ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣ #Renukaswamy Murder Case ಆರೋಪದ ಮೇರೆಗೆ ಜೈಲಿನಲ್ಲಿರುವ ನಟ ದರ್ಶನ್ಗೆ #Darshan ಆರೋಗ್ಯ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ವರದಿ ಆಗಿದೆ.
ಕಳೆದ ಒಂದು ವಾರದಿಂದ ಬೆನ್ನು ನೋವು ಹೆಚ್ಚಾಗಿದ್ದು, ಕುಂಟುತ್ತಲೇ ನಡೆಯುತ್ತಿರುವ ಹಿನ್ನೆಲೆ ಚಿಕಿತ್ಸೆ ಕೊಡಿಸಿ ಎಂಬ ದರ್ಶನ್ ಮನವಿ ಮೇರೆಗೆ ಸಿವಿ ರಾಮನ್ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಜೈಲಧಿಕಾರಿಗಳು ಪತ್ರ ಬರೆದಿದ್ದರು. ತಪಾಸಣೆ ವೇಳೆ ಫಿಜಿಯೋಥೆರಫಿ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಸದ್ಯ ವಾರಕ್ಕೆ ಎರಡು ಬಾರಿ ಮಾತ್ರ ಫಿಸಿಯೋ ಥೆರಪಿ ಮಾಡಲು ವೈದ್ಯರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post