ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) #MUDA ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ #CM Siddaramaiah ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ #High Court ನಿರಾಕರಿಸಿದೆ.
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ #CBI ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದ್ದು, ಅವರ ಪತ್ನಿ ಬಿಎಂ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.










Discussion about this post