ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ #Cheluvarayaswamy ತಿಳಿಸಿದ್ದಾರೆ.
ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 315ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ಕೈಗೊಂಡು ನಂತರ ನಡೆದ 51ನೇ ಸರ್ವ ಸದಸ್ಯರ ಸಭೆಯಲ್ಲಿ ಕೃಷಿ ಸಚಿವರು ಈ ವಿಷಯ ಪ್ರಕಟಿಸಿದರು.

Also read: ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ
ರಾಜ್ಯದ ಬೀಜ ನಿಗಮದ ವತಿಯಿಂದ ಗುಲ್ಬರ್ಗಾದಲ್ಲಿ ಗೋಧಾಮು ನಿರ್ಮಾಣಕ್ಕೂ ಸಹ ಅನುಮೋದನೆ ನೀಡಲಾಗಿದೆ. ಕಳೆದ ವರ್ಷ 2 ಲಕ್ಷ ಕ್ವಿಂಟಾಲ್ ಬೀಜ ಉತ್ಪಾದನೆ ಗುರಿಯ ಬದಲಾಗಿ ಈ ವರ್ಷ 4 ಲಕ್ಷ ಕ್ವಿಂಟಾಲ್ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು 82 ಲಕ್ಷ ಹೆಕ್ಟರ್ ಬಿತ್ತನೆಯಾಗಿದೆ. 40 ಲಕ್ಷ ಹೆಕ್ಟೇರ್ ಕಟಾವು ಮಾಡಲಾಗಿದೆ. ಕಳೆದ 10 ದಿನಗಳಿಂದ ಸುರಿದ ತೀವ್ರ ಮಳೆಯಿಂದ ಸುಮಾರು 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು ವರದಿ ತರಿಸಿಕೊಳ್ಳಲಾಗುತ್ತಿದೆ. ನಿಯಮಾನುಸಾರ ಪರಿಹಾರ ದೊರಯಲಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯ ಕೃಷಿ ಇಲಾಖೆ ಕೇಂದ್ರದಿAದ ಅತಿ ಹೆಚ್ಚು ಅನುದಾನವನ್ನು ಪಡೆದು ಅದನ್ನು ರೈತರಿಗೆ ವರ್ಗಾವಣೆ ಮಾಡಿದೆ. 650 ಅಧಿಕಾರಿ ಸಿಬ್ಬಂದಿಗೆ ಬಡ್ತಿ ನೀಡಲಾಗಿದ್ದು ಹೊಸದಾಗಿ 950 ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮ ವಹಿಸಲಾಗಿದ್ದು, ಆಡಳಿತಾತ್ಮಕ ಸುಧಾರಣೆಗೂ ಒತ್ತು ನೀಡಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.
ಕೃಷಿಕರು ತಮ್ಮ ಸಂಪ್ರದಾಯಿಕ ಕೃಷಿಯ ಜೊತೆಗೆ ಸಮಗ್ರ ಕೃಷಿ ಬಗ್ಗೆ ಗಮನ ಹರಿಸಬೇಕು. ಸರ್ಕಾರದ ಯೋಜನೆಗಳ ಲಾಭವನ್ನು ಪಡೆದು ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಯ ಅನುಕೂಲಗಳನ್ನು ಅನುಸರಿಸಿ ಪ್ರಗತಿಪರ ರೈತರಾಗಿ ಪರಿವರ್ತನೆಯಾಗಬೇಕು. ಬೀಜ ನಿಗಮ ವತಿಯಿಂದಲೂ ರೈತರಿಗೆ ಹರಿವು ಮತ್ತು ಪ್ರೋತ್ಸಾಹಗಳನ್ನು ನೀಡಲಾಗುತ್ತಿದೆ ಇವೆಲ್ಲವನ್ನು ಸದ್ಬಳಕೆ ಮಾಡಿಕೊಂಡು ಅನುಕೂಲ ಪಡೆಯಬೇಕು ಎಂದು ಕರೆ ನೀಡಿದರು.
ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್, ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರಾದ ಅಹಮದ್ ರಾಜಾ, ಬೀಜ ನಿಗಮದ ವ್ಯಸ್ಥಾಪಕ ನಿರ್ದೇಶಕರಾದ ದೇವರಾಜ್, ಮತ್ತಿರರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post