No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏ.1ರಂದು ರಾಜ್ಯಕ್ಕೆ ಅಮಿತ್ ಷಾ : ಯಶಸ್ವಿನಿ, ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ – ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2022
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಏಪ್ರಿಲ್ 01 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ Central Minister Amith Shah ಅವರು ಭೇಟಿ ನೀಡಲಿದ್ದು ಯಶಸ್ವಿನಿ ಹಾಗೂ ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ ನೀಡುವರು ಎಂದು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಈ ಕುರಿತು ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ವರು ಬೆಂಗಳೂರು, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಗೆ ಪ್ರವಾಸ ಕೈಗೊಳ್ಳಲಿದ್ದು, ಮಾರ್ಚ್ 31 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರ ಪ್ರವಾಸ ಏಪ್ರಿಲ್1 ರಂದು ಬೆಳಿಗ್ಗೆ 10.30 ಕ್ಕೆ ತುಮಕೂರಿನ ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭೋಜನದ ನಂತರ ಮಧ್ಯಾಹ್ನ 2.00 ಗಂಟೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೆನಹಳ್ಳಿಯ ವೈದ್ಯಕೀಯ ಕಾಲೇಜಿನ ಭೂಮಿ ಪೂಜೆ ನೆರವೇರಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ 3.30 ಕ್ಕೆ ಬೆಂಗಳೂರಿನ ಅರಮನೆಯ ಸಭಾಂಗಣದಲ್ಲಿ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಿ ನೂತನ ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿನ ಲೋಗೋ ಬಿಡುಗಡೆ ಮಾಡಲಿದ್ದಾರೆ. ಪುನರ್ ಪ್ರಾರಂಭಿಸಲಾಗಿರುವ ಯಶಸ್ವಿನಿ ಯೋಜನೆಯ ಲಾಂಛನ ಬಿಡುಗಡೆ ಮಾಡುವರು.ಅಂದು ಸಂಜೆ 7.00 ಗಂಟೆಗೆ ಪಕ್ಷದ ಕೋರ್ ಸಮಿತಿ ಸಭೆಯಲ್ಲಿ ಭಾಗವಹಿಸುವರು ಎಂದು ವಿವರಿಸಿದರು.

ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆ:
ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಸರ್ಕಾರಿ ಆದೇಶವನ್ನು ಸಹ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಾಲು ಉತ್ಪಾದನೆ ಹಾಗೂ ಇತರೆ ಚಟುವಟಿಕೆಗಳಿಗೆ ಒಂದು ಆರ್ಥಿಕ ಸಂಸ್ಥೆ ಇರಬೇಕು ಎನ್ನುವ ಬೇಡಿಕೆ ಮತ್ತು ಅವಶ್ಯಕತೆಯನ್ನು ಮನಗಂಡು ನಾವು 100 ಕೋಟಿ ರೂ.ಗಳ ಬಂಡವಾಳ ನೀಡಲಿದ್ದು ಒಕ್ಕೂಟ ಗಳು ಸೇರಿ 260 ಕೋಟಿ ರೂ.ಗಳ ಷೇರು ಬಂಡವಾಳ ಹಾಕಿ ಆರ್ಥಿಕ ಸಂಸ್ಥೆಯನ್ನು ದೇಶದಲ್ಲಿಯೇ ಮೊದಲ ಬಾರಿ ಪ್ರಾರಂಭ ಮಾಡುತ್ತಿದ್ದೇವೆ ಎಂದರು. ಹಾಲು ಉತ್ಪಾದನೆ ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆಯಲ್ಲಿ ರಾಜ್ಯ ಈಗಾಗಲೇ ಮುಂಚೂಣಿಯಲ್ಲಿದ್ದು, ಇದಕ್ಕೆ ಇನ್ನಷ್ಟು ಬಲ ನೀಡಿದಂತಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಆದಾಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಒಟ್ಟು 26 ಲಕ್ಷ ಹಾಲು ಉತ್ಪಾದಕ ಸದಸ್ಯರಿದ್ದಾರೆ. 14900 ಹಾಲು ಉತ್ಪಾದಕ ಸಹಕಾರಿ ಸಂಘಗಳಿವೆ. 15 ಹಾಲು ಒಕ್ಕೂಟಗಳು ಈಗಾಗಲೇ ಕೆಲಸ ಮಾಡುತ್ತಿವೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ರೈತರು ಸಮಗ್ರ ಕೃಷಿ ಮತ್ತು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಪ್ರಾರಂಭಿಸಿದೆ. ಅದರ ಉದ್ದೇಶದಂತೆ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಯ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಯನ್ನಿಟ್ಟಿದ್ದೇವೆ. ಬರುವ ದಿನಗಳಲ್ಲಿ ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಇದು ದೊಡ್ಡ ಪ್ರಮಾಣದ ಆರ್ಥಿಕ ಸಂಸ್ಥೆಯಾಗಿ ಬೆಳೆಯಲಿದೆ ಎಂದರು.

ಯಶಸ್ವಿನಿ ಯೋಜನೆ:
ಯಶಸ್ವಿನಿ ಯೋಜನೆ ಸಹ ಕೆಲವು ಮಾರ್ಪಾಡುಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ಯಶಸ್ವಿನಿ ಯೋಜನೆ ಯಾವ ರೀತಿ ನಡೆಯಬೇಕು ಎಂದು 2-3 ವಾರಗಳಲ್ಲಿ ತೀರ್ಮಾನಿಸಲಾಗುವುದು. ರೈತರಿಗೆ ಆರೋಗ್ಯದಲ್ಲಿ ಬಹಳಷ್ಟು ಸಮಸ್ಯೆ ಎದುರಿಸುತ್ತಾರೆ. ಅವರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ, ಬಜೆಟ್ ನಲ್ಲಿ 300 ಕೋಟಿ ರೂ.ಗಳನ್ನು ಒಅಡಗಿಸಲಾಗಿದೆ. ಈ ಯೋಜನೆಯ ಕಾರ್ಯಾದೇಶವನ್ನು ಈಗಾಗಲೇ ಹೊರಡಿಸಲಾಗಿದೆ. ಇದಕ್ಕೆ ಏಪ್ರಿಲ್ 01 ರಂದು ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ಅವರು ನೆರವೇರಿಸಲಿದ್ದಾರೆ. ಪ್ರಥಮ ಬಾರಿಗೆ ಕೃಷಿ ಇಲಾಖೆಯಲ್ಲಿದ್ದ ಸಹಕಾರಿ ಇಲಾಖೆಯನ್ನು ಪ್ರಧಾನಮಂತ್ರಿಗಳು ಪ್ರತ್ಯೇಕ ಮಾಡಿದ್ದಾರೆ. ಹಲವಾರು ಆಮೂಲಾಗ್ರ ಬದಲಾವಣೆ ಬರುವ ದಿನಗಳಲ್ಲಿ ಸಹಕಾರಿ ರಂಗದಲ್ಲಿ ಆಗಲಿದೆ. ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಲು ಅವಕಾಶಗಳು ದೊರೆಯಲಿವೆ ಎಂದರು. ಅಮಿತ್ ಷಾ ಅವರು ಸಹಕಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಹಕಾರಿ ರಂಗಕ್ಕೆ ಉತ್ತಮ ಸಂದೇಶ ದೂರೆಯಲಿದೆ ಎಂಬ ಆಶಯ ನಮ್ಮದು ಎಂದರು.

Also read: ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್

ಒಟ್ಟು ಯೋಜನೆಯನ್ನು ಸಹಕಾರಿ ಸೊಸೈಟಿ ಮುಖಾಂತರ ಅನುಷ್ಠಾನ ಮಾಡಲಾಗುವುದು. ಕೆಲವು ಮಾರ್ಪಾಡು ಮಾಡಬೇಕಾಗುತ್ತದೆ. ಮೊದಲು ಯಶಸ್ವಿನಿ ಯೋಜನೆ ಇದ್ದಾಗ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಇರಲಿಲ್ಲ. ಅವುಗಳು ಬಂದ ಮೇಲೆ ರೈತರಿಗೆ ನಿರ್ದಿಷ್ಟವಾಗಿ ಇರಬೇಕೆಂದು ಮಾರ್ಪಾಡು ಮಾಡಲಾಗುವುದು ಆ ಸಂದರ್ಭದಲ್ಲಿ ನಗರ ಪ್ರದೇಶಗಳ ಸಹಕಾರಿ ಸೊಸೈಟಿಗಳ ಬಗ್ಗೆಯೂ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದರು.

ಕಾರ್ಯಾದೇಶ:
ಬಜೆಟ್ ಮಂಡನೆಯಾದ ಒಂದು ಎರಡು ತಿಂಗಳ ನಂತರ ಆರ್ಥಿಕ ಇಲಾಖೆಗೆ ಕಳುಹಿಸಿ ವಾಪಸ್ಸು ಬರುವಾಗ ತಡವಾಗುತ್ತಿತ್ತು. ಅನುಷ್ಠಾನ ಸೆಪ್ಟೆಂಬರ್ ಆಕ್ಟೊಬರ್ ನಲ್ಲಿ ಆಗುತ್ತಿತ್ತು. ಅದು ಬದಲಾವಣೆ ಆಗಬೇಕೆಂದು ತೀರ್ಮಾನಿಸಿ ಈಗಾಗಲೇ ಈ ತಿಂಗಳ ಕೊನೆಯಲ್ಲಿ ಪ್ರಸ್ತಾವನೆಗಳು ತಯಾರಿವೆ.ಮುಖ್ಯ ಕಾರ್ಯದರ್ಶಿಗಳು 3-4 ಸಭೆಗಳನ್ನು ನಡೆಸಿದ್ದಾರೆ. ಮುಂದುವರೆದ ಯೋಜನೆಗಳ ಆದೇಶಗಳನ್ನು ಇಲಾಖೆಯವರೆ ನೀಡುತ್ತಾರೆ. ಹೊಸ ಯೋಜನೆಗಳಿಗೆ ಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಒಂದೇ ಸಭೆಯಲ್ಲಿ ಎಲ್ಲಾ ಅನುಮೋದನೆಗಳನ್ನು ನೀಡಿ ಬಹುತೇಕವಾಗಿ ಏಪ್ರಿಲ್ ಮೊದಲ ವಾರದಲ್ಲಿ ಕೆಲವನ್ನು ಎರಡನೇ ವಾರದಲ್ಲಿ ಆರ್ಥಿಕ ಇಲಾಖೆ ಅನುಮೋದನೆಯೊಂದಿಗೆ ಆದೇಶಗಳು ಹೊರಬೀಳಲಿವೆ ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCentral Minister Amith ShahCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಕೇಂದ್ರ ಗೃಹ ಸಚಿವ ಅಮಿತ್ ಷಾಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್

Next Post

ಗಮನಿಸಿ! ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಹಿನ್ನೆಲೆ ಶಿವಮೊಗ್ಗ-ಭದ್ರಾವತಿ ಸಂಚಾರ ಮಾರ್ಗ ಬದಲಾವಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಹಿನ್ನೆಲೆ ಶಿವಮೊಗ್ಗ-ಭದ್ರಾವತಿ ಸಂಚಾರ ಮಾರ್ಗ ಬದಲಾವಣೆ

ಗಮನಿಸಿ! ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಹಿನ್ನೆಲೆ ಶಿವಮೊಗ್ಗ-ಭದ್ರಾವತಿ ಸಂಚಾರ ಮಾರ್ಗ ಬದಲಾವಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL