ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈಗಾಗಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದ ಬೆನ್ನಲ್ಲೇ ಮತ್ತೊಂದು ಬರೆ ಬಿದ್ದಿದ್ದು, ತೀವ್ರ ವಿರೋಧದ ನಡುವೆಯೂ ಮುಂದಿನ 18 ದಿನ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹಸಿರುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.
ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿಯಲ್ಲಿ ಇಂದು ನಡೆದ ಸಭೆಯಲ್ಲಿ ಸೆ.28ರಿಂದ ಅ.15ರವರೆಗೆ ಅಂದರೆ 18 ದಿನಗಳ ಕಾಲ ತಮಿಳುನಾಡಿಗೆ Tamilunadu ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಕಾವೇರಿ Cauvery ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಿತು. ವರ್ಚುವಲ್ ಮೂಲಕ ನಡೆದ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿ, ವಾಸ್ತವ ಸ್ಥಿತಿಯನ್ನು ತಿಳಿಸಿದರು. ಆದರೂ ಸಹ ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.
Also read: ಉಡುಪಿ: 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ಕೇಂದ್ರೀಯ ವಿದ್ಯಾಲಯ
ಇತ್ತ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಬೆಂಗಳೂರು ಬಂದ್ ಮಾಡಲಾಗಿದೆ. ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕುಡಿಯುವ ನೀರಿಗೂ ತೊಂದರೆಯಾಗುವ ಪರಿಸ್ಥಿತಿ ಇದ್ದರೂ ಸಹ ಮತ್ತೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಹೊರಡಿಸುತ್ತಿರುವ ಆದೇಶದ ವಿರುದ್ದ ರಾಜ್ಯದಲ್ಲಿ ರೈತರು, ವಿವಿಧ ಸಂಘಟನೆಗಳು ಜನರ ಆಕ್ರೋಶ ಹೆಚ್ಚಾಗಿದೆ.
ಕಳೆದ ಸೆ.13ರ ಆದೇಶದಲ್ಲಿ ರಾಜ್ಯದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ರಾಜ್ಯ ಸರ್ಕಾರ ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಬರುತ್ತವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಅಂಶಕ್ಕೆ ಹೆಚ್ಚಿನ ಮನ್ನಣೆಯ ಅಗತ್ಯವಿದೆ ಮತ್ತು ಸಮಿತಿಯು ವಿಮರ್ಶಾತ್ಮಕ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post