No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2025
in ಬೆಂಗಳೂರು ನಗರ
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ

ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಿದೆ.
ಎ.ಆರ್.ಎಸ್ : ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ

ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸ್ಪೋಕ್ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪಾಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಸ್ಪೋಕ್ ಆಗಿ ಕಾರ್ಯನಿರ್ವಹಿಸುವ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮರುನಾಮಕರಣ

ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆನರು ಮೊದಲಿನಿಂದ ಗೇರುಗುಡ್ಡ ಬಸಾಪೂರ ಎಂದು ಕರೆಯುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.
ಅನುಭವ ಮಂಟಪ ನಿರ್ಮಾಣ: ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ

ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ

ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕನಕನಾಲಾ ಆಧುನೀಕರಣ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಜಲಸಂಪನ್ಮೂಲ ಇಲಾಖೆಯಡಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್ –ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಿನ್ನೀರಿನ ಮೇಲ್ಭಾಗದಲ್ಲಿರುವ ಬಾಧಿತ ಅಚ್ಚುಕಟ್ಟು ಪ್ರದೇಶಗಳಾದ ಆರ್ಯಭೋಗಾಪುರ, ಮುದಲಗುಂಡಿ, ವನರಳ್ಳಿ, ಕಿಲನೂರು, ಕಲ್ಮಳ್ಳಿ, ಅಮರಾಪುರ ತಾಂಡಾಗಳು ಕಿಲ್ಲರಹಟ್ಟಿ ಗ್ರಾಮಗಳಿಗೆ ಅನುಕೂಲ ಕಲಗಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ವಿಯರ್ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ

ರಾಯಚೂರು ತಾಲ್ಲೂಕಿನ ಸಿಂಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ 43.10 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳ ಅನುಷ್ಠಾನಕ್ಕೆ ನಿರ್ಣಯ

ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ

ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು ಗಮನಿಸಿ ಸೂಚನೆ ನೀಡಿದೆ. ನಮ್ಮ ಸರ್ಕಾರವು ಈ ಸಮುದಾಯದವರ ವಸತಿರಹಿತರನ್ನು ಹಾಗೂ ಸಾಮಾಜಿಕ ನ್ಯಾಯವನ್ನು ಗಮನದಲ್ಲಿರಿಸಿಕೊಂಡು ಮೀಸಲಾತಿ ಹೆಚ್ಚಿಸಲಾಗಿದೆ.

ಮಾವು ಬೆಳೆಗಾರರಿಗೆ ಪರಿಹಾರಕ್ಕೆ ಕೇಂದ್ರವನ್ನು ಒತ್ತಾಯಿಸಲು ಕೃಷಿ ಸಚಿವರಿಗೆ ಸೂಚನೆ

ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದವರು ಚರ್ಚಿಸಿದರು. ರೈತರಿಗೆ ಪರಿಹಾರ ನೀಡಲು ಕೋರಲಾಗಿ, ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ಭೇಟಿ ನೀಡಲು ಹಾಗೂ ಸಾಧ್ಯವಾದಷ್ಟು ಹೆಚಿನ ಪರಿಹಾರವನ್ನು ನೀಡಲು ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ನಿರಾಕರಿಸಿರುವ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಪ್ರಸ್ತಾಪ ಮಾಡಿದರು ಎಂದು ತಿಳಿಸಿದರು.

ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮುಂದೂಡಲು ಕಾರಣ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಚಿವರು ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದರು.
ಬಿಲ್ಲುಗಳ ಬಗ್ಗೆ ಚರ್ಚೆ

ಕರ್ನಾಟಕ ಕ್ರೌಡ್ ಕಂಟ್ರೋಲ್ ಮ್ಯಾನೇಜಿಂಗ್ ಕ್ರೌಡ್‌ಅಟ್ ಇವೆಂಟ್ಸ್ ಅಂಡ್ ವೆನ್ಯೂ, ಮಾಸ್ ಗ್ಯಾದರಿಂಗ್ ಬಿಲ್ 2025, ಕರ್ನಾಟಕ ರೋಹಿತ್ ವೆಮುಲಾ ಬಿಲ್ 2025, ಕರ್ನಾಟಕ ಮಿಸ್ ಇನ್ಫರರ್ಮೇಷನ್, ಫೇಕ್ ನ್ಯೂಸ್ ಪ್ರಾಹಿಬಿಷನ್ ಬಿಲ್ 2025, ಕರ್ನಾಟಕ ಹೇಟ್ ಸ್ಪೀಚ್ ಅಂಡ್ ಹೇಟ್ ಕ್ರೈಂ ಪ್ರೆವೆನ್ಶನ್ ಬಿಲ 2025 ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು, ಕೆಲವು ಬಿಲ್ಲುಗಳಲ್ಲಿ ವಿವರವಾದ ಚರ್ಚೆಯಾಗಬೇಕೆಂದು ತೀರ್ಮಾನಿಸಿ ಮುಂದಿನ ಸಚಿವ ಸಂಪುಟಕ್ಕೆ ತರಲು ತೀರ್ಮಾನಿಸಲಾಗಿದೆ ಎಂದರು.

ಕೆ.ಎ.ಟಿ ವ್ಯವಸ್ಥೆಯ ಬಗ್ಗೆ ಸರ್ಕಾರದ ಚಿಂತನೆ

ಕೆ.ಎ.ಟಿ ಬಗ್ಗೆ ಸಾಕಷ್ಟು ಚರ್ಚೆ, ಆಕ್ರೋಶ ವ್ಯಕ್ತವಾಗಿದ್ದು, ಇದರ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

Next Post

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL