ಬೆಂಗಳೂರು: ಪಶ್ಚಿಮಘಟ್ಟ ಕಸ್ತೂರಿ ರಂಗನ್ ವರದಿ ಅನುಷ್ಠಾನದಲ್ಲಿನ ಬದಲಾವಣೆ ಕುರಿತು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂದೀಪ್ ದವೆ ಅವರನ್ನು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಬೇಟಿ ಮಾಡಿ ಮಾಹಿತಿ ಪಡೆದು ರಾಜ್ಯ ಸರ್ಕಾರದಿಂದ ಕಸ್ತೂರಿ ರಂಗನ್ ವರದಿಯಲ್ಲಿನ ಮಾರ್ಪಾಡು ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಮನವಿ ಮಾಡಿದರು. ಮಾಹಿತಿ ನೀಡಿದ ಸಂದೀಪ್ ದವೆ ಕಸ್ತೂರಿ ರಂಗನ್ ವರದಿ ಮಾರ್ಪಾಡು ಹಾಗೂ ಹಸಿರು ನ್ಯಾಯಾದೀಕರಣ ಕುರಿತು ಕೇಂದ್ರ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವರಿಗೆ ಪತ್ರ ಬರೆದಿರುವ ಹಿನ್ನಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಇದ್ದ ಹಸಿರು ನ್ಯಾಯಾದೀಕರಣ ಅಂತಿಮ ತೀರ್ಪುನ್ನು ಜೂನ್ 31ಕ್ಕೆ ಮುಂದೂಡಲಾಗಿದೆ. ಇದರಿಂದ ವರದಿಯಲ್ಲಿನ ಅಂಶಗಳ ಮಾರ್ಪಾಡುಗೆ ರಾಜ್ಯ ಸರ್ಕಾರದಿಂದ ಕೈ ಗೊಳ್ಳುವ ಪ್ರಕ್ರಿಯೆಗೆ ಕಾಲಾವಕಾಶ ಸಿಕ್ಕಾತ್ತಾಗುತ್ತದೆ. ಸಂಬಂಧ ಪಟ್ಟ ಕೇಂದ್ರ ಸಚಿವರು ಚುನಾವಣಾ ಪ್ರವಾಸದಲ್ಲಿದ್ದು, ಇದು ಮುಗಿದ ಬಳಿಕ ರಾಜ್ಯಕ್ಕೆ ಬೇಟಿ ನೀಡಲಿದ್ದು ಆ ಸಂದರ್ಭದಲ್ಲಿ ಚರ್ಚೆ ನಡೆಸುವುದಾಗಿ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವೇ ಈ ವರದಿ ಕುರಿತು ನ್ಯಾಯಾಲಯ, ಪ್ರಾಧಿಕಾರದಲ್ಲಿ ಪ್ರಶ್ನಿಸುವ ಅಧಿಕಾರ ಇದೆ ಆದರೆ ರಾಜ್ಯ ಸರ್ಕಾರ ಕೇವಲ ಇದಕ್ಕೆ ಸಂಬಂಧಿಸಿದಂತೆ ಕೆಲ ಅಂಶಗಳನ್ನು ಫೀಡ್ ಮಾಡಬಹುದಾಗಿದೆ ಎಂದು ಹೇಳಿದರು. ಡಿಸೆಂಬರ್ ಅಂತ್ಯದಲ್ಲಿದ್ದ ಹಸಿರು ನ್ಯಾಯಾಧೀಕರಣ ಅಂತಿಮ ತೀರ್ಪನ್ನು ಜೂನ್ 31ರವರೆಗೆ ಮುಂದೂಡಿರುವುದರಿಂದ ರಾಜ್ಯ ಸರ್ಕಾರದಿಂದ ವರದಿಯಲ್ಲಿನ ಅಂಶಗಳ ಬದಲಾವಣೆ ಬಗ್ಗೆ ಕೈಗೊಳ್ಳಬೇಕಾದ ಪ್ರಕ್ರಿಯೆಗೆ ಕಾಲಾವಕಾಶ ಸಿಕ್ಕತಾಗಿದೆ. ಜೊತೆಗೆ ಮುಖ್ಯಮಂತ್ರಿ ಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಸ್ತೂರಿ ರಂಗನ್ ವರದಿ ಕುರಿತು ಮಲೆನಾಡು ಸೇರಿದಂತೆ ಕೆಲ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಗಳನ್ನು ಮತ್ತೋಮ್ಮೆ ಬೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post