ಕಲ್ಪ ಮೀಡಿಯಾ ಹೌಸ್
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಮತಕ್ಷೇತ್ರ ಹಿರೆಕೆರೂರು ಸರ್ಕಾರಿ ಆಸ್ಪತ್ರೆಗೆ ತೆರಳಿ ಎರಡನೇ ಕೋವಿಡ್ ಹಂತದ ಲಸಿಕೆಯನ್ನು ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕೊರೊನಾವೈರಸ್ ಲಸಿಕೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರವು ಗೆಜೆಟೆಡ್ ರಜಾದಿನಗಳನ್ನು ಒಳಗೊಂಡಂತೆ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಲಯದ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಏಪ್ರಿಲ್ ಪೂರ್ತಿ ಕಾರ್ಯನಿರ್ವಹಿಸಲು ನಿರ್ಧರಿಸಿದೆ ಎಂದರು.
ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ಪತ್ರ ಬರೆದಿದ್ದು, ಲಸಿಕೆ ನೀಡುವ ವೇಗ ಮತ್ತು ವ್ಯಾಪ್ತಿಯಲ್ಲಿ ತ್ವರಿತ ಹೆಚ್ಚಳ ಮಾಡಲು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಎಲ್ಲಾ ಲಸಿಕಾ ಕೇಂದ್ರಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡುವಂತೆ ಕೇಳಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆಯುವಂತೆ ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post