No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಾನು ಮುಷ್ತಾಕ್ ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ. ಪ್ರಭಾಕರ್

"ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 29, 2025
in ಬೆಂಗಳೂರು ನಗರ
0
ಬಾನು ಮುಷ್ತಾಕ್ ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ. ಪ್ರಭಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾನು ಮುಷ್ತಾಕ್‌ #Banu Mushtaq ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದರು.
ವಿಚ್ಛಿದ್ರಕಾರಿ ಶಕ್ತಿಗಳು, ಮತಾಂದತೆ ಹಾಗೂ ಮೂಲಭೂತವಾದ ಒಟ್ಟಾಗಿ ಬೆಸೆದುಕೊಂಡು ಜಗತ್ತನ್ನು ನಾಶ ಮಾಡುತ್ತಿರುವ ಹೊತ್ತಲ್ಲಿ, ಭಾನು ಮುಷ್ತಾಕ್‌ ಅವರ ಮಾನವೀಯತೆಯ ಬೆಸುಗೆ ಮತ್ತು ಭಾರತೀಯತೆಯ ಬೆಸುಗೆಗೆ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಸಾಹಿತ್ಯದ ಹೆಸರಿನಲ್ಲಿ ಕೊಡುತ್ತಿರುವ ಈ ಸಂದೇಶವು, ಎಲ್ಲ ಮೂಲಭೂತವಾದಿ ಶಕ್ತಿಗಳಿಗೆ ಕೊಟ್ಟಿರುವ ಕಪಾಳಮೋಕ್ಷ ಎಂದು ನಾನು ಭಾವಿಸುತ್ತೇನೆ. ಇದು ಎಲ್ಲಾ ರೀತಿಯ ಧಾರ್ಮಿಕ ದರ್ಪಗಳಿಗೆ ಕೊಟ್ಟಿರುವ ಏಟು ಮತ್ತು ಮಾನವೀಯ ಧರ್ಮಕ್ಕೆ, ಎಲ್ಲಾ ಧರ್ಮದಲ್ಲಿರುವ ಮಾನವೀಯ ವ್ಯಕ್ತಿತ್ವಗಳಿಗೆ ಸಿಕ್ಕಿರುವ ಮನ್ನಣೆ ಕೂಡ ಆಗಿದೆ.
ಕೆಲವು ಪ್ರಗತಿಪರ ಲೇಖಕರೇ ಬಾನು ಗಿಂತ ದೊಡ್ಡ ಸಾಹಿತಿಗಳಿದ್ದಾರೆ ಎಂದು ಗೊಣಗಿದ್ದು ನನಗೆ ಗೊತ್ತಿದೆ. ನಿಜ, ಭಾನು ಅವರಿಗಿಂತ ಹೆಚ್ಚೆಚ್ಚು ಪುಸ್ತಕ ಪ್ರಕಟಿಸಿದ ಲೇಖಕರಿದ್ದಾರೆ ಹಾಗೆಯೇ ದೊಡ್ಡ ಮಹಿಳಾ ಲೇಖಕಿಯರು ಬಹಳಷ್ಟು ಇದ್ದಾರೆ. ಸೌಂದರ್ಯ ಮಿಮಾಂಸೆಯ ದೃಷ್ಟಿಯಿಂದ ಬಾನುವನ್ನು ಮೀರಿಸಿದ ಲೇಖಕಿಯರೂ ಇದ್ದಾರೆ, ಅವರಿಗೆ ಪ್ರಶಸ್ತಿ ದೊರಕಿದರೂ ನನಗೆ ವೈಯುಕ್ತಿಕವಾಗಿ ಸಂತೋಷವೇ.

ಆದರೆ ಬಾನು ಅವರಿಗೆ ಪ್ರಶಸ್ತಿ ಲಭಿಸಿರುವುದು ಹೆಚ್ಚಿನ ಸಂತೋಷವನ್ನು ನೀಡಿದೆ ಏಕೆಂದರೆ ಮೂಲಭೂತವಾದಿ ಶಕ್ತಿಗಳಿಗೆ ಎಲ್ಲರೂ ಶರಣಾಗುತ್ತಿರುವ ಅಸಹಾಯಕತೆಯ ಹೊತ್ತಿನಲ್ಲಿ ಬಾನು ಅವರು ರಾಜಿ ಮಾಡಿಕೊಳ್ಳದೆ ಹೇಳಬೇಕಾದ್ದನ್ನು ಮುಲಾಜಿಲ್ಲದೆ ತಮ್ಮ ಕತೆಗಳಲ್ಲಿ, ಭಾಷಣಗಳಲ್ಲಿ, ಲೇಖನಗಳಲ್ಲಿ ದಾಖಲಿಸಿದ್ದಾರೆ. ಈ ಕಾರಣಕ್ಕೆ ಬಾನು ಮುಷ್ತಾಕ್‌ ಅವರಿಗೆ ಸಿಕ್ಕಿರುವ ಮನ್ನಣೆ ಕನ್ನಡದ ಮೂಲಕ ಇಡೀ ನಾಗರಿಕತೆಯ ಆಶಯಕ್ಕೆ ಸಿಕ್ಕಿರುವ ಮನ್ನಣೆ ಅಂಥಲೇ ಭಾವಿಸುತ್ತೇನೆ. ಇದಕ್ಕಾಗಿ ಹೆಚ್ಚು ಸಂತೋಷ ಪಡುತ್ತೇನೆ.
ಬಾನು ಅವರು ತಾವು ಬದುಕಿರುವ ಸಂದರ್ಭವನ್ನು, ಸಮಾಜವನ್ನು ಮಾತ್ರವಲ್ಲ ದೇವರನ್ನೂ ಕೂಡ ಹೆಣ್ಣಿನ ದೃಷ್ಟಿಯಿಂದಲೇ ನೋಡಿದ್ದಾರೆ.

ಬಂಡಾಯ ಸಾಹಿತ್ಯದ ಧಾರೆಯಲ್ಲಿ ಬಾನು ಅವರದ್ದು ವಿಶಿಷ್ಠವಾದ ಧ್ವನಿ. ತಮ್ಮ ಕಥೆಗಳಲ್ಲಿ ಮೆಲು ಧ್ವನಿಯಲ್ಲಿ ಇದು ಸಾಧ್ಯವಿದೆಯೇ, ಹೀಗಿರಬಹುದೇ, ಹೀಗಿರುವುದು ಸರಿಯೇ, ಇದಕ್ಕೆ ನಿಮ್ಮ ಅಂತ:ಸಾಕ್ಷಿ ಒಪ್ಪುತ್ತದೆಯೇ ? ಎಂಬ ಪ್ರಶ್ನೆಗಳನ್ನು ತಮಗೆ ತಾವೇ ಕೇಳಿಕೊಳ್ಳುತ್ತಾ ಇಡೀ ನಾಗರಿಕತೆಯನ್ನೇ ಪ್ರಶ್ನಿಸುತ್ತಾರೆ.

ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಘೋಷಣೆಯಾದ ಬಳಿಕ ಬಾನು ಅವರ ‘ಒಮ್ಮೆ ಹೆಣ್ಣಾಗು ಪ್ರಭುವೆ’ ಕಥೆಯನ್ನು ನಾನು ಓದಿದೆ. ಇದರಲ್ಲಿ ಅಂತ:ಕರಣವಿರುವ ದೇವರೂ ಸಹ ಗಂಡಾಳಿಕೆಯನ್ನು ಎತ್ತಿಹಿಡಿಯುವುದಾದರೇ, ಅವನು ದೇವರು ಹೇಗಾಗಲು ಸಾಧ್ಯ? ಹೆಣ್ಣನ್ನು ಮನುಷ್ಯಳಾಗಿ ಒಪ್ಪಿಕೊಳ್ಳುವ ಶಕ್ತಿ ಇರುವ ದೇವರನ್ನು ಒಪ್ಪಿಕೊಳ್ಳಬಹುದು, ಇಂತಹ ಶಕ್ತಿಯನ್ನು ಅಂತಿಮ ಶಕ್ತಿಯೆಂದು ಒಪ್ಪಿಕೊಳ್ಳಬಹುದು, ಹೆಣ್ಣಿನ ಸಂವೇದನೆಯನ್ನು ಬೆಳೆಸಿಕೊಳ್ಳಲು ದೈವವಾದರೂ ಪ್ರೇರೇಪಿಸಲಿ ಎಂಬ ಭಾವವನ್ನು ವ್ಯಕ್ತಪಡಿಸಿದ್ದಾರೆ.
‘ದೇವರು ಮತ್ತು ಅಪಘಾತ’ ನನಗೆ ಇಷ್ಟವಾದ ಅತ್ಯುತ್ತಮ ಕಥೆಗಳಲ್ಲಿ ಒಂದು. ಇದರಲ್ಲಿ ಹಸಿವಿನ ಕನ್ನಡಿಯಲ್ಲಿ ದೇವರನ್ನು ಪ್ರಶ್ನಿಸುತ್ತಾರೆ. ಈ ಕತೆಯಲ್ಲಿ ಬರುವ ಒಂದು ಸಾಲು ನನ್ನನ್ನು ತೀವ್ರವಾಗಿ ಕಾಡಿತು. ಹೆಣವನ್ನು ಶುಚಿಗೊಳಿಸುವ ಕೆಲಸ ಮಾಡುವ ಆ ಹೆಣ್ಣು, “ಈ ಹಳ್ಳಿಯಲ್ಲಿ ಒಂದೂ ಸಾವಾಗಿಲ್ಲ, ಹೀಗಿರುವಾಗ ನಾವು ಬದುಕುವುದಾದರೂ ಹೇಗೆ? ಎಂದು ದೇವರನ್ನು ಪ್ರಶ್ನಿಸುತ್ತಾರೆ. ಸಾವಿನ ಮೂಲಕವೇ ಬದುಕನ್ನು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆಯನ್ನು ಕತೆಯಲ್ಲಿ ತೋರಿಸಲಾಗಿದೆ. ಕಥೆಯಲ್ಲಿ , ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳು ಸಾವಿಗೀಡಾದಾಗ, ಆ ತಾಯಿಯಲ್ಲಿ ಸಂತೋಷ ಕಾಣುತ್ತದೆ. ಸಾವು ಕಂಡಾಗ ಇಸ್ಲಾಂನಲ್ಲಿ ಹೇಳುವ ಉದ್ಗಾರವೂ ಕೂಡ ತನಗೆ ಮರೆತುಹೋಗಿ, ಇಂದು ತನ್ನ ಮನೆಯಲ್ಲಿ ಎಲ್ಲರೂ ಹೊಟ್ಟೆತುಂಬ ಉಣಬಹುದು ಎಂಬ ಭಾವ ವ್ಯಕ್ತವಾಗಿದೆ.

ಸಾವಿನ ಮನೆಯಲ್ಲಿ ತಾನು ಅನ್ನ ತಿನ್ನುವಾಗ ಮನೆಯಲ್ಲಿ ಹಸಿದ ಬಾಣಂತಿ ಮಗುವಿನ ಜ್ಞಾಪಕವಾಗಿ, ತಾನು ಆಹಾರ ಸೇವಿಸಲೋ ,ಬೇಡವೋ ಎಂಬ ಬಗ್ಗೆ ತಾಯಿಯಲ್ಲಿ ಗೊಂದಲ ಶುರುವಾಗುತ್ತದೆ. ‘ಕೊನೆಗೂ ಕರುಳಿನ ಕೂಗು ಗೆದ್ದವು’ ಎಂದು ಹಸಿವಿನ ಕೂಗು ಗೆದ್ದಿರುವ ಬಗ್ಗೆ ಲೇಖಕಿ ಪ್ರಸ್ತಾಪಿಸಿದ್ದಾರೆ. ಎಲ್ಲರ ಆಶ್ರಯದಾತ ಎಂದು ಕರೆಯಲ್ಪಡುವ ದೇವರು , ತಮಗೆ ಮಾತ್ರ ಅನ್ನವನ್ನು ನೀಡುತ್ತಿಲ್ಲವಲ್ಲ ಎಂಬ ಪ್ರಶ್ನೆಯನ್ನು ತಾಯಿ ಕೇಳುತ್ತಾಳೆ.
‘ಇದ್ದತ್’ ಕತೆಯಲ್ಲಿ ವಿಧವೆಯೊಬ್ಬಳು ಇಸ್ಲಾಂ ಧರ್ಮದಂತೆ 45 ದಿನಗಳ ದರ್ಮಾಚರಣೆಯ ಸಂದರ್ಭದಲ್ಲಿನ ಅವಳ ಬದುಕು ಹಿಂಸಾತ್ಮಕವಾಗಿರುವ ಬಗೆ , ಹಾಗೂ ತನಗೆ ಮುಂದೆ ಉತ್ತಮ ಬದುಕು ಸಿಗಬಹುದೇ ಎಂಬ ಆಸೆಯೂ ಚಿಗುರೊಡೆದ ಭಾವವನ್ನು ಬಾನು ವ್ಯಕ್ತಪಡಿಸಿದ್ದಾರೆ.

ಬಾನು ಅವರ ಕತೆಗಳು , ಲೋಕದ ಜೊತೆಗೆ ನಡೆಸುವ ಮಾತುಗಳು ಆಗಿವೆ. ಬಾನು ಅವರು ಇತರೆ ದೊಡ್ಡ ಲೇಖಕರಿಗಿಂತ ನಾಲ್ಕು ಹೆಜ್ಜೆ ಮುಂದೆ ಹೋಗಿದ್ದಾರೆಂದು ನನಗೆ ಅನ್ನಿಸುವುದು ಏಕೆ ಗೊತ್ತಾ? ಭಾನು ಅವರು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮೈಗೆ ಎಣ್ಣೆ ಹಚ್ಚಿಕೊಂಡು ಸೇಫಾಗಿ ಬರವಣಿಗೆ ಮಾಡಿದವರಲ್ಲ.

ಜನಪರ ಚಳವಳಿಗಳೊಂದಿಗೆ ತಮ್ಮನ್ನು ತಾವು ಗುರುತಿಸಿಕೊಂಡಿದ್ದು, ಹಾಗೂ ಖಚಿತ ಜನಪರ ನಿಲುವನ್ನು ತೆಗೆದುಕೊಂಡು ಆ ನಿಲುವಿಗೆ ಬದ್ಧವಾಗಿ ನಿಲ್ಲುವ ಗಟ್ಟಿತನ ಅವರಲ್ಲಿದೆ.

ಲಂಕೇಶ್‌ ಅವರಿಗೇ ರಾಜಕೀಯ ಪಾಠ ಮಾಡಿದ್ದರು

ಬಾನು ಅವರು ಒಬ್ಬ ಅನುಭವಿ ರಾಜಕಾರಣಿ ಕೂಡ ಹೌದು. ಏಕೆಂದರೆ ಇವರು ಲಂಕೇಶ್‌ ಅವರಿಗೂ ರಾಜಕೀಯ ತಿಳಿವಳಿಕೆ ಹೇಳಿದ್ದರು.

ನಗರಸಭೆ ಚುನಾವಣೆಗೆ ಸ್ಫರ್ಧಿಸಿದ್ದ ಬಾನು ಅವರಿಗೆ ರಾಜಕೀಯ ರಣರಂಗದ ಪರಿಚಯವೂ ಇದೆ. ಲಂಕೇಶ್‌ ಪ್ರಗತಿ ರಂಗ ಮಾಡುವ ಹೊತ್ತಲ್ಲಿ, “ರಾಜಕೀಯ ಪಕ್ಷ ಮಾಡಬೇಡಿ. ಪ್ರಗತಿರಂಗವನ್ನು ಶುರು ಮಾಡಬೇಡಿ. ಅದು ವಿಫಲವಾಗಲಿದೆ, ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದಾಗ ಲಂಕೇಶ್ ಅದನ್ನು ಒಪ್ಪುವುದಿಲ್ಲ .
ತಾವು ನಗರಸಭೆ ಚುನಾವಣೆಗೆ ನಿಂತಾಗ ಉಂಟಾದ ಕಷ್ಟವನ್ನು ಹೇಳಿದ ಬಾನು, ಪಕ್ಷ ಕಟ್ಟಿ ಇಡೀ ರಾಜ್ಯದಲ್ಲಿ ಪಕ್ಷವನ್ನು ನಿಭಾಯಿಸುವುದು ಎಷ್ಟು ಕಷ್ಟವಾಗಬಹುದು ಎಂದು ವಿವರಿಸುತ್ತಾರೆ.

ಲಂಕೇಶ್‌ ಅವರಿಗೆ ಮುಖ್ಯಮಂತ್ರಿಗಳನ್ನು ಮಂಡಿಯೂರುವಂತೆ ಮಾಡುವ ಶಕ್ತಿ ಇದ್ದ ಹೊತ್ತಲ್ಲೇ ಬಾನು ಅವರು ಸ್ವತಃ ಲಂಕೇಶ್‌ ಅವರಿಗೇ ರಾಜಕೀಯ ತಿಳಿವಳಿಕೆ ಹೇಳಿದ್ದರು. ಇವರ ಈ ತಿಳಿವಳಿಕೆ ಸತ್ಯ ಕೂಡ ಆಯ್ತು. ಪ್ರಗತಿರಂಗ ಸಕ್ಸಸ್‌ ಆಗಲಿಲ್ಲ.

ಬಾಬಾ ಬುಡನ್ ಗಿರಿ ಘಟನೆಯಾಗಿರಲಿ, ಯಾವುದೇ ಹೋರಾಟವಾಗಿರಲಿ ಎಲ್ಲಾ ಹೊತ್ತಿನಲ್ಲಿಯೂ ಬಾನು ಅವರು ಸಾಮಾಜಿಕ, ರಾಜಕೀಯ ಕಾರ್ಯಕರ್ತೆಯಾಗಿ ಗಟ್ಟಿಯಾಗಿ ನಿಂತಿದ್ದಾರೆ. ಪತ್ರಕರ್ತೆಯಾಗಿ, ಬರಹಗಾರರಾಗಿ, ಸಾಮಾಜಿಕ ಹೋರಾಟಗಾರ್ತಿಯಾಗಿ, ಮಹಿಳೆಯಾಗಿ, ಮುಸ್ಲಿಂ ಮಹಿಳೆಯಾಗಿ ಬಾನು ಅವರಿಗೆ ಬಹಳ ದೊಡ್ಡ ಸ್ಥಾನವಿದೆ ಎನ್ನುವುದನ್ನು ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಇಡೀ ಜಗತ್ತಿಗೆ ಸಾರಿ ಹೇಳಿದೆ.

http://kalpa.news/wp-content/uploads/2025/02/Kumadvati-College-Shikaripura-2025-Video.mp4

ಒಟ್ಟಿನಲ್ಲಿ ಬಾನು ಅವರಿಗೆ ಸಿಕ್ಕಿರುವ ವಿಶ್ವ ಮನ್ನಣೆ ಏಕ ಕಾಲಕ್ಕೆ ಕನ್ನಡಕ್ಕೆ, ಭಾರತೀಯ ಸಾಹಿತ್ಯ ಪರಂಪರೆಗೆ, ನಮ್ಮ ನಾಡಿನ ಸಾಂಸ್ಕೃತಿಕ ನಾಯಕರಾಗಿರುವ ನಿಜವಾದ ವಿಶ್ವಗುರು ಬಸವಣ್ಣನವರಾದಿಯಾಗಿ ಅಕ್ಕಮಹದೇವಿ ಮತ್ತು ಎಲ್ಲಾ ಶರಣ, ಸೂಫಿ ಪರಂಪರೆಗೆ, ಈ ಪರಂಪರೆಯ ಮೌಲ್ಯಗಳಿಗೆ ಸಿಕ್ಕಿರುವ ಮನ್ನಣೆ ಎಂದು ಭಾವಿಸುತ್ತೇನೆ.

ವಿಶ್ವ ಮಾನ್ಯತೆ ಗಳಿಸಿರುವ ಬಾನು ಮುಷ್ತಾಕ್‌ ಅವರಿಗೆ ಸ್ಥಳೀಯವಾಗಿ, ನಮ್ಮ ರಾಜ್ಯದಲ್ಲಿ ಸಿಗಬೇಕಾದ ಎಲ್ಲಾ ರೀತಿಯ ಅರ್ಹ ಗೌರವ ಮತ್ತು ಮನ್ನಣೆಗಳು ಸಿಗಲಿವೆ. ಜೂನ್ 2 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಮಸ್ತ ಕನ್ನಡ ಜಗತ್ತಿನ ಪರವಾಗಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಬಹುರೂಪಿ ಜಿ.ಎನ್.ಮೋಹನ್, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ವಿಜಯವಾಣಿ ಪತ್ರಿಕೆ ಸಂಪಾದಕರಾದ ಚನ್ನೇಗೌಡರು, ಗಾಂಧಿ ಭವನದ ಹೆಚ್.ಸಿ. ದಿನೇಶ್ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreBanu MushtaqKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಭಾನು ಮುಷ್ತಾಕ್
Share196Tweet123Send
Previous Post

15441 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಿಎಂ

Next Post

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL