ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನಕಪುರ ರಸ್ತೆಯ ತಾತಗುಣಿ ಅಗರ ಗ್ರಾಮದ ಶ್ರೀ ಭೂವರಾಹ ಕ್ಷೇತ್ರ ಸ್ಥಾಪನೆಯಾಗಿ ಮೂರು ವರ್ಷಗಳಾದ ಸಂದರ್ಭದಲ್ಲಿ ನಾಲ್ಕನೇ ವಾರ್ಷಿಕೋತ್ಸವದ ನಿಮಿತ್ತ ಜೂನ್ 9 ರಿಂದ 11ರವರೆಗೆ ಹಲವು ಧಾರ್ಮಿಕ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 9ರ ಭಾನುವಾರದಂದು ವಿಶೇಷ ಮಧು ಅಭಿಷೇಕ, ಶ್ರೀ ಹರಿವಾಯುಸ್ತುತಿ ಹೋಮ, ಗುರುಪಾದುಕಾ ಪೂಜಾ, ಪ್ರಹ್ಲಾದ ರಾಜರ ರಥೋತ್ಸವ, ಭಜನೆ, ಸೋಮವಾರ ಜೂನ್ ಹತ್ತರಂದು ಶ್ರೀ ಸ್ವಪ್ನ ವೃಟದಾವನಾಖ್ಯಾನ ಮಂತ್ರ ಹೋಮ ನಡೆಯಲಿದೆ.
ಜೂನ್ 11ರ ಮಂಗಳವಾರ ಪುರುಷ ಸೂಕ್ತ ಹೋಮ, ಭುವನಗಿರಿ ಆಶ್ರಮದ ಪೂಜ್ಯಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರಿಂದ ಕಲಶಾಭಿಷೇಕ, ಸಂಸ್ಥಾನ ಪೂಜೆ, ಮುದ್ರಾಧಾರಣೆ, ಆಶೀರ್ವಚನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿರುತ್ತಾರೆ.
Also read: ಗುರುವಿನ ಅನುಸರಣೆಯಿಂದ ಜೀವನ ಕ್ರಮದ ಮಾರ್ಗ ಕಲಿಕೆ ಸಾಧ್ಯ: ಸತ್ಯಾತ್ಮತೀರ್ಥ ಸ್ವಾಮೀಜಿ
ಅಗರ ಗ್ರಾಮ ಪಂಚಾಯಿತಿ ಎದುರಿನ ರಸ್ತೆಯಲ್ಲಿರುವ ಪ್ರಶಾಂತ ವಾತಾವರಣದ ಶ್ರೀಮಠದಲ್ಲಿ ಭೂವರಾಹ ದೇವರು, ಪ್ರಾಣದೇವರು, ಕಲಿಯುಗ ಕಾಮಧೇನು ಕಲ್ಪವೃಕ್ಷರೆನಿಸಿದ ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಸನ್ನಿಧಾನ ಇರುವ ಅಪೂರ್ವ ತಾಣ ಇದಾಗಿದೆ.
ಭೂವರಾಹ ದೇವರಿಗೆ ಪ್ರಿಯ ಪ್ರಿಯವೆನಿಸಿದ ರೇವತಿ ನಕ್ಷತ್ರದಂದು ಕ್ಷೀರಭಿಷೇಕ ಮಾಡಿಸಿದರೆ ಭೂಸಂಬಂಧಿತ ಕೋರಿಕೆಗಳು ಶೀಘ್ರ ನೆರವೇರುತ್ತದೆ ಎಂಬುದು ಭಕ್ತರ ನಂಬಿಕೆ. ಭೂವರಾಹ ಕ್ಷೇತ್ರದಲ್ಲಿ ನಿತ್ಯ ಅನ್ನ ಸಂತರ್ಪಣೆಗಾಗಿ ತುಲಾಭಾರ ಕಾರ್ಯಕ್ರಮದಲ್ಲಿ ಯಥಾಶಕ್ತಿ ದವಸ ಧಾನ್ಯ ಸಮರ್ಪಿಸಲು ಮತ್ತು ಗೋದಾನ-ಗೋಗ್ರಾಸಗಳಿಗೂ ಅವಕಾಶವಿದೆ.
ವಿವರಗಳಿಗೆ 9886767780/9483704996 ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















