ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಶ್ರೀಗುರು ರಾಯರ 353ನೇ ಆರಾಧನೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಉಡುಪಿ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀಥ ಶ್ರೀಪಾದಂಗಳವರು ಗೋಪೂಜೆ, ಧನ-ಧಾನ್ಯ ಪೂಜೆ ನೆರೆವೇರಿಸಿ, ಸಪ್ತರಾತ್ರೋತ್ಸವನ್ನು ಉದ್ಘಾಟಿಸಿದರು.
ಶ್ರೀ ಮಂತ್ರಾಲಯ ಕ್ಷೇತ್ರದಂತೆ ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಯೂ ಶ್ರೀ ಗುರು ರಾಯರ 353ನೇ ಆರಾಧನಾ ಮಹೋತ್ಸವದ, ರಾಯರ ಬೃಂದಾವನಕ್ಕೆ ನವರತ್ನ ಕವಚದ ಅಲಂಕಾರ ಮತ್ತು ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ.
Also read: ಹಾಸ್ಟೆಲ್ ಊಟ ಸೇವಿಸಿ 20ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ!
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ. ಈ ಸಪ್ತರಾತ್ರೋತ್ಸವವನ್ನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #Shri Subhudendra Thirtharu ಆದೇಶದಂತೆ ಸಪ್ತರಾತ್ರೋತ್ಸವ ಆರಂಭಗೊಂಡಿದೆ.
ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರು ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ #Sudha Murthy ಅವರು ಶ್ರೀಮಠಕ್ಕೆ ಭೇಟಿ ನೀಡಿ ಗುರುರಾಜರ ಹಾಗೂ ಕಾಣಿಯೂರು ಶ್ರೀಗಳ ದರ್ಶನ ಪಡೆದು, ಅನುಗ್ರಹ ಪಡೆದರು. ಸಂಕಲ್ಪದೊಂದಿಗೆ ಗುರುರಾಜರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಕ್ತರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post