ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸ್ವಾತಂತ್ರ್ಯ ಚಳುವಳಿಗೆ ನವಶಕ್ತಿ ತುಂಬಿದ ಶಹೀದ್ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನ ನಿಮಿತ್ತ ನವದೆಹಲಿಯ ಜೈ ಭಾರತ ಮಾತಾ ಸೇವಾ ಸಮಿತಿಯವರು ನಗರದ ಅರಮನೆ ಆವರಣದ ತ್ರಿಪುರವಾಸಿನಿ ಸಭಾಂಗಣದಲ್ಲಿ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಫಾಲ್ಗೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಮಾತನಾಡಿ, ಹುತಾತ್ಮರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ದೇಶ ಪ್ರೇಮ, ಸ್ವಾತಂತ್ರ್ಯ ಪಡೆಯಲೇಬೇಕೆಂಬ ಛಲ, ಅವರ ದೇಶ ಭಕ್ತಿಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ನವದೆಹಲಿಯ ಜೈ ಭಾರತ ಮಾತಾ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಸದ್ಗುರು ಹವಾ ಮಲ್ಲಿನಾಥ ಮಹಾರಾಜ (ನಿರಗುಡಿ ಮುತ್ಯಾ), ಸಮಿತಿಯ ಮುಖಂಡರು, ರಾಜಕೀಯ ನಾಯಕರು, ನೌಕರ ವರ್ಗದವರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post