ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ಜೆಸಿ ರಸ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ #Shri Chatrapati Shivaji Maharaj ಆಚರಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿರವರು ಸಮಾರಂಭ ವನ್ನು ಉದ್ಘಾಟಿಸಿದರು. ಶ್ರೀ ಭವಾನಿ ಪೀಠ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ದಿವ್ಯ ಸಾನಿಧ್ಯ ದಲ್ಲಿ ಶಾಸಕ ಉದಯ ಬಿ ಗರುಡಾಚಾರ್ ಅಧ್ಯಕ್ಷತೆ ವಹಿಸಿದ್ದರು.
Also read: ಶ್ರೀ ಮಹಾಶಿವರಾತ್ರಿ ಆಚರಣೆ ಜೊತೆಗೆ ಸುಸ್ಥಿರ ಪರಿಸರ ಪ್ರಜ್ಞೆಯ ಪಾಠ

ಸಾಹಿತಿ ಜಗನಾಥರಾವ್ ಬಹುಳೆರವರು ಶಿವಾಜಿ ಮಹಾರಾಜರ ಕುರಿತು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ ಧರಣಿ ದೇವಿ ಮಾಲಗತ್ತಿ ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ಹೊಸ ಯೋಜನೆಗಳ ಚಾಲನೆ ನೀಡಲಾಯಿತು ಎಂದು ಕರ್ನಾಟಕ ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ್ ಆರ್ ಪಾಗೋಜಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post