Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅ.6 | ಬೆಂಗಳೂರು | ಸೋಸಲೆ ವ್ಯಾಸರಾಜರ ಸಂಸ್ಥಾನದಲ್ಲಿ ಅಪ್ರಮೇಯನ ಗಾಯನ

ಅ.6 ರಂದು ಆಯೋಜನೆ | ಬೆಂಗಳೂರಿನ ಗಾಂಧಿ ಬಜಾರ್ ಬೆಣ್ಣೆ ಗೋವಿಂದಪ್ಪ ಛತ್ರದಲ್ಲಿ ಕಛೇರಿ

October 5, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶರನ್ನವರಾತ್ರಿ ಅಂಗವಾಗಿ ಬೆಂಗಳೂರಿನ ಗಾಂಧಿ ಬಜಾರಿನ ಬೆಣ್ಣೆ ಗೋವಿಂದಪ್ಪ ಛತ್ರದಲ್ಲಿರುವ ಶ್ರೀ ಸೋಸಲೆ #Sosale ವ್ಯಾಸರಾಜರ ಮಹಾ ಸಂಸ್ಥಾನ ಮಠದಲ್ಲಿ ಹಮ್ಮಿಕೊಂಡಿರುವ ಸಂಗೀತೋತ್ಸವದಲ್ಲಿ ಅ. 6ರ ಸಂಜೆ 6ಕ್ಕೆ ಮೈಸೂರಿನ #Mysore ಯುವ ಪ್ರತಿಭೆ ಎ.ಆರ್. ಅಪ್ರಮೇಯ ಅವರ ಗಾಯನ ಆಯೋಜನೆಗೊಂಡಿದೆ.

ಈ ಸಂದರ್ಭದಲ್ಲಿ ಅವರು ದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಪಕ್ಕವಾದ್ಯದಲ್ಲಿ ಎಚ್.ಎನ್. ರಘುನಂದನ (ವಯೋಲಿನ್) ಮತ್ತು ಕುಮಾರಿ ಜ್ಯೋತ್ಸ್ನಾ ಹೆಬ್ಬಾರ್ (ಮೃದಂಗ) ಸಹಕಾರ ನೀಡಲಿದ್ದಾರೆ.

ಯುವ-ನವ ಕಲಾವಿದರ ಪರಿಚಯ
ನಾಡಿನ ಮಹತ್ವದ ಗಾಯಕರಲ್ಲಿ ಅಗ್ರಪಂಕ್ತಿಯಲ್ಲಿರುವ ಶಿವಮೊಗ್ಗದ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ ಅವರ ವಿದ್ಯಾರ್ಥಿ ಅಪ್ರಮೇಯ.

ಹಾಡುಗಾರಿಕೆಯನ್ನು ಅನನ್ಯ ಭಾವದಿಂದ ಸ್ವೀಕರಿಸಿದ ಯುವಕ. ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದಲ್ಲಿ ಶಾಸ್ತ್ರೀಯ ಸಂಗೀತ ಸೀನಿಯರ್ ಹಂತದ ಕಲಿಕೆಯಲ್ಲಿ ಇದ್ದಾರೆ. ಶೃಂಗೇರಿ #Sringeri ಎಚ್.ಎಸ್. ನಾಗರಾಜ್‌ರ ಗರಡಿಯಲ್ಲಿ ವಿದುಷಿ ಗಾಯತ್ರಿ ಮಯ್ಯ ಮತ್ತು ವಿದುಷಿ ರಜನಿ ರಾಮಧ್ಯಾನಿ ಅವರ ಮಾರ್ಗದರ್ಶನವೂ ಇವರಿಗೆ ಪ್ರಾಪ್ತವಾಗಿದೆ.
ಜಿಲ್ಲಾ ಹಾಗೂ ರಾಜ್ಯ ಮಟ್ಟದ ಗಾಯನ ಸ್ಪರ್ಧೆಗಳಲ್ಲಿ ಅನೇಕ ಬಹುಮಾನಗಳು ದೊರೆಕಿವೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ, ಕೇಂದ್ರೀಯ ವಿದ್ಯಾಲಯ ಸಂಘಟನ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ‘ಕಲಾ ಉತ್ಸವ್’ ಸ್ಪರ್ಧೆಯಲ್ಲಿ ಎರಡು ಬಾರಿ ದಕ್ಷಿಣ ಭಾರತವನ್ನು (ಕರ್ನಾಟಕ ಶಾಸ್ತ್ರೀಯ ಸಂಗೀತ) #CarnaticMusic ಗಾಯನದಲ್ಲಿ ಪ್ರತಿನಿಧಿಸಿದ ಹೆಗ್ಗಳಿಕೆ ಇದೆ.

ಶಿವಮೊಗ್ಗ ಮೂಲದ, ಸದ್ಯ ಮೈಸೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ರಘುರಾಮ-ವಾರುಣಿ ಅವರ ಪುತ್ರ. ದಾಸರ ಕೀರ್ತನೆಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಈತ ಸೋಸಲೆ ಮಠಾಧೀಶರಾದ ಶ್ರೀವಿದ್ಯಾಶ್ರೀಶ ತೀರ್ಥರ ಕೃಪೆಗೆ ಪಾತ್ರನಾಗಿ, ಶರನ್ನವರಾತ್ರಿ ಸರಣಿ ಸಂಗೀತೋತ್ಸವದಲ್ಲಿ ಹಾಡುತ್ತಿರುವುದು ಧನ್ಯತೆಯ ಪ್ರತೀಕವಾಗಿದೆ.

Also read: ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

ಜ್ಯೋತ್ಸ್ನಾ ಹೆಬ್ಬಾರ್
ಚೇತನ್ ರಾಘವೇಂದ್ರ ಮತ್ತು ಜ್ಯೋತಿ ಚೇತನ್ ಅವರ ಪುತ್ರಿ. ಬಿ ಇ (ಆರ್ಕಿಟೆಕ್ಚರ್) ಪದವಿ ಪೂರ್ಣಗೊಳಿಸಿದ್ದು, ಸದ್ಯ ಕಲಾ ಚಟುವಟಿಕೆಗಳಿಗೆ ಪೂರ್ಣಾವಧಿ ಸಮಯ ನೀಡುತ್ತಿದ್ದಾರೆ.  ಕಲಾವಿದರ ಕುಟುಂಬದಲ್ಲೇ ಜನಿಸಿದ್ದರಿಂದ ಬಾಲ್ಯದಿಂದಲೇ ವೀಣೆ ಮತ್ತು ಮೃದಂಗದತ್ತ ಆಕರ್ಷಣೆ. ತಾಯಿ ಮತ್ತು ಕಲಾವಿದೆ ಜ್ಯೋತಿ ಚೇತನ್ ಅವರಲ್ಲೇ ವೀಣೆ ಅಭ್ಯಾಸ ಮಾಡಿ ಸೀನಿಯರ್ ಹಂತದ ಪರೀಕ್ಷೆ ಪೂರ್ಣಗೊಳಿಸಿದ್ದಾರೆ. ನಾಡಿನ ಹಿರಿಯ, ಪ್ರಖ್ಯಾತ  ವಿದ್ವಾಂಸ ಎಚ್.ಎಸ್. ಸುಧೀಂದ್ರ ಅವರಲ್ಲಿ  ಮೃದಂಗ ಪಾಠ ಕಲಿಯುತ್ತಿದ್ದಾರೆ. ಸಿಸಿಆರ್‌ಟಿ ಸ್ಕಾಲರ್‌ಶಿಪ್ ಮತ್ತು ಸಂಗೀತ ನೃತ್ಯ ಅಕಾಡೆಮಿ ಶಿಷ್ಯವೇತನಕ್ಕೆ ಈಕೆ ಭಾಜನರಾಗಿರುವುದು ವಿಶೇಷ. ಬೆಂಗಳೂರಿನ ಗಾಯನ ಸಮಾಜ, ಮದ್ರಾಸ್ ಅಕಾಡೆಮಿ ಸೇರಿದಂತೆ ಹಲವು ಪ್ರತಿಷ್ಠಿತ ಸಂಘ-ಸಂಸ್ಥೆಗಳು ಆಯೋಜಿಸಿದ್ದ ಸ್ಪರ್ಧೆಯಲ್ಲಿ ಅನೇಕ ಬಹುಮಾನಗಳನ್ನು ಪಡೆದ ಉದಯೋನ್ಮುಖ ಕಲಾ ಸಾಧಕಿ ಆಗಿದ್ದಾರೆ.
ಲಕ್ಷಾಂತರ ರೂಪಾಯಿ ವೇತನ ದೊರಕಿಸಿಕೊಡಬಲ್ಲ ಇಂಜಿನಿಯರಿಂಗ್ ಪದವಿ ಪಡೆದಿದ್ದರೂ, ವೃತ್ತಿ ನಿರ್ವಹಣೆಗೆ ಅನೇಕ ಅವಕಾಶಗಳು ಇದ್ದರೂ ಈಕೆ ತನ್ನ ಕಲಾ ಪ್ರವೃತ್ತಿಗೆ ಮನ್ನಣೆ ನೀಡಿದ್ದಾರೆ ಎಂಬುದು ಗಮನಾರ್ಹ ಸಂಗತಿ. ಮೃದಂಗ ಮತ್ತು ವೀಣಾ ವಾದನಕ್ಕೆ ಜ್ಯೋತ್ಸ್ನಾನೀಡಿರುವ ಮಹತ್ವ ಮತ್ತು ಮಾನ್ಯತೆ ದೊಡ್ಡದು. ಭಾರತೀಯ ಸನಾತನ ಸಂಗೀತ ಕಲಾ ಪರಂಪರೆಗೆ ಇಂಥವರೇ ಭರವಸೆಯ ಬೆಳಕಾಗಲಿದ್ದಾರೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದಾಗಿದೆ.

ಅವರಿಗೆ ದೊರೆತಿರುವ ಖ್ಯಾತ ಗುರು ವಿದ್ವಾನ್ ಸುಧೀಂದ್ರ ಅವರ ಕನಸು ಮತ್ತು ಕಲ್ಪನೆಗಳನ್ನು ಸಾಕಾರಗೊಳಿಸುವತ್ತ ಜ್ಯೋತ್ಸ್ನಾ ಮುನ್ನುಗ್ಗುತ್ತಿರುವುದು ‘ವಾದನ’ ಲೋಕಕ್ಕೆ ನಾಳೆ ಮಹೋನ್ನತ ಕೊಡುಗೆಯಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ ಎಂಬುದೇ ಸಂಭ್ರಮದ ಸಂಗತಿಯಾಗಿದೆ.

ಎಚ್.ಎನ್. ರಘುನಂದನ
ಗುರು ಎಚ್.ಕೆ. ಸುಬ್ಬರಾವ್ ಮತ್ತು ವಿದ್ವಾನ್ ಹೊಸಹಳ್ಳಿ ವಿ. ರಘುರಾಮ್ ಅವರ ಶಿಷ್ಯ ಎಚ್.ಎನ್. ರಘುನಂದನ ಅವರು ವಯೋಲಿನ್ ಕ್ಷೇತ್ರದ ಭರವಸೆಯ ಯುವತಾರೆ. 12 ವರ್ಷದಿಂದ ಕಲಿಕೆಯಲ್ಲಿ ಪಳಗಿದ ಇವರು ಕಳೆದ ಒಂದೂವರೆ ವರ್ಷದಿಂದ ಕಛೇರಿಗಳಿಗೆ ಒಗ್ಗಿಕೊಂಡು ಸಾಧನೆಯ ಹಾದಿಯಲ್ಲಿದ್ದಾರೆ. ಗಾನಕಲಾ ಪರಿಷತ್, ಗಾಯನ ಸಮಾಜ ಸೇರಿದಂತೆ ಶಿವಮೊಗ್ಗ, ಬೆಂಗಳೂರು ಮತ್ತು ಹಾಸನದ ವಿವಿಧ ವೇದಿಕೆಗಳಲ್ಲಿ ಇವರ ಕಲಾಭಿವ್ಯಕ್ತಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸದ್ಯ ಈತ ಬೆಂಗಳೂರಿನ ಬಿಜಿಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ (ಸಿಎಸ್ ಆ್ಯಂಡ್ ಡಿಸೈನ್) ವಿದ್ಯಾರ್ಥಿ.
ಸಂಸ್ಕೃತ ಗ್ರಾಮವೆಂದೇ ಖ್ಯಾತವಾದ ಶಿವಮೊಗ್ಗ ಜಿಲ್ಲೆ ಹೊಸಹಳ್ಳಿ ಮೂಲದ ಎಚ್.ಎಸ್. ರಾಮಮೂರ್ತಿ ಅವರ ಮೊಮ್ಮಗ, ಕರ್ನಾಟಕ ಬ್ಯಾಂಕ್ ಮೇನೇಜರ್ ನಿಧಿ ಭಾರದ್ವಾಜ್ ಮತ್ತು ಎಚ್.ಆರ್. ನಳಿನಿ ಅವರ ಪುತ್ರ ರಘುನಂದನ ಅವರು ವಯೋಲಿನ್ ನುಡಿಸಾಣಿಕೆಯಲ್ಲಿ ತನ್ಮಯತೆ, ಸಂಭ್ರಮ ಕಾಣುತ್ತಿರುವುದು ಕಲಾರಂಗದ ಹೊಸ ಕನಸುಗಳನ್ನು ನನಸಾಗಿಸುತ್ತಿದೆ.

ತ್ರಿವೇಣಿ ಕಲಾ ಸಂಗಮವಾಗಲಿ
ಸುಸಂಸ್ಕೃತ ಕುಟುಂಬದಲ್ಲಿ ಜನಿಸಿ, ವಿಶ್ವಖ್ಯಾತಿಯ ಗುರುಗಳನ್ನು ಅನುಸರಿಸಿ, ಕಲೆಗೆ ಬದ್ಧರಾಗಿ, ಗಾಯನ ಮತ್ತು ವಾದನಗಳನ್ನು ಭಕ್ತಿಭರಿತ ಪೂಜೆಯಾಗಿ ಸ್ವೀಕರಿಸಿರುವ ಈ ಮೂವರು ಯುವ ತಾರೆಗಳು ಸೋಸಲೆ ಶ್ರೀ ವ್ಯಾಸರಾಜರ ಮಹಾಸಂಸ್ಥಾನದ ವೇದಿಕೆಯಲ್ಲಿ ಕಲಾ ಪ್ರೌಢಿಮೆ ಪ್ರಸ್ತುತ ಪಡಿಸುತ್ತಿರುವುದು ವಿಶೇಷದಲ್ಲಿ ವಿಶೇಷವಾಗಿದೆ. ಶರನ್ನವರಾತ್ರಿ ಸಂಗೀತೋತ್ಸವದ ಶುಭ ಸಂದರ್ಭದಲ್ಲಿ ಈ ಮೂವರ ಅಭಿವ್ಯಕ್ತಿ ತ್ರಿವೇಣಿ ಸಂಗಮದಂತಾಗಲಿ.  ಎಂದು ಆಶಿಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: BENGALURUDasaraMusic ConcertmysoreShivamoggaSosaleSosale MathaSringeriVyasaraja Mathaಎ.ಆರ್. ಅಪ್ರಮೇಯಕೇಂದ್ರ ಮಾನವ ಸಂಪನ್ಮೂಲ ಇಲಾಖೆದಾಸರ ಕೀರ್ತನೆಬೆಂಗಳೂರುಬೆಣ್ಣೆ ಗೋವಿಂದಪ್ಪ ಛತ್ರಮೃದಂಗಮೈಸೂರುವಯೋಲಿನ್ಶರನ್ನವರಾತ್ರಿಶಾಸ್ತ್ರೀಯ ಸಂಗೀತಶಿವಮೊಗ್ಗಶೃಂಗೇರಿಶ್ರೀ ಸೋಸಲೆ ವ್ಯಾಸರಾಜರ ಮಠಸಂಗೀತೋತ್ಸವಸೋಸಲೆ
Previous Post

ಶಿವಮೊಗ್ಗ | ಅತ್ಯುತ್ಕೃಷ್ಟ ಗುಣಮಟ್ಟದ ಸೇವೆಗೆ ನೀಲ್’ಕಮಲ್ ಹೋಮ್ ಆಗಿ ಬದಲಾಯ್ತು @ಹೋಮ್

Next Post

ರೌಡಿ ಶೀಟರ್ ಹಬೀಬುಲ್ಲಾ ಕಾಲಿಗೆ ಪೊಲೀಸ್ ಗುಂಡೇಟು | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೌಡಿ ಶೀಟರ್ ಹಬೀಬುಲ್ಲಾ ಕಾಲಿಗೆ ಪೊಲೀಸ್ ಗುಂಡೇಟು | ಘಟನೆ ನಡೆದಿದ್ದು ಹೇಗೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!