ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ಶ್ರೀ ನಾಟ್ಯಂ ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ – 2024 ಆಯೋಜಿಸಲಾಗಿದೆ.
ಬೆಂಗಳೂರಿನ ಶ್ರೀನಿಧಿ ಬಡಾವಣೆಯ 8 ನೇ ಮುಖ್ಯರಸ್ತೆಯಲ್ಲಿರುವ ಶ್ರೀನಿಧಿ ಸಭಾಂಗಣದಲ್ಲಿ ಡಿ. 22ರ ಬೆಳಗ್ಗೆ 10ಕ್ಕೆ ಸ್ಪರ್ಧೆ ನಡೆಸಲಾಗುತ್ತದೆ.
ಎರಡು ಪ್ರಾಕಾರದ ಸ್ಪರ್ಧೆ:
ಭರತನಾಟ್ಯ ಮತ್ತು ಜಾನಪದ ನೃತ್ಯ – ವಿಭಾಗಗಳಲ್ಲಿ ಪ್ರತ್ಯೇಕವಾದ ಸ್ಪರ್ಧೆ ನಡೆಯಲಿದೆ. 8 ವರ್ಷದ ಒಳಗಿನವರು, ಎಂಟರಿಂದ 12ರಿಂದ ವರ್ಷದವರು, 16 ವರ್ಷ ಮೇಲ್ಪಟ್ಟವರ ಒಟ್ಟು ಮೂರು ವಿಭಾಗಗಳಲ್ಲಿ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಸಮಾಧಾನಕರ ಬಹುಮಾನ ವಿತರಿಸಲಾಗುವುದು.
Also read: ವಾಣಿಜ್ಯ ವಿದ್ಯಾರ್ಥಿಗಳ ಕೌಶಲ್ಯತೆ ರೂಪಿಸಲು ಎನ್ಇಎಸ್ ಮಹತ್ವದ ಹೆಜ್ಜೆ
ಆಸಕ್ತ ಸ್ಪರ್ಧಿಗಳು ಸ್ಪರ್ಧಾ ಸಂದರ್ಭದಲ್ಲಿ ತಮ್ಮ ಜನ್ಮ ದಿನಾಂಕ ಖಾತರಿ ಪಡಿಸುವ ಆಧಾರ್ ಅಥವಾ ಯಾವುದೇ ದಾಖಲೆಗಳ ಪ್ರತಿಗಳನ್ನು ತರಬೇಕು . ಹೆಸರು ನೋಂದಣಿ ಮತ್ತು ವಿವರಗಳಿಗೆ 9900088983 ಮತ್ತು 9513816649 ಸಂಪರ್ಕಿಸಬಹುದು ಎಂದು ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.
ಸಂಸ್ಥೆಯ ಹಿರಿಮೆ:
ಬೆಂಗಳೂರಿನ ಕೊಣನ ಕುಂಟೆಯಲ್ಲಿ 2009ರಲ್ಲಿ ಶಿವಮೊಗ್ಗ ಮೂಲದ ವಿದುಷಿ ಪುಷ್ಪಲತಾ ಅವರಿಂದ ಚಾಲನೆಗೊಂಡ ಶ್ರೀ ನಾಟ್ಯಂ ಕಲಾ ಕೇಂದ್ರವು ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಧಾರೆ ಎರೆದಿದೆ.
ಮಕ್ಕಳಿಗೆ ಮಹತ್ವದ ಸೇವೆಯನ್ನು ಮಾಡುತ್ತ ಲೇ ರಾಜ್ಯದ ಪ್ರತಿಷ್ಠಿತ ಕರಾವಳಿ ಉತ್ಸವ, ಹಂಪಿ ಉತ್ಸವ, ಪಟ್ಟದಕಲ್ಲು ಉತ್ಸವ ಮತ್ತು ಮೈಸೂರು ದಸರಾ ಸೇರಿದಂತೆ ನೂರಾರು ಕಾರ್ಯಕ್ರಮಗಳಲ್ಲಿ ತನ್ನ ಛಾಪನ್ನು ಒತ್ತಿದೆ . ವಿದುಷಿ ಪುಷ್ಪಲತಾ ನೇತೃತ್ವದ ಈ ತಂಡ ಕಳೆದ ವರ್ಷ ಪಾಂಡಿಚೇರಿ ಮತ್ತು ಚಿದಂಬರಂನಲ್ಲಿ ಹಮ್ಮಿಕೊಂಡಿದ್ದ ಗಿನ್ನಿಸ್ ಮತ್ತು ಲಿಮ್ಕಾ ದಾಖಲೆಯ ಬೃಹತ್ ನೃತ್ಯ ಪ್ರಸ್ತುತಿಗಳಲ್ಲಿ ತನ್ನ ವಿಶೇಷತೆಯನ್ನು ಪ್ರದರ್ಶಿಸಿರುವುದು ವಿಶ್ವ ಮಾನ್ಯತೆಯನ್ನು ತಂದುಕೊಟ್ಟಿದೆ . ರಂಗ ಪ್ರವೇಶವನ್ನೂ ಮಾಡಿಸಿ ನವ, ಯುವ ಕಲಾವಿದರಿಗೆ ಶ್ರೀ ನಾಟ್ಯಂ ಸಂಸ್ಥೆ ಮನ್ನಣೆ ಒದಗಿಸಿದೆ.
ಮುಂಬರುವ ಜನವರಿಯಲ್ಲಿ ಮಲೇಷ್ಯಾದಲ್ಲಿ ಹಮ್ಮಿಕೊಂಡಿರುವ ವಿಶೇಷ ಸಂಕ್ರಾಂತಿ ಸಂಭ್ರಮ ಬೃಹತ್ ಕಾರ್ಯಕ್ರಮದಲ್ಲಿ ವಿದುಷಿ ಪುಷ್ಪಲತಾ ನೇತೃತ್ವದಲ್ಲಿ ಶ್ರೀನಾಟ್ಯಂ ಕಲಾ ಕೇಂದ್ರದ ನುರಿತ ಕಲಾವಿದೆಯರು ಕಲಾ ಪ್ರದರ್ಶನ ಮಾಡಲಿರುವುದು ಕರ್ನಾಟಕಕ್ಕೆ ಹೆಮ್ಮೆ ಮತ್ತು ಪ್ರತಿಷ್ಠೆ ಎನಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post