No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಹಾಲಿ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕೆ? ಬೆಸ್ಕಾಂ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2025
in ಬೆಂಗಳೂರು ನಗರ
0
Smart Meter Purchase Price is Scientific and Executed with Full Transparency: BESCOM MD Shivashankara
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಸ್ಕಾಂ #BESCOM ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್‌ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್‌ ಮೀಟರ್ ದರ #Smart Meter ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌.ಶಿವಶಂಕರ್‌ ಹೇಳಿದ್ದಾರೆ.

ರಾಜ್ಯದ ವಿದ್ಯುತ್‌ ಪರಿಸ್ಥಿತಿ ಹಾಗೂ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಇಂಧನ ಇಲಾಖೆಯ #Electricity Department ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಅವರ ನೇತೃತ್ವದಲ್ಲಿ ಸೋಮವಾರ ಬೆಸ್ಕಾಂ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ  ನಿಯಂತ್ರಣ ಆಯೋಗ  ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗುವುದು. ಹಾಲಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಐಚ್ಛಿಕ. ಹೊಸ ಹಾಗೂ ತಾತ್ಕಾಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕಾಗುತ್ತದೆ,” ಎಂದಿದ್ದಾರೆ.

Also read: ಆಮೆ ನಡಿಗೆಯ ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ | ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?

“ನೈಜ ಸಮಯದ ವಿದ್ಯುತ್‌ ಬಳಕೆ ಮಾಹಿತಿ ಜತೆಗೆ ವಿದ್ಯುತ್ ಬಿಲ್ ಪಾವತಿಗೆ ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿರುವ ಇಂಧನ ಇಲಾಖೆಯು ಸ್ಮಾರ್ಟ್ ಮೀಟರ್ ಯೋಜನೆ ಜಾರಿಗೊಳಿಸಿದೆ. ಮೀಟರ್‌ ಹಾಗೂ ಬಿಲ್‌ ಲೋಪದೋಷಗಳನ್ನು ಸರಿಪಡಿಸಲು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡುತ್ತಿದೆ. ಟಿಓಡಿ (Time of the day) ಸೌಲಭ್ಯ, ರಿಮೋಟ್‌ ರೀಡಿಂಗ್‌, ಆಟೋ ಕನೆಕ್ಷನ್‌ ಮತ್ತು ಆಟೋ ಡಿಸ್‌ಕನೆಕ್ಷನ್‌ ಇದರಿಂದ ಸಾಧ್ಯವಾಗಲಿದೆ. ವಿದ್ಯುತ್‌ ಕಡಿತವಾದಾಗ ವಿದ್ಯುತ್‌ ವಿತರಣಾ ಕಂಪನಿಗೆ ಕ್ಷಿಪ್ರ ಮಾಹಿತಿ ತಲುಪಿ, ವಿದ್ಯುತ್ ಮರು ಸ್ಥಾಪನೆ ಪ್ರಕ್ರಿಯೆ ಸುಲಭ ಮತ್ತು ತ್ವರಿತಗೊಳ್ಳುವುದು,” ಎಂದು ಅವರು ಹೇಳಿದರು.

“ಬಹುತೇಕ ರಾಜ್ಯಗಳು ಆರ್‌ಡಿಎಸ್‌ಎಸ್‌ ಅಳವಡಿಸಿಕೊಂಡಿದ್ದು, ಅದರ ಮಾರ್ಗಸೂಚಿಯನ್ವಯ ಆ ರಾಜ್ಯಗಳು, ಸ್ಮಾರ್ಟ್ ಮೀಟರ್ ಮತ್ತು ಸಾಫ್ಟ್ ವೇರ್‌ ವೆಚ್ಚವೂ ಸೇರಿಸಿ ಟೆಂಡರ್ ಕರೆದಿದ್ದವು. ಆ ರಾಜ್ಯಗಳಲ್ಲಿ ವಿದ್ಯುತ್‌ ಸರಬರಾಜು ಕಂಪನಿಗಳೇ ಸ್ಮಾರ್ಟ್‌ ಮೀಟರ್ ಖರೀದಿಸಿ ಗ್ರಾಹಕರಿಗೆ ಅಳವಡಿಸಿದ ಬಳಿಕ, ಸ್ಮಾರ್ಟ್‌ ಮೀಟರ್‌ ವೆಚ್ಚ ಹಾಗೂ ಅದರ ತಾಂತ್ರಿಕ ನಿರ್ವಹಣವಾ ವೆಚ್ವವನ್ನು ವಿದ್ಯುತ್ ದರಕ್ಕೆ ಹೊಂದಾಣಿಕೆ ಮಾಡಿ ವಸೂಲಿ ಮಾಡುತ್ತವೆ. ಉದಾಹರಣೆಗೆ, ಕೇಂದ್ರ ಸರ್ಕಾರದ ಸಬ್ಸಿಡಿ ಸೇರಿ 10 ವರ್ಷಗಳ ಕಾಲ ಪ್ರತಿ ಸ್ಮಾರ್ಟ್ ಮೀಟರ್‌ಗೆ ಪ್ರತಿ ತಿಂಗಳು ತಗಲುವ ವೆಚ್ಚ -ಮಹಾರಾಷ್ಟ್ರದಲ್ಲಿ 120.34 ರೂ., ಪಶ್ಚಿಮ ಬಂಗಾಳದಲ್ಲಿ 117.81 ರೂ., ಸಿಕ್ಕಿಂ ರಾಜ್ಯದಲ್ಲಿ 148.88 ರೂ., ಮಣಿಪುರದಲ್ಲಿ 130.30 ರೂ., ಮಧ್ಯಪ್ರದೇಶದಲ್ಲಿ 115.84 ರೂ. ಆಗುತ್ತದೆ. ಇದನ್ನು ವಿದ್ಯುತ್‌ ಸರಬರಾಜು ಕಂಪನಿಗಳು ವಿದ್ಯುತ್‌ ಬಿಲ್‌ಗೆ ಹೊಂದಾಣಿಕೆ ಮಾಡಿ ಗ್ರಾಹಕರಿಂದ ಪಡೆಯುತ್ತವೆ. ಅಲ್ಲದೇ, ಈ ರಾಜ್ಯಗಳಲ್ಲಿ ಏಕಕಾಲದಲ್ಲಿ (Bulk replacement) ಎಲ್ಲಾ ಗ್ರಾಹಕರ ಸ್ಥಾಪನಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸುತ್ತಿವೆ,” ಎಂದು ವಿವರಿಸಿದರು.

ನಮ್ಮ ರಾಜ್ಯದ ಮಾದರಿಯನ್ನು ವಿವರಿಸಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು,  “ಕೆಇಆರ್‌ಸಿ ಮಾರ್ಗಸೂಚಿ ಅನ್ವಯ, ಕರ್ನಾಟಕದಲ್ಲಿ ಸ್ಮಾರ್ಟ್‌ ಮೀಟರ್ ದರ (ಸಿಂಗಲ್‌ ಫೇಸ್ – 4,998 ರೂ.) ಗ್ರಾಹಕರೇ ಭರಿಸುತ್ತಿದ್ದಾರೆ. ಜತೆಗೆ, ಪ್ರತಿ ತಿಂಗಳ ತಾಂತ್ರಿಕ ನಿರ್ವಹಣಾ ವೆಚ್ಚ 75 ರೂ. ಮೊತ್ತವನ್ನು ಬೆಸ್ಕಾಂ ಭರಿಸಿ, ನಂತರ ನಿರ್ವಹಣಾ ವೆಚ್ಚದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಇತರೆ ರಾಜ್ಯಗಳ ದರದಂತೆ ಲೆಕ್ಕ ಹಾಕಿದರೆ, ಕರ್ನಾಟಕದಲ್ಲಿ ಈ ಮೊತ್ತ 116.65 ರೂ. (ಸ್ಮಾರ್ಟ್‌ ಮೀಟರ್‌ ಮತ್ತು ತಂತ್ರಜ್ಞಾನ ನಿರ್ವಹಣೆ ವೆಚ್ಚ ಜತೆಗೂಡಿದಲ್ಲಿ) ಆಗುತ್ತದೆ. ಹೀಗಾಗಿ ಇತರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಸ್ಮಾರ್ಟ್ ಮೀಟರ್ ದರ ಹೆಚ್ಚಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು,”ಎಂದು ಸ್ಪಷ್ಟಪಡಿಸಿದರು.
“ರಾಜ್ಯದಲ್ಲಿ ಕೇವಲ ತಾತ್ಕಾಲಿಕ ಹಾಗೂ ಹೊಸ ಸ್ಥಾಪನಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುವುದರಿಂದ ಈ ಸಂಖ್ಯೆಯೂ ಕಡಿಮೆ ಇದ್ದು, ರಾಜ್ಯದ ವಿವಿಧ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಸ್ಮಾರ್ಟ್‌ ಮೀಟರ್‌ ಅಳವಡಿಸಬೇಕಾಗುತ್ತದೆ. ಅಲ್ಲದೇ, ಈ ಕೆಲಸಕ್ಕಾಗಿ ನುರಿತ ಕೆಲಸಗಾರರನ್ನು ಬಿಡ್ಡುದಾರರರು  5 ವರ್ಷಗಳ ಕಾಲ  ಇರಿಸಬೇಕಿರುತ್ತದೆ. ಇದರಿಂದಾಗಿ ಅವರು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಮತ್ತು ಕಡಿಮೆ ಮೀಟರ್‌ಗಳನ್ನು ಬದಲಾಯಿಸಲು ಅನೇಕ ಬಾರಿ ಓಡಾಡಬೇಕಾಗುತ್ತದೆ. ಹೀಗಾಗಿ ಸ್ಮಾರ್ಟ್‌ಮೀಟರ್‌ ದರ ಸಮಂಜಸವಾಗಿದೆ,”ಎಂದು ವಿವರಿಸಿದರು.

“2025ರ ಫೆಬ್ರವರಿ 15ರಿಂದ ನಗರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಪ್ರಕ್ರಿಯೆ ಆರಂಭವಾಗಲಿದೆ. ಬೆಸ್ಕಾಂನಲ್ಲಿ ಸದ್ಯ, 30,600 ಸ್ಮಾರ್ಟ್‌ ಮೀಟರ್‌ಗಳ ದಾಸ್ತಾನು ಇದೆ,” ಎಂದು ತಿಳಿಸಿದರು.
ನಿಯಮಾನುಸಾರ ಟೆಂಡರ್‌ ಪ್ರಕ್ರಿಯೆ

“ಕೇಂದ್ರ ವಿದ್ಯುತ್ ಸಚಿವಾಲಯ ನಿಗದಿಪಡಿಸಿರುವ ಸಾಮಾನ್ಯ ಬಿಡ್ಡಿಂಗ್ ದಾಖಲೆ (Standard Bidding Document)ಗಳ ಪ್ರಕಾರ ಹಾಗೂ ಕೆಟಿಪಿಪಿ ಕಾಯ್ದೆ ಅನುಸಾರ 2024ರ ಸೆ. 26ರಂದು ಟೆಂಡರ್ ಕರೆಯಲಾಗಿತ್ತು. ಬೆಸ್ಕಾಂ ನಿರ್ದೇಶಕರ ಮಂಡಳಿಯ ಅನುಮೋದನೆ ಮೇರೆಗೆ, ಕಡಿಮೆ ದರ ಬಿಡ್‌ ಮಾಡಿದ್ದ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಸಂಸ್ಥೆಗೆ  2024ರ ಡಿ.23ರಂದು ಗುತ್ತಿಗೆ ನೀಡಲಾಯಿತು,”ಎಂದು ವಿವರಿಸಿದರು.

ಸ್ಮಾರ್ಟ್‌ ಮೀಟರ್‌ ವೈಶಿಷ್ಟ್ಯ ಏನು?

ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್‌ ಮೀಟರ್‌ಗಳು ಜಿಪಿಆರ್‌ಎಸ್‌ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ. ಅಡ್ವಾನ್ಸ್‌ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (AMI) ತಂತ್ರಜ್ಞಾನದ ಸ್ಮಾರ್ಟ್‌ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಎಸ್ಕಾಂಗಳ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್  ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ. ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್‌ ಮಾಡಿಕೊಳ್ಳಬಹುದು. ಗ್ರಾಹಕರು ಮುಂಚಿತವಾಗಿ ಹಣ ಪಾವತಿಸಿ ವಿದ್ಯುತ್‌ ಬಳಸಬಹುದಾಗಿದೆ. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

http://kalpa.news/wp-content/uploads/2025/02/Kumadvati-College-Shikaripura-2025-Video.mp4

ಏನಿದು ಆರ್‌ಡಿಎಸ್ಎಸ್?

ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22 ನೇ ಸಾಲಿನಲ್ಲಿ ಕೇಂದ್ರದ ಇಂಧನ ಸಚಿವಾಲಯವು ಪರಿಷ್ಕೃತ ವಿತರಣಾ ವಲಯ ಯೋಜನೆ (RDSS- Revamped Distribution Sector Scheme) ರೂಪಿಸಿತ್ತು. ಈ ಯೋಜನೆ ಒಪ್ಪಿಕೊಂಡಿದ್ದರೆ,  ಎಲೆಕ್ಟ್ರಿಕಲ್ ಮೂಲ ಸೌಕರ್ಯವನ್ನು ಒದಗಿಸಲು ಕೇಂದ್ರ ಸರ್ಕಾರ ಶೇ. 60ರಷ್ಟು ಅನುದಾನ ನೀಡುತ್ತಿತ್ತು. ಜತೆಗೆ, ಸ್ಮಾರ್ಟ್ ಮೀಟರ್‌ಗಳ ಬದಲಾವಣೆ ಮಾಡಲು ಒಟ್ಟು ವೆಚ್ಚದ ಶೇ.15ರಷ್ಟು ಅಥವಾ 900 ರೂ. ಕೇಂದ್ರ ಸರ್ಕಾರ ನೀಡುತ್ತಿತ್ತು. ಆದರೆ, ರಾಜ್ಯ ಸರ್ಕಾರಗಳು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಾಕಿ ಇರುವ ಸಬ್ಸಿಡಿ, ಇತರೆ ಬಾಕಿಗಳನ್ನು ಪಾವತಿಸಿದರೆ ಮಾತ್ರ ಯೋಜನೆಯ ಅನುಕೂಲ ಪಡೆದುಕೊಳ್ಳಬಹುದು ಎಂದು ಹೇಳಿತ್ತು. ಅಲ್ಲದೆ, ಎಲ್ಲಾ ಗ್ರಾಹಕರೂ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವುದು ಕಡ್ಡಾಯ ಎಂದು ಹೇಳಿತ್ತು. ಈ ಷರತ್ತುಗಳನ್ನು ಅಂದಿನ ಸರ್ಕಾರ ಒಪ್ಪದ ಕಾರಣ ರಾಜ್ಯವು ಕೇಂದ್ರದ ಆರ್ ಡಿಎಸ್ ಯೋಜನೆಯನ್ನು ಒಪ್ಪಿಕೊಂಡಿರಲಿಲ್ಲ. ಕೇಂದ್ರ ಸರ್ಕಾರದ ಆರ್ ಡಿಎಸ್ ಯೋಜನೆ ಒಪ್ಪಿಕೊಂಡಿದ್ದರೆ, ಹಾಲಿ ಗ್ರಾಹಕರು ಸೇರಿದಂತೆ ಎಲ್ಲರೂ ಸ್ಮಾರ್ಟ್ ಮೀಟರ್ ಅವಡಿಸಿಕೊಳ್ಳಲೇ ಬೇಕಾದ ಅನಿವಾರ್ಯತೆ ಇತ್ತು. ಆರ್ ಡಿಎಸ್ ಯೋಜನೆಯಡಿ ಸ್ಮಾರ್ಟ್ ಮೀಟರ್ ಮತ್ತು ಸಾಫ್ಟ್‌ವೇರ್ ಸೇರಿ ದರ ನಿಗದಿಪಡಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreBESCOMElectricity DepartmentKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSmart Meterಇಂಧನ ಇಲಾಖೆಬೆಂಗಳೂರುಬೆಸ್ಕಾಂಸ್ಮಾರ್ಟ್‌ ಮೀಟರ್
Share196Tweet123Send
Previous Post

ಆಮೆ ನಡಿಗೆಯ ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ | ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?

Next Post

ಕೇರಳ ಬಿಜೆಪಿಗೆ ಬಲ ನೀಡಲಿದೆ ರಾಜೀವ್‌ ಚಂದ್ರಶೇಖರ್‌ ಸಾರಥ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳ ಬಿಜೆಪಿಗೆ ಬಲ ನೀಡಲಿದೆ ರಾಜೀವ್‌ ಚಂದ್ರಶೇಖರ್‌ ಸಾರಥ್ಯ

ಕೇರಳ ಬಿಜೆಪಿಗೆ ಬಲ ನೀಡಲಿದೆ ರಾಜೀವ್‌ ಚಂದ್ರಶೇಖರ್‌ ಸಾರಥ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 11, 2026
ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

March 11, 2026
ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL