ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಜನ್ಮಕೊಟ್ಟ ಮಗಳನ್ನೇ ತಂದೆಯೊಬ್ಬ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಆಶಾ(32) ಹಾಗೂ ಆರೋಪಿ ತಂದೆಯನ್ನು ರಮೇಶ್ (60) ಎಂದು ಗುರುತಿಸಲಾಗಿದೆ.
ಮೃತೆ ಆಶಾಳನ್ನು ಹಲವು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಆದರೆ, ಆಕೆ ಕೆಲವೇ ದಿನಗಳಲ್ಲಿ ಮದುವೆಯಾಗಿದ್ದ ಗಂಡನನ್ನು ಬಿಟ್ಟು ತವರು ಮನೆಗೆ ಬಂದು ಸೇರಿಕೊಂಡಿದ್ದರು. ಹೆತ್ತೆ ಮಗಳ ಜೀವನ ಸರಿ ಮಾಡಲು ತಂದೆ ತಾಯಿ ಎಷ್ಟೇ ಪ್ರಯತ್ನ ಮಾಡಿದರೂ ಆಕೆ ಮಾತ್ರ ಯಾರ ಮಾತನ್ನೂ ಕೇಳದೆ ಹಠ ಮಾಡುತ್ತಿದ್ದಳು. ಈ ವಿಚಾರವಾಗಿಯೇ ನಿತ್ಯವೂ ಜಗಳವಾಗುತ್ತಿತ್ತು ಎಂದು ಹೇಳಲಾಗಿದೆ.
ಹತ್ಯೆಯಾದ ದಿನವೂ ಸಹ ಜಗಳವಾಗಿದ್ದು, ಮಗಳ ಕಿರುಕುಳ ಹೆಚ್ಚಾಯಿತು ಎಂದು ಬೇಸತ್ತ ರಮೇಶ್ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಆಕೆ ಸಾವನ್ನಪ್ಪಿದ್ದಾಳೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















