Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ರಾಜ್ಯ, ಹೊರರಾಜ್ಯಗಳಿಂದ ಕೃಷಿಕರ ಆಗಮನ

February 13, 2021
in ಶಿವಮೊಗ್ಗ
0 0
0
Internet Image

Internet Image

Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಗರ ಹೊರವಲಯದ ಹೆಸರಘಟ್ಟದ ಸಸ್ಯಕಾಶಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ- ಐಐಎಚ್‌ಆರ್‌ನಲ್ಲಿ ಐದು ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ ಜನಸಾಗರದ ನಡುವೆ ತೆರೆಕಂಡಿತು.

ಐದು ದಿನಗಳ ಮೇಳದಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳ ಲಕ್ಷಕ್ಕೂ ಅಧಿಕ ರೈತರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಸಾರ್ವಜನಿಕರೂ ಸಹ ಭೇಟಿ ಕೊಟ್ಟು ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.


ಮೇಳಕ್ಕೆ ಬಂದವರ ಪೈಕಿ, ಕೃಷಿಯಲ್ಲಿ ಆಸಕ್ತಿ ಉಳ್ಳವರು, ತಮ್ಮ ಮಕ್ಕಳನ್ನು ಕೂಡ ಮೇಳದಲ್ಲಿ ಪಾಲ್ಗೊಳಿಸಿ, ಬೆಳೆಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಾಗಿದ್ದು ವಿಶೇಷ. ಈ ಬಾರಿ ಮೇಳಕ್ಕೆ ಸ್ಥಳೀಯ ರೈತರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿತ್ತಾದರೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯಲ್ಲಿ ರೈತರು, ಯುವ ಕೃಷಿ ಉದ್ದಿಮೆಗಳು ಆಗಮಿಸಿದ್ದರು.

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳಿಂದ ರೈತರು ಮೇಳಕ್ಕೆ ಭೇಟಿ ಕೊಟ್ಟಿದ್ದರು. ದೂರದ ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತಿತರ ರಾಜ್ಯಗಳಿಂದಲೂ ಜನರು ಬಂದಿದ್ದರು.

ಬಿಹಾರದಿಂದಲೂ ರೈತ ಕೂಟ ಭೇಟಿ
ಈ ಬಾರಿ ಮೇಳ ವೀಕ್ಷಣೆಗೆ ಬಿಹಾರದಿಂದಲೂ ರೈತರು ಆಗಮಿಸಿದ್ದರು. ಪಾಟ್ನಾ ಸಮೀಪದ ಹಳ್ಳಿಯೊಂದರ ರೈತ ಓಂಪ್ರಕಾಶ್ ಚೌತಾಲ ಮತ್ತು ಅವರ ಆಪ್ತಕೂಟ, ಈ ಮೇಳಕ್ಕೆ ಭೇಟಿ ಕೊಟ್ಟು ಮೇಳದ ಆಯೋಜನೆ ಕಂಡು ಖುಷಿಪಟ್ಟರು. ಹಾಗೂ ಐಐಎಚ್‌ಆರ್ ತಳಿಗಳ ಬಗ್ಗೆ ಮಾಹಿತಿ ಪಡೆದರು.

ಲಕ್ಷ ಗಡಿದಾಟಿದ ನೋಂದಣಿ
ದೇಶದ ಎಲ್ಲೆಡೆಯಿಂದ ರೈತರು, ತೋಟಗಾರಿಕೆ ಮೇಳಕ್ಕೆ ಆಗಮಿಸಿದ್ದು. ಸೋಮವಾರದಿಂದ ಶುಕ್ರವಾರದವರೆಗೆ 85 ಸಾವಿರಕ್ಕೂ ಹೆಚ್ಚು ಜನರು ನೋಂದಣಿ ಮಾಡಿಸಿಕೊಂಡು ಮೇಳವನ್ನು ವೀಕ್ಷಿಸಿದ್ದಾರೆ. ಒಟ್ಟಾರೆ ಆನ್‌ಲೈನ್ ಮತ್ತು ಅಪ್‌ಲೈನ್ ನೋಂದಣಿ 15.5 ಲಕ್ಷ ದಾಖಲಾಗಿದೆ.
ಈ ಬಾರಿ ಮೇಳದ ಪ್ರತ್ಯಕ್ಷ ವೀಕ್ಷಣೆಗೆ ರಾಜ್ಯದ ರೈತರಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗಿತ್ತು. ಮೇಳದ ಕೊನೆಯ ದಿನ ನೋಂದಣಿ ಬಿರುಸುಗೊಂಡಿತು. ಸಂಜೆಯವರೆಗೆ ಜನರು ಬರುತ್ತಲೇ ಇದ್ದರು. ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯಲ್ಲಿ ರೈತರು, ಯುವ ಕೃಷಿ ಉದ್ದಿಮೆಗಳು ಆಗಮಿಸಿದ್ದರು ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಹಾಗೂ ಮೇಳದ ನೋಂದಣಿ ಸಮಿತಿ ಮುಖ್ಯಸ್ಥ ಡಾ. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ರೈತರು ಮತ್ತು ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ
ಮೇಳದ ಆರಂಭದ ಮುನ್ನ ದಿನ ಫೆ.7ರಿಂದಲೇ ಹೊರ ಜಿಲ್ಲೆಗಳು ಮತು ರಾಜ್ಯಗಳಿಂದ ಮೇಳಕ್ಕೆ ಬರುವಂತವರಿಗೆ ವಸತಿ ಸೌಕರ್ಯ ಕಲ್ಪಿಸಲಾಗಿತ್ತು. ಪ್ರಗತಿಪರ ರೈತರು, ಕೃಷಿ ಆಸಕ್ತರು, ವಿಜ್ಞಾನಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ, ಮೇಳದ ಮಳಿಗೆಗಳ ಮಾಲೀಕರು ಮತ್ತು ಸಹಾಯಕರಿಗೆ ತಂಗುವ ವ್ಯವಸ್ಥೆ ಮಾಡಲಾಗಿತ್ತು.
ಹೆಸರಘಟ್ಟದ ಟಿ.ಬಿ. ಕ್ರಾಸ್‌ನಲ್ಲಿ ಮೂರು ಕಲ್ಯಾಣ ಮಂಟಪಗಳು, ಐಐಎಚ್‌ಆರ್ ಹಾಸ್ಟೆಲ್, ಐಐಸಿಆರ್ ಗೆಸ್ಟ್‌ಹೌಸ್, ಜಿಕೆವಿಕೆಯ ಸುವರ್ಣ ಭವನ, ರೈತ ತರಬೇತಿ ಕೇಂದ್ರದಲ್ಲಿ ವಸತಿಗೆ ಅನುವು ಮಾಡಿಕೊಡಲಾಗಿತ್ತು.
ಗುಜರಾತ್, ಒಡಿಶಾ, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಿಂದಲೂ ಬಂದು ರೈತರು ವಾಸ್ತವ್ಯ ಹೂಡಿದ್ದರು. ಪ್ರತಿದಿನ 400ರಿಂದ 500 ಜನರ ವಾಸ್ತವ್ಯಕ್ಕೆ ನೆರವಾಗಲಾಗಿತ್ತು. ಐದಾರು ದಿನಗಳಿಂದ ಸರಿಸುಮಾರು ಮೂರರಿಂದ ಮೂರುವರೆ ಸಾವಿರ ಮಂದಿಗೆ ವಸತಿ ಸೌಕರ್ಯ ಕಲ್ಪಿಸಿದ್ದು ವಿಶೇಷ ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಹಾಗೂ ಮೇಳದ ವಸತಿ ಸಮಿತಿ ಮುಖ್ಯಸ್ಥ ಡಾ. ಟಿ.ಎಂ. ಗಜಾನನ ಹೇಳಿದರು.

ನೂಕುನುಗ್ಗಲಿಲ್ಲದೆ ಸವಿ ಸವಿ ರುಚಿ…
ಐದು ದಿನಗಳ ಈ ಮೇಳದಲ್ಲಿ ಎಂದೂ ಕೂಡ ಊಟೋಪಚಾರಕ್ಕೆ ಜನರ ನೂಕು ನುಗ್ಗಲು ಕಾಣಬರಲಿಲ್ಲ. ಊಟ, ತಿಂಡಿ ವ್ಯವಸ್ಥೆಯನ್ನು ತುಂಬಾ ಚೆನ್ನಾಗಿ ಐಐಎಚ್‌ಆರ್ ವತಿಯಿಂದ ಮಾಡಿಸಲಾಗಿತ್ತು. ಅತ್ಯಂತ ಕಡಿಮೆ ಬೆಲೆಗೆ ಪ್ರತಿದಿನವೂ ತುಂಬಾ ಸ್ವಾದೀಷ್ಟಕರ ತಿಂಡಿ ಮತ್ತು ಊಟ ನೀಡಲಾಯಿತು.

ಪ್ರತಿದಿನ ಬೆಳಿಗ್ಗೆ ಒಂದೂವರೆ ಸಾವಿರ ಜನರಿಗೆ ತಿಂಡಿ, 7ರಿಂದ 8 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.  ತಿಂಡಿಗೆ ಬಿಸಿಬೇಳೆಬಾತ್, ಟೊಮೊಟೊ ಬಾತ್, ತರಕಾರಿ ಪಲಾವು, ಗೀ ರೈಸ್, ಮೆಂತ್ಯಾ ಬಾತ್ ಹೀಗೆ ಬಗೆ ಬಗೆಯ ತಿಂಡಿಗಳನ್ನು ನೀಡಲಾಗುತ್ತಿತ್ತು. ಐದು ದಿನವೂ ಖಾಯಂ ಆಗಿ ಮೊಸರನ್ನ ಬಡಿಸಲಾಯಿತು. ಕಳೆದ ಬಾರಿ ತುಂಬಾ ನೂಕುನುಗ್ಗಲು ಇತ್ತು. ಆದರೆ, ಈ ಬಾರಿ ಎಲ್ಲೂ ಆ ದೃಶ್ಯಗಳು ಕಾಣಬರಲಿಲ್ಲ.

ಬೆಳಗ್ಗೆ 11.30ರಿಂದ ಊಟ ಶುರುವಾದರೆ ಸಂಜೆ 5.30ರ ತನಕವೂ ನಡೆಯುತ್ತಿತ್ತು. 10 ಕೌಂಟರ್‌ಗಳಿದ್ದವು. ಪ್ಲಾಸ್ಟಿಕ್ ಮುಕ್ತವಾಗಿದ್ದು, ತಿಂಡಿ ತಿನಿಸುಗಳನ್ನು ಸೇವಿಸಲು ಅಡಿಕೆ ಹಾಳೆ ಮತ್ತು ಸ್ಟೀಲ್ ಚಮಚಗಳ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 100ರಿಂದ 150 ಜನ ಬಾಣಸಿಗರು, ಊಟೋಪಚಾರಕ್ಕೆ ಅನುವಾಗಿದ್ದರು. ಮೇಳದ ಹತ್ತಾರು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಮತ್ತು ಊಟೋಪಚಾರ ಸಮಿತಿ ಮುಖ್ಯಸ್ಥೆ ಡಾ. ಟಿ.ಆರ್. ರೂಪ ತಿಳಿಸಿದರು.

ಅದ್ಭುತ ಹಲಸಿಗೆ ಮುಗಿಬಿದ್ದ ಜನ
ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಳಿಗೆಗಳಲ್ಲಿ ಜನ ತುಂಬಿ ತುಳುಕಿತ್ತು. ಒಂದೂವರೆ ವರ್ಷದಲ್ಲಿ ಫಲಕೊಡುವ ಅಧ್ಬುತ ಹಲಸು ಮಳಿಗೆಗೆ ಹೆಚ್ಚಿನ ಆಸಕ್ತರು ಮುಗಿಬಿದ್ದರು. ಶುಕ್ರವಾರ ಒಂದೇ ದಿನ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಹಲಸಿನ ಸಸಿಗಳು ಮಾರಾಟವಾಗಿವೆ. ಐದು ದಿನಗಳಲ್ಲಿ 7 ಸಾವಿರ ಗಿಡಗಳನ್ನು ಖರೀದಿ ಮಾಡಲಾಗಿದೆ. ಪುತ್ತೂರು ಮತ್ತು ತೈಲಾಂಡಿನ ಹಲಸಿನ ಸಸಿಗಳಿಗೆ ತುಂಬಾ ಬೇಡಿಕೆಯಿದೆ ಎಂದು ಮಳಿಗೆಯ ಮಾಲೀಕ ಜಾಕ್ ಅನಿಲ್ ಪುತ್ತೂರು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDepartment of HorticultureHorticultureIIHRKannada News WebsiteLatest News KannadaState Newsಐಐಎಚ್‌ಆರ್ಕರ್ನಾಟಕಬೆಂಗಳೂರುಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ
Previous Post

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

Next Post

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!