ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಎ2 ಆರೋಪಿ ನಟ ದರ್ಶನ್’ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ #Darshan Wife Vijayalakshmi ಅವರು ಕಾಮಾಕ್ಯ ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ.
5 ತಿಂಗಳಿನಿಂದ ಜೈಲುವಾಸದಲ್ಲಿರುವ ದರ್ಶನ್’ಗೆ #Darshan ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ವಿಜಯಲಕ್ಷ್ಮಿ, ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್ಫುಲ್, ಗ್ರೇಟ್ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾರೆ.
Also read: ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ
ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಖುಷಿಯಲ್ಲಿ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ.
ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ. ಈ ವೇಳೆ, ಪತಿಗೆ ಚಾಮುಂಡೇಶ್ವರಿ ದೇವಿ ಪ್ರಸಾದ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post