ಟಕ್ಕೆ ಕಾರಣವಾಗಬಹುದು ಅಥವಾ ಕಾಲಕ್ರಮೇಣ ಕಾರ್ಟಿಲೆಜ್ ಕಳೆದುಹೋಗಬಹುದು” ಎಂದು ಹೇಳಿದರು.

ಕೇವಲ ಕೀಹೋಲ್ ಶಸ್ತ್ರಚಿಕಿತ್ಸೆಯ ಮೂಲಕ ರೋಗಿಗೆ ಒಂದೇ ಹಂತದ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅಜಯ್ ಈಗ ಗುಣಮುಖವಾಗುವುದರ ಜೊತೆಗೆ ವ್ಯಾಯಾಮ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಹಜ ಸ್ಥಿತಿಗೆ ಕ್ಷೀಪ್ರವಾಗಿ ಮರಳುತ್ತಿದ್ದಾರೆ. ಶೀಘ್ರದಲ್ಲೇ ಅವರು ತಮ್ಮ ನೆಚ್ಚಿನ ಕ್ರೀಡೆಯನ್ನು ಮತ್ತೆ ಆಡಲು ಸಾಧ್ಯವಾಗುತ್ತದೆ” ಎಂದು ಯುನೈಟೆಡ್‌ ಆಸ್ಪತ್ರೆಯ ಕನ್ಸಲ್ಟೆಂಟ್‌ ಆರ್ಥೋಪಿಡಿಶಿಯನ್‌ ಡಾ ಪ್ರದ್ಯುಮ್ನ ಆರ್‌ ತಿಳಿಸಿದರು.
ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಕ್ರಮ್‌ ಸಿದ್ದಾರೆಡ್ಡಿ ಮಾತನಾಡಿ, “ನೂತನ ವಿಧಾನದ ತಂತ್ರಜ್ಞಾನದಲ್ಲಿ ರೋಗಿಯ ಕೀಲಿನಿಂದ ಸಂಗ್ರಹಿಸಿದ ರೋಗಿಯ ಕಾರ್ಟಿಲೆಜ್ ಕೋಶಗಳನ್ನು ಬಳಸಿಕೊಳ್ಳಲಾಗುತ್ತದೆ. ಈ ಅಂಗಾಂಶವನ್ನು ರೋಗಿಯ ರಕ್ತದ ಪ್ರೋಟೀನ್ ಸಮೃದ್ಧ ಭಾಗದೊಂದಿಗೆ ಬೆರೆಸಿ ಜೆಲ್ ತರಹದ ವಸ್ತುವನ್ನು ರೂಪಿಸಿಕೊಳ್ಳಲಾಗುತ್ತದೆ. ಇದನ್ನು ನೋವಿರುವ ಜಾಗಗಳಿಗೆ ಹಾಕುವುದರ ಮೂಲಕ ಕೆಲವು ವಾರಗಳಲ್ಲಿ ಹೊಸ ಕಾರ್ಟಿಲೆಜ್ ಆಗಿ ಬೆಳೆಯಲು ಅನುವು ಮಾಡಿಕೊಡಲಾಗುತ್ತದೆ. ಇದರಿಂದ ಕೀಲುಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಡೆಯಬಹುದು ಮತ್ತು ಕೀಲುಗಳಲ್ಲಿ ಸಂಧಿವಾತ ಹೆಚ್ಚುವುದನ್ನು ತಪ್ಪಿಸುತ್ತದೆ ಎಂದರು.

“COVID ಸಾಂಕ್ರಾಮಿಕ ರೋಗದ ನಂತರ ತಮ್ಮ ಕ್ರೀಡಾ ಚಟುವಟಿಕೆಗಳಿಗೆ ಮತ್ತೆ ಮರಳಿರುವ ಹೆಚ್ಚಿನ ಮಂದಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುನೈಟೆಡ್ ಹಾಸ್ಪಿಟಲ್ ಬೆಂಗಳೂರಿನಲ್ಲಿ ಮೂಲಸೌಕರ್ಯ, ಉಪಕರಣಗಳು, ಆಪರೇಷನ್ ಥಿಯೇಟರ್‌ಗಳು, ತರಬೇತಿ ಪಡೆದ ಸಿಬ್ಬಂದಿ, ರೋಗಿಗಳ ಯೋಗಕ್ಷೇಮಕ್ಕೆ ಮೀಸಲಾದ ನಿರ್ವಹಣೆ ಮತ್ತು ಭಾರತದ ಮೊದಲ ಆಟೋಲೋಗಸ್ ಕಾರ್ಟಿಲೆಜ್ ಟ್ರಾನ್ಸ್‌ಪ್ಲಾಂಟ್‌ ಸೌಲಭ್ಯಗಳ ಮೂಲಕ ಬೆಂಗಳೂರಿನ ಅತ್ಯುತ್ತಮ ಕ್ರೀಡೆ ಸಂಬಂಧಿತ ಗಾಯಗಳಿಗೆ ಚಿಕಿತ್ಸೆ ನೀಡುವ ಸುಸಜ್ಜಿತ ಆಸ್ಪತ್ರೆಗಳಲ್ಲಿ ಒಂದಾಗಿದೆ. ಕ್ರೀಡಾ ಸಮಸ್ಯೆಗಳ ನಿವಾರಣೆಗೆ ಇದೊಂದು ಉತ್ತಮವಾದ ಸ್ಥಳ” ಎಂದು ಜಯನಗರದ ಯುನೈಟೆಡ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಡಯಾಗ್ನೋಸ್ಟಿಕ್ ಮತ್ತು ವೆಲ್ನೆಸ್ ಮುಖ್ಯಸ್ಥ ಡಾ. ಶಾಂತಕುಮಾರ್ ಮುರುಡಾ ಹೇಳಿದರು.
“ಯುನೈಟೆಡ್ ಆಸ್ಪತ್ರೆಯಲ್ಲಿ ಎಲ್ಲಾ ಕ್ರೀಡೆಗಳಿಗೆ ಸಂಬಂಧಿಸಿದ ಗಾಯಗಳಿಗೆ ಚಿಕಿತ್ಸೆ ನೀಡಲು ವಿಶ್ವದ ಅತ್ಯುತ್ತಮ ತಂತ್ರಗಳನ್ನು ಬಳಸಲಾಗುತ್ತದೆ. ಆಟೋಲೋಗಸ್ ಕಾರ್ಟಿಲೆಜ್ ಟ್ರಾನ್ಸ್‌ಪ್ಲಾಂಟ್ ಅನ್ನು ಒಂದೇ ಸೆಟ್ಟಿಂಗ್‌ನಲ್ಲಿ ಮಾಡಲಾಗುತ್ತದೆ, ಕೀಹೋಲ್ ಶಸ್ತ್ರಚಿಕಿತ್ಸೆ, ಸಾಂಪ್ರದಾಯಿಕ ಆರು ವಾರಗಳ ಅಂತರದಲ್ಲಿ ನಡೆಯುವ ಎರಡು ACI ಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮತ್ತು ರೋಗಿಗೆ ಅನುಕೂಲಕರವಾಗಿದೆ” ಎಂದು ಡಾ ಮುರುಡಾ ವಿವರಿಸಿದರು.

ಹಲವಾರು ವೈದ್ಯರನ್ನು ಭೇಟಿ ಮಾಡಿದ ಬಳಿಕ ಯುನೈಟೆಡ್ ಆಸ್ಪತ್ರೆಯ ಕನ್ಸಲ್ಟೆಂಟ್ ಆರ್ಥೋಪೆಡಿಶಿಯನ್ ಡಾ.ಪ್ರದ್ಯುಮ್ನ ಅವರನ್ನು ಭೇಟಿಯಾದೆ. ನನ್ನ ಪಾದದ ಕಾರ್ಟಿಲೇಜ್ ಹಾನಿಗೊಳಗಾಗಿದ್ದನ್ನ ಕಂಡು ವೈದ್ಯರಾದ ಪ್ರದ್ಯುಮ್ನ ಅವರು ಆರ್ಥೋಸ್ಕೊಪಿ ಮೂಲಕ ಆಟೋಲೋಗಸ್ ಕಾರ್ಟಿಲೆಜ್ ಕಸಿ ಮಾಡಲು ನಿರ್ಧರಿಸಿದರು. ಕಡಿಮೆ ಇನ್ ವೇಸಿವ್ ಸರ್ಜರಿ (ಕೀಹೋಲ್) ಮೂಲಕ ಹಾನಿಗೊಳಗಾದ ಕಾರ್ಟಿಲೆಜ್ ಗೆ ಚಿಕಿತ್ಸೆ ನೀಡಲು ನಿರ್ಧರಿಸಿದರು. ಇದರಿಂದ ಒಂದೇ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಗಾಯಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಶಸ್ತ್ರಚಿಕಿತ್ಸೆಗೆ ಒಳಪಟ್ಟ ಕ್ರೀಡಾಪಟು ಅಜಯ್‌ ಹೇಳಿದರು.
For More Information: Dr. Shanthakumar Muruda, M: 98450 74531

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಬೆಂಗಳೂರು
Share215Tweet124Send
Previous Post

ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಭದ್ರಾವತಿಯ ರಮಾಕಾಂತ್ ಪುಟ್ಟಣ್ಣರಿಗೆ ಸನ್ಮಾನ

Next Post

ನಮ್ಮೊಳಗಿನ ಅಮ್ಮನ ಅನುಭೂತಿಯ ಮೂರ್ತರೂಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮೊಳಗಿನ ಅಮ್ಮನ ಅನುಭೂತಿಯ ಮೂರ್ತರೂಪ

ನಮ್ಮೊಳಗಿನ ಅಮ್ಮನ ಅನುಭೂತಿಯ ಮೂರ್ತರೂಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL