ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಫಾರಿ ವೀಕ್ಷಣೆಗೆಂದು #Safari viewing ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ ಮೇಲೆ ಚಿರತೆ #Leopard ಹಾರಿ, ಕಿಟಕಿಗೆ ನೇತಾಡಿದ್ದು ಆತಂಕ ಸೃಷ್ಠಿಸಿದ ಘಟನೆ ಬನ್ನೇರುಘಟ್ಟ #Bannerughatta ಜೈವಿಕ ಉದ್ಯಾನವನದಲ್ಲಿ ನಡೆದಿದೆ.
ಸಫಾರಿಯಲ್ಲಿ ಇತ್ತೀಚಿಗೆ ವಿಶಾಲವಾದ ತೆರೆದ ಆವರಣದಲ್ಲಿ ಚಿರತೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಪ್ರದೇಶದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ 4 ಅಥವಾ 5 ಚಿರತೆಗಳನ್ನು ಒಂದೊಂದು ತಂಡವನ್ನಾಗಿಸಿ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಬಿಡಲಾಗುತ್ತದೆ.
Also read: ಫ್ರಿಜ್ಡ್’ನಲ್ಲಿಟ್ಟಿದ್ದ ಊಟ, ಕೇಕ್ ತಿಂದು 5 ವರ್ಷದ ಬಾಲಕ ಸಾವು | ಪೋಷಕರು ಅಸ್ವಸ್ಥ
ಹೀಗೆ ಚಿರತೆ ವೀಕ್ಷಣೆಗೆಂದು ಪ್ರವಾಸಿಗರು ಆಗಮಿಸಿದ್ದ ಮಿನಿ ಬಸ್ ಮೇಲೆ ಒಂದು ಚಿರತೆ ಹಾರಿ, ಕಿಟಕಿಗೆ ನೇತಾಡಿ, ಪ್ರವಾಸಿಗರನ್ನು ಕಂಡು ಘರ್ಜಿಸಿದೆ. ನಂತರ ಚಾಲಕ ಬಸ್ಸನ್ನು ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಕೆಳಕ್ಕೆ ಹಾರಿ ಹೋಗಿದೆ.
ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್ಗಳ ಮೇಲೆ ಹತ್ತುವುದು ಸಾಮಾನ್ಯವಾಗಿದ್ದು, ಇನ್ನೊಂದು ವ್ಯಾನ್’ನಲ್ಲಿದ್ದ ಪ್ರವಾಸಿಗರು ಚಿರತೆ ಬಸ್ ಮೇಲೆ ಹಾರುವ ಫೋಟೋ ಕ್ಲಿಕ್ಕಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post