No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರತಿಭೆಯನ್ನು ಗೌರವಿಸುವುದು ಇನ್ನಷ್ಟು ಸಾಧನೆಗಳಿಗೆ ಪ್ರೇರಣೆ: ಡಾ. ಪಾದೇಕಲ್ಲು ವಿಷ್ಣುಭಟ್

ಅಖಿಲ ಹವ್ಯಕ ಮಹಾಸಭೆಯ 81 ನೆಯ ವರ್ಷದ ಸಂಸ್ಥಾಪನೋತ್ಸವ | ಸಾಧಕರಿಗೆ ವಾರ್ಷಿಕ ವಿಶೇಷ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2024
in ಬೆಂಗಳೂರು ನಗರ
0
ಪ್ರತಿಭೆಯನ್ನು ಗೌರವಿಸುವುದು ಇನ್ನಷ್ಟು ಸಾಧನೆಗಳಿಗೆ ಪ್ರೇರಣೆ: ಡಾ. ಪಾದೇಕಲ್ಲು ವಿಷ್ಣುಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಮ್ಮಲ್ಲಿರುವ ಜ್ಞಾನವನ್ನು ಹಂಚುವುದರ ಮೂಲಕ ಸಮಾಜಕ್ಕೆ ನಾವು ಉಪಕಾರಿಯಾಗಬೇಕು. ನಮ್ಮ ಸಾಧನೆಯ ಜೊತೆಜೊತೆಗೆ ನಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಜ್ಞಾನವನ್ನು ನಾವು ಹಂಚಬೇಕು ಹಾಗೂ ನಮ್ಮ ಅನುಭವಗಳನ್ನು ನಾವು ದಾಖಲಿಸಬೇಕು ಎಂದು ಡಾ. ಪಾದೇಕಲ್ಲು ವಿಷ್ಣುಭಟ್ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆದ 81 ನೇ ವರ್ಷದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಸಂಸ್ಥಾಪನೋತ್ಸವ ಹಾಗೂ ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ ಹಿರಿಯ ವಿದ್ವಾಂಸ ಹಾಗೂ ಭಾಷಾಶಾಸ್ತ್ರಜ್ಞರಾದ ಡಾ. ಪಾದೇಕಲ್ಲು ವಿಷ್ಣುಭಟ್ , ಹವ್ಯಕ ಮಹಾಸಭೆ ಸಾಧಕರನ್ನು ಸನ್ಮಾನಿಸುತ್ತಿರುವುದು ಈ ಸಾಧಕ ನಮ್ಮವ ಎಂದು ಸಮಾಜಕ್ಕೆ ಪರಿಚಯಿಸುವ ಕಾರ್ಯ. ಪ್ರತಿಭೆಯನ್ನು ಗೌರವಿಸುವುದು ಇನ್ನಷ್ಟು ಸಾಧನೆಗಳಿಗೆ ಪ್ರೇರಣೆಯಾಗಲಿದೆ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಾವೆಲ್ಲ ಮಹಾಸಭೆಯ ಜೊತೆಯಾಗೋಣ ಎಂದರು.
ಸಿಐಡಿ ಪೋಲೀಸ್ ಅಧೀಕ್ಷಕ ರಾಘವೇಂದ್ರ ಹೆಗಡೆ ಮುಖ್ಯ ಅಭ್ಯಾಗತರಾಗಿ ಮಾತನಾಡಿ, ಪ್ರಶಸ್ತಿ ಪುರಸ್ಕಾರದಿಂದ ಸಾಧನೆಗೆ ಗೌರವ ಸಲ್ಲಿಸಲ್ಪಟ್ಟರೆ, ಇನ್ನುಳಿದವರಿಗೆ ಅವರ ಸಾಧನೆಯೇ ಪ್ರೇರಣೆಯಾಗಲು ಸಾಧ್ಯ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು. ಸಮಾಜದ ಉನ್ನತಿ ಇನ್ನಷ್ಟು ಸಾಧ್ಯವಾಗಲಿ ಎಂದರು.

ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ ಮಾತನಾಡಿ, ಹವ್ಯಕ ಸಮಾಜ ಯಾವುದೋ ಘರ್ಷಣೆ ಇತ್ಯಾದಿಗಳ ಕಾರಣದಿಂದ ಹುಟ್ಟುಕೊಂಡಿದ್ದಲ್ಲ. ಲೋಕಕಲ್ಯಾಣದ ಕಾರಣಕ್ಕಾಗಿಯೇ ಹುಟ್ಟಿಕೊಂಡವರು ಹವ್ಯಕರು. ಸ್ವಾತಂತ್ರ್ಯ ಪೂರ್ವದಲ್ಲೇ ಸಂಘಟಿತರಾಗಿ ಈ ಮಹಾಸಭೆಯನ್ನು ಹವ್ಯಕರು ಸಂಘಟಿಸದರು ಎಂದರೆ ನಮ್ಮ ಸಮಾಜದ ಮುಂದಾಲೋಚನೆಯನ್ನು ಗುರುತಿಸಲು ಸಾಧ್ಯ. ಹವ್ಯಕ ಮಹಾಸಭೆಯು 81 ನೇ ಸಂಸ್ಥಾಪನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇಷ್ಟು ವರ್ಷಗಳಲ್ಲಿ ಮಹಾಸಭೆ ಎಷ್ಟು ಆಸ್ತಿಯನ್ನುಗಳಿಸಿದೆ ಎಂದು ಆಲೋಚಿಸುವುದಕ್ಕಿಂತ, ಪ್ರತಿಭಾವಂತ ಹವ್ಯಕ ಸಮಾಜವೇ ಮಹಾಸಭೆಯ ಆಸ್ತಿ ಎಂದು ಅಭಿಪ್ರಾಯ ಪಟ್ಟರು.
2018 ರಲ್ಲಿ ಎರಡನೇ ವಿಶ್ವಹವ್ಯಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಅದಕ್ಕೆ ನಾಡಿನಾದ್ಯಂತ ಅಭೂತಪೂರ್ವ ಪ್ರತಿಸ್ಪಂದನೆ ವ್ಯಕ್ತವಾಗಿತ್ತು. ಇದೀಗ ಈ ವರ್ಷ ಡಿಸೆಂಬರ್ 27,28,29 ರಂದು 3ನೆಯ ವಿಶ್ವಹವ್ಯಕ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಹತ್ತಾರು ಸಮಾವೇಶಗಳು ನಡೆಯಲಿದ್ದು, ಇದು ಎಲ್ಲಾ ಸಮಾಜದವರಿಗೂ ಮುಕ್ತವಾಗಿರಲಿದೆ. ಇದು ಜಾತಿಯ ಸಮಾವೇಶವಾಗದೇ, ಹವ್ಯಕ ಸಮಾಜವನ್ನು ಸಮಷ್ಟಿ ಸಮಾಜಕ್ಕೆ ಪರಿಚಯಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದರು.

Also read: ತೀರ್ಥಹಳ್ಳಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

ಹವ್ಯಕ ವಿಭೂಷಣ ಪ್ರಶಸ್ತಿ ಸ್ವೀಕರಿಸಿ ಹೆಚ್.ಎಂ ತಿಮ್ಮಪ್ಪ ಕಲಸಿ ಮಾತನಾಡಿ, ನಮ್ಮವರು ನಮಗೆ ಕೊಡುವ ಪ್ರಶಸ್ತಿ ಅವಿಸ್ಮರಣೀಯವಾದುದು. ನೈಜವಾಗಿ ನೋಡಿದರೆ ನಾವು ಅಲ್ಪಸಂಖ್ಯಾತರಾಗಿದ್ದೇವೆ. ಆದರೆ ನಮಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುತ್ತಿಲ್ಲ. ಆದರೆ ನಮ್ಮಲ್ಲಿರುವ ಪ್ರತಿಭೆಯಿಂದ ನಾವು ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದೇವೆ ಎಂದರು.

ಹವ್ಯಕರನ್ನು ಮಯೂರ ವರ್ಮ ಉತ್ತರದ ಅಹಿಚ್ಛತ್ರದಿಂದ ಕರೆದುಕೊಂಡು ಬಂದ ಎಂಬುದು ನಿಜವಾದರೂ, ಹವ್ಯಕರು ಮೂಲತಃ ಈ ನಾಡಿನವರು. ಕಾರಣಾಂತರಗಳಿಂದ ಇಲ್ಲಿಂದ ಉತ್ತರ ಭಾರತಕ್ಕೆ ವಲಸೆ ಹೋಗಿದ್ದರು. ಮಯೂರವರ್ಮ ಮತ್ತೆ ನಮ್ಮ ಈ ಮಣ್ಣಿಗೆ ಕರೆತಂದ ಎಂದು ಹವ್ಯಕರ ಇತಿಹಾಸದ ಕುರಿತಾಗಿ ಹೇಳಿದರು.

ಹವ್ಯಕ ಭೂಷಣ ಪ್ರಶಸ್ತಿ ಸ್ವೀಕರಿಸಿ ಗಣೇಶ್ ಎಲ್ ಭಟ್ ಮಾತನಾಡಿ, ಅಯೋಧ್ಯೆಯ ರಾಮಲಲಾ ಮೂರ್ತಿಯನ್ನು ಕೆತ್ತುವಾಗಿನ ಕುರಿತಾದ ಅನುಭವವನ್ನು ಹಂಚಿಕೊಂಡ ಇವರು, ಹವ್ಯಕರು ಮೂರ್ತಿ ಪೂಜಕರು. ನಾವು ಶಿಲ್ಪಶಾಸ್ತ್ರದ ಕುರಿತಾಗಿಯೂ ಬಲ್ಲವರಾದರೆ ಇನ್ನೂ ಹೆಚ್ಚಿನ ಅಧ್ಯಾತ್ಮ ಸಾಧನೆ ಸಾಧ್ಯ ಎಂದರು.
ಪರಿಸರ ತಜ್ಞ ಶಿವಾನಂದ ಕಳವೆ ಮಾತನಾಡಿ, ಹವ್ಯಕ ಸಮಾಜ ಪರಿಸರ ತಜ್ಞ ಸಮಾಜವಾಗಿದೆ. ಪರಿಸರದ ಸೂಕ್ಷ್ಮಗಳನ್ನು ಗಮನಿಸಿ; ಅಭ್ಯಸಿಸಿ ಅಲ್ಲಿ ಕೃಷಿಯನ್ನು ಕಟ್ಟಿಬೆಳಸಿದ ಹೆಮ್ಮೆ ಹವ್ಯಕ ಸಮಾಜದ್ದು. ನಮ್ಮ ಹಿರಿಯರು ಕಾಡಿನ ಹಾಗೂ ಕಾಡಿನ ಉತ್ಪನ್ನಗಳ ಕುರಿತಾದ ಆಂತರಿಕ ಜ್ಞಾನ ಹೊಂದಿದ ಕೃಷಿ ವಿಜ್ಞಾನಿಗಳು ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮೊದಲು, ಹವ್ಯಕ ವಿಭೂಷಣ, ಹವ್ಯಕ ಭೂಷಣ, ಹವ್ಯಕ ಶ್ರೀ ಹಾಗೂ ಹವ್ಯಕ ಸೇವಾಶ್ರೀ ಪ್ರಶಸ್ತಿಯನ್ನು ಆಯ್ಕೆಯಾದ ಸಾಧಕರಿಗೆ ನೀಡಿ ಮಹಾಸಭೆಯ ಗೌರವ ಸಲ್ಲಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 13 ಜನರಿಗೆ ಪಲ್ಲವಪುರಸ್ಕಾರ ನೀಡಿ ಗೌರವಿಸಲಾಯಿತು.
Kalahamsa Infotech private limitedಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಆರ್ ಎಂ ಹೆಗಡೆ ಬಾಳೇಸರ, ಶ್ರೀಧರ ಜೆ ಭಟ್ಟ ಕೆಕ್ಕಾರು, ಕೋಸಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕಾರ್ಯಕ್ರಮದ ಸಂಚಾಲಕರಾದ ರವಿನಾರಾಯಣ ಪಟ್ಟಾಜೆ, ಮುಗಲೋಡಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಕುಮಾರಿ ತುಳಸಿ ಹೆಗಡೆ ಅವರಿಂದ ನಡೆದ ಯಕ್ಷನೃತ್ಯ ರೂಪ ಸಭಾಸದರ ಮೆಚ್ಚುಗೆಗೆ ಪಾತ್ರವಾಯಿತು.

ಪ್ರಶಸ್ತಿ ಪುರಸ್ಕೃತರು:

ಹವ್ಯಕ ವಿಭೂಷಣ

  • ಹೆಚ್. ಎಂ. ತಿಮ್ಮಪ್ಪ ಕಲಸಿ – ಸಾಹಿತ್ಯ

ಹವ್ಯಕ ಭೂಷಣ

  • ಗಣೇಶ್ ಎಲ್ ಭಟ್ – ಶಿಲ್ಪಶಾಸ್ತ್ರ
  • ಶಿವಾನಂದ ಕಳವೆ – ಪರಿಸರ
  • ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ – ಯೋಗ

ಹವ್ಯಕ ಶ್ರೀ

  • ಗಿರಿಧರ್ ದಿವಾನ್ – ಛಾಯಾಗ್ರಹಣ, ಸಂಗೀತ ನಿರ್ದೇಶನ
  • ಗಣೇಶ್ ದೇಸಾಯಿ – ಸಂಗೀತ
  • ಮಂಗಳ ಬಾಲಚಂದ್ರ – ಕಥಾಕೀರ್ತನಕಾರರು

ಹವ್ಯಕ ಸೇವಾಶ್ರೀ

  • ಶ್ರೀಕಾಂತ ಹೆಗಡೆ ಅಂತ್ರವಳ್ಳಿ, ವಿಶ್ರಾಂತ ಸಂಪಾದಕರು ‘ಹವ್ಯಕ’ ಪತ್ರಿಕೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

    

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಹವ್ಯಕ
Share200Tweet123Send
Previous Post

ತೀರ್ಥಹಳ್ಳಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

Next Post

ಅಮಿತ್ ಶಾ ಬುಲಾವ್ | ನಾಳೆ ದೆಹಲಿಗೆ ಈಶ್ವರಪ್ಪ | ಕುತೂಹಲ ಘಟ್ಟಕ್ಕೆ ಬೆಳವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮಿತ್ ಶಾ ಬುಲಾವ್ | ನಾಳೆ ದೆಹಲಿಗೆ ಈಶ್ವರಪ್ಪ | ಕುತೂಹಲ ಘಟ್ಟಕ್ಕೆ ಬೆಳವಣಿಗೆ

ಅಮಿತ್ ಶಾ ಬುಲಾವ್ | ನಾಳೆ ದೆಹಲಿಗೆ ಈಶ್ವರಪ್ಪ | ಕುತೂಹಲ ಘಟ್ಟಕ್ಕೆ ಬೆಳವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL