No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು: ಕಲೆ ಮನುಷ್ಯನ ಭಾವನೆಯನ್ನು ವ್ಯಕ್ತಪಡಿಸುವ ಮಾಧ್ಯಮ: ಕಲಾ ವಿಮರ್ಷಕ ಕೃಷ್ಣ ಶೆಟ್ಟಿ ಅಭಿಮತ

kalpa News by kalpa News
October 23, 2019
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ನೈಜ ಕಲೆಯು ಮನಸ್ಸನ್ನು ಅರಳಿಸುವ ಮೂಲಕ ಸಂತೃಪ್ತಿಗೊಳಿಸುತ್ತದೆ ಅಲ್ಲದೆ ಕಲೆಯು ಮನುಷ್ಯನ ಭಾವನೆಯನ್ನು ಅಭಿವ್ಯಕ್ತಿಗೊಳಿಸುವ ಮಾಧ್ಯಮವಾಗಿದೆ ಎಂದು ಕಲಾ ವಿಮರ್ಷಕ ಚಿ.ಸು. ಕೃಷ್ಣಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೇಟಿವ್ ನರೇಟಿವ್ಸ್‌ ಹೆಸರಿನಲ್ಲಿ ಬೆಂಗಳೂರಿನ ಬನಶಂಕರಿ ಎರಡನೆಯ ಹಂತದಲ್ಲಿರುವ ಬ್ರಿಗೇಡ್ ಸಾಫ್ಟ್‌’ವೇರ್ ಪಾರ್ಕ್’ನಲ್ಲಿರುವ ಗ್ಯಾಲರಿಯಲ್ಲಿ ಆಯೋಜಿಸಲಾಗಿದ್ದ ಖ್ಯಾತ ಚಿತ್ರ ಕಲಾವಿದ ದಿವಂಗತ ಎಂ.ಬಿ. ಪಾಟೀಲ್ ಅವರ ಗೌರವಾರ್ಥವಾಗಿ ಅವರ ಕಲಾಕೃತಿಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಹಾಗೂ ದಿ. ಎಂ.ಬಿ. ಪಾಟೀಲ್’ರ ಸಂಬಂಧ ಸರಿ ಸುಮಾರು 40 ವರ್ಷಗಳಷ್ಟು ಹಳೆಯದು. ಪಾಟೀಲರ ಸೃಜನಶೀಲತೆಯಲ್ಲಿ ತಮ್ಮ ಬಾಲ್ಯ ಹಾಗೂ ಗ್ರಾಮೀಣ ಪ್ರದೇಶದ ಸಂಸ್ಕೃತಿಯ ಅಂಶಗಳನ್ನು ಕಾಣಬಹುದಾಗಿದೆ ಎಂದರು.


ಅವರು ಬೆಂಗಳೂರು ನಗರದಲ್ಲಿ ವಾಸವಿದ್ದವರಾದರು ನಡೆ ನುಡಿ ಹಾಗೂ ಕಲಾಕೃತಿಗಳಲ್ಲಿ ಉತ್ತರ ಕರ್ನಾಟಕದ ಶೈಲಿಯನ್ನು ಕಾಣಬಹುದಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಅವರೊಬ್ಬ ಅಜಾತಶತ್ರುವಾಗಿದ್ದರು ಎಂದು ನೆನೆದರು.

ಕೆಲವು ದಶಕಗಳ ಹಿಂದೆ ದಕ್ಷಿಣ ಕರ್ನಾಟಕದ ಕಲಾವಿದರು ಮದ್ರಾಸ್ ಸ್ಕೂಲ್ ಆಫ್ ಆರ್ಟ್ಸ್‌ ಹಾಗೂ ಉತ್ತರ ಕರ್ನಾಟಕ ಕಲಾವಿದರು ಬಾಂಬೆಯ ಜೆ.ಜೆ. ಸ್ಕೂಲ್ ಆಫ್ ಆರ್ಟ್ಸ್‌’ನಲ್ಲಿ ಪ್ರವೇಶ ಪಡೆಯುತ್ತಿದ್ದರು. ಆದರೆ ಎಂ.ಬಿ. ಪಾಟೀಲರಿಗೆ ಅಂದು ಜೆ.ಜೆ. ಸ್ಕೂಲ್ ಆಫ್ ಆರ್ಟ್ಸ್‌’ಗೆ ಸೇರಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಅವರು ಬಡವರ ಜೆ.ಜೆ. ಎನ್ನಿಸಿಕೊಂಡಿದ್ದ ನೂತನ ಕಲಾಮಂದಿರವನ್ನು ಸೇರಬೇಕಾಯಿತು. ಆದರೂ ಸಹ ಅವರ ಕಲಾಕೃತಿಗಳಲ್ಲಿ ಜೆ.ಜೆ. ಸ್ಕೂಲ್’ನ ಪ್ರಭಾವ ಕಾಣಬಹುದಾಗಿದೆ. ಎಂ.ಬಿ. ಪಾಟೀಲ್ ವಾರ್ತಾ ಇಲಾಖೆಯಲ್ಲಿ ವೃತ್ತಿಯಲ್ಲಿದ್ದಾಗ ಭಾರತದ ಗಣರಾಜ್ಯ ದಿನದಂದು ನಡೆಯುವ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಐದು ಬಾರಿ ಪ್ರಶಸ್ತಿ ವಿಜೇತರಾಗಿದ್ದರು. ಇಂದು ಎಂ.ಬಿ. ಪಾಟೀಲ್ ಅವರ ಚರಿತ್ರೆ ರಾಜ್ಯದ ಶಾಲೆಗಳಲ್ಲಿ ಪಠ್ಯಪುಸ್ತಕದಲ್ಲಿ ಪಾಠವಾಗಬೇಕು. ಆ ಮೂಲಕ ಇಂತಹ ಕಲಾವಿದರ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದರು.

ಇಂತಹ ಕಲಾವಿದರ ಚಿತ್ರಗಳನ್ನು ಪ್ರದರ್ಶಿಸುತ್ತಿರುವುದಕ್ಕೆ ಫಿಡಲಿಟಸ್ ಗ್ಯಾಲರಿ ಮುಖ್ಯಸ್ಥರಾದ ಅಚ್ಯುತ್ ಗೌಡ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಂತರ ಮಾತನಾಡಿದ ಅಚ್ಚುತ್ ಗೌಡ ಅವರು, ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿ. ನಮ್ಮ ಫಿಡಿಲಿಟಸ್ ಗ್ಯಾಲರಿಯು ಹಲವು ಕಲಾ ಪ್ರದರ್ಶನವನ್ನು ಏರ್ಪಡಿಸುವ ಮೂಲಕ ತನ್ನ ಅಳಿಲು ಸೇವೆಯನ್ನು ಕಲಾವಲಯಕ್ಕೆ ಸಲ್ಲಿಸುತ್ತಿದೆ. ದಿವಂಗತ ಕಲಾವಿದರ ಗೌರವಾರ್ಥ ಆಯೋಜಿಸಿರುವ ಈ ಕಲಾ ಪ್ರದರ್ಶನದಲ್ಲಿ ಮಾರಾಟವಾಗುವ ಕಲಾಕೃತಿಗಳ ಒಟ್ಟು ಮೊತ್ತದಲ್ಲಿ ಶೇ.25 ಪ್ರತಿಶತ ಹಣವನ್ನು ಶಿಲ್ಪಾ ಫೌಂಡೇಶನ್ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಸಲುವಾಗಿ ಬಳಸಿಕೊಳ್ಳಲಾಗುತ್ತದೆ ಎಂದರು.

27 ನೆಯ ಅಕ್ಟೋಬರ್ 2019 ರವರೆಗೆ ಮುಂದುವರೆಯಲಿರುವ ಅಪರೂಪದ ಈ ಕಲಾ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲಾಪ್ರೇಮಿಗಳು ಸದುಪಯೋಗಪಡಿಸಿಕೊಳ್ಳಬೇಕು ಖ್ಯಾತ ಕಲಾವಿದರಾದ ಕೃಷ್ಣ ಶೆಟ್ಟಿಯವರು ರಾಜ್ಯ ಕಲಾವಿದರಿಗೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ಚಿತ್ರಕಲಾವಿದ ಹಾಗೂ ವಿಮರ್ಶಕ ಚಿ.ಸು. ಕೃಷ್ಣ ಶೆಟ್ಟಿಯವರು, ಕಲಾ ಪ್ರೇಮಿಗಳಾದ, ಪುಷ್ಪಗಿರಿ ಎಂಜಿನೀರ್ಸ್ ಇನ್ಫ್ರಾ ಪ್ರೈ.ಲಿ. ನ ಮುಖ್ಯಸ್ಥರಾದ ಬಿ.ಎಂ. ರವಿಶಂಕರ್, ನಮ್ಮ ಸ್ಪೇಸ್ ಪ್ರೈ.ಲಿ. ಸಂಸ್ಥೆಯ ಸಿಇಓ ತೇಜ್ ಮರಿಯಪ್ಪ, ಕಲಾವಿದ ಕೋಟೆಗದ್ದೆ ರವಿ ಹಾಗೂ ಫಿಡಿಲಿಟಸ್ ಕಾರ್ಪ್ ಸಂಸ್ಥೆಯ ಮುಖ್ಯಸ್ಥರಾದ ಅಚ್ಚುತ್ ಗೌಡ ಅವರು ಮುಖ್ಯ ಅತಿಥಿಗಳಾಗಿದ್ದರು.

ಕಲಾ ಪ್ರದರ್ಶನವು ಇಂದಿನಿಂದ ಅಕ್ಟೋಬರ್ 27ರವರೆಗೂ ನಡೆಯಲಿದೆ ಎಂದು ಆಯೋಜಕ ಹಾಗೂ ಸಂಸ್ಥಾಪಕರಾದ ಅಚ್ಚುತ್ ಗೌಡರವರು ತಿಳಿಸಿ ಕೊನೆಯಲ್ಲಿ ಪಾಟೀಲರ ಚಿತ್ರಕಲಾ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ಎಂ.ಬಿ. ಪಾಟೀಲ್ (1939-2017) ಕುರಿತು ಮಾಹಿತಿ
ಬಿಜಾಪುರದ ತಿಕೋಟದಲ್ಲಿ 10 ಡಿಸೆಂಬೆರ್ 1939 ರಲ್ಲಿ ಜನಿಸಿದ ಮಲ್ಲಿಕಾರ್ಜುನ ಭೀಮನಗೌಡ ಪಾಟೀಲ್ ಕಲಾ ಜಗತ್ತಿನಲ್ಲಿ ಎಂ.ಬಿ. ಪಾಟೀಲ್ ಎಂದೇ ಪರಿಚಿತರು. 1960 ರಿಂದ 1964 ರವರೆಗೆ ಮುಂಬೈಯ ನೂತನ ಕಲಾ ಮಂದಿರದಲ್ಲಿ ಚಿತ್ರಕಲೆಯಲ್ಲಿ ಪದವಿ ಪಡೆದ ಪಾಟೀಲರು ಹುಬ್ಬಳಿ ಧಾರವಾಡ, ಗುಲಬರ್ಗಾ ಕಿತ್ತೂರು ಬೆಂಗಳೂರು ಸೇರಿದಂತೆ ಹಲವಾರು ಕಡೆ ತಮ್ಮ ಏಕ ವ್ಯಕ್ತಿ ಕಲಾ ಪ್ರದರ್ಶನವನ್ನು ನಡೆಸಿದ್ದರು ಹಾಗೆಯೇ ಚನ್ನೈ, ಕೇರಳ, ಪಾಂಡಿಚೆರಿ, ಬೆಂಗಳೂರು, ಮಂಗಳೂರು ಮೊದಲಾದೆಡೆ ಚಿತ್ರಕಲಾ ಶಿಬಿರಗಳಲ್ಲಿ ಭಾಗವಹಿಸಿದ್ದರು.

ಅವರು ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಪ್ರಶಸ್ತಿ, ಕೇಂದ್ರ ಲಲಿತ್ ಕಲಾ ಅಕಾಡೆಮಿ ಪ್ರಶಸ್ತಿ, ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪ್ರತಿಷ್ಠಿತ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಎಂ.ಬಿ. ಪಾಟೀಲರು 2017 ರಲ್ಲಿ ತಮ್ಮ 78 ನೆಯ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾದರು.

Tags: Art ExhibitionBENGALURUFidelitas GalleryKannada NewsPicture artist M.B. Patilಕರ್ನಾಟಕ ಲಲಿತಾ ಕಲಾ ಅಕಾಡೆಮಿಕಲಾ ಪ್ರದರ್ಶನಕಲಾವಿದಚಿತ್ರ ಕಲಾವಿದ ದಿವಂಗತ ಎಂ.ಬಿ. ಪಾಟೀಲ್ಫಿಡಿಲಿಟಸ್ ಗ್ಯಾಲರಿಬೆಂಗಳೂರು
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಸಿಸಿಐ 39ನೆಯ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ

Next Post

ಅನಾರೋಗ್ಯ ಹಿನ್ನೆಲೆಯಲ್ಲಿ ಡಿಕೆಶಿಗೆ ಷರತ್ತುಬದ್ದ ಜಾಮೀನು: 48 ದಿನಗಳ ಜೈಲುವಾಸ ಅಂತ್ಯ

kalpa News

kalpa News

Next Post
ಡಿಕೆಶಿಗೆ ಮತ್ತೆ ತಿಹಾರ್ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಅನಾರೋಗ್ಯ ಹಿನ್ನೆಲೆಯಲ್ಲಿ ಡಿಕೆಶಿಗೆ ಷರತ್ತುಬದ್ದ ಜಾಮೀನು: 48 ದಿನಗಳ ಜೈಲುವಾಸ ಅಂತ್ಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL