ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.
ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಲ.ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮ ಮತ್ತು ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
Also read: ಜಲಶುದ್ಧೀಕರಣ ಘಟಕದ ಬಳಿ ಹೊರಹರಿವು ಹೆಚ್ಚಳ | ಶಿವಮೊಗ್ಗದಲ್ಲಿ ನೀರು ಸರಬರಾಜು ವ್ಯತ್ಯಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಬಂದಾಕ್ಷಣ ತನಿಖಾ ಆಯೋಗ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು, ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು, ಈಗ ಸಮಸ್ತ ಹಿಂದುಳಿದ ಸಮುದಾಯಗಳು ಜಾಗೃತವಾಗಿವೆ, ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯನವರು ಬಡವರು, ಮಹಿಳೆಯರು, ರೈತರು, ಕಾರ್ಮಿಕರ ಪರ ಇರುವಂತೆ ಈ ವರ್ಗಗಳು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರ ಬಂಡೆಯಂತೆ ನಿಂತಿವೆ ಎಂದು ತಿಳಿಸಿದರು.
ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಜಗದೀಶ್ ಮಾತನಾಡಿ, ನಮ್ಮ ಸಮುದಾಯದ ನಾಯಕ ಸಿದ್ದರಾಮಯ್ಯ. ಅವರು ಸಿಎಂ ಹುದ್ದೆಯಲ್ಲಿ ಮುಂದುವರೆಯಬಾರದು ಅಂತ ಬಿಜೆಪಿ ಜೆಡಿಎಸ್ ಷಡ್ಯಂತ್ರ ರೂಪಿಸಿದೆ. ಕಪ್ಪುಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿರೋರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಕಾರ್ಯವನ್ನ ಎರಡೂ ಪಕ್ಷಗಳು ಮಾಡುತ್ತಿವೆ. ಮೂಡಾ ಹಗರಣದ ಮೂಲಕ ಅವರ ಮೇಲೆ ಕೆಟ್ಟ ಹೆಸರು ಬರುವಂತೆ ಮಾಡಲು ಬಿಜೆಪಿ ಜೆಡಿಎಸ್ ಮುಂದಾಗಿವೆ. ಪ್ರಕರಣ ಸಂಬಂಧ ಸಿದ್ದರಾಮಯ್ಯ ತನಿಖೆಗೂ ಆದೇಶಿಸಿ ಪಾರದರ್ಶಕತೆ ಮೆರೆದಿದ್ದಾರೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಇಬ್ಬರೂ ಸೇರಿ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹೊರಟಿದ್ದಾರೆ. ಸಮುದಾಯವಾಗಿ ನಾವು ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುತ್ತೇವೆ.. ನೀವೇನು ಪಾದಯಾತ್ರೆಗೆ ಮಾಡಲು ಹೊರಟಿದ್ದೀರಾ ಅದನ್ನ ನಿಲ್ಲಿಸಿ. ಇದು ದುರುದ್ದೇಶ ಪೂರಿತ ರಾಜಕೀಯ ಪ್ರೇರಿತ ಯಾತ್ರೆ ಹಾಗಾಗಿ ಇದನ್ನ ನಿಲ್ಲಿಸಿ. ಇಲ್ಲದಿದ್ದರೆ ನಾವು ರಾಜ್ಯಾದ್ಯಂತ ಧಂಗೆ ಏಳಬೇಕಾದೀತು. ಹಾಗೇ ರಕ್ತ ಕ್ರಾಂತಿ ಆದೀತು ಎಚ್ಚರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಮಾತನಾಡಿ, ಬಿಜೆಪಿ ಜೆಡಿಎಸ್ ಮುಖಂಡರು ಸಿಎಂ ತೇಜೋವಧೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷವೂ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು. ಮುಖ್ಯಮಂತ್ರಿ ಇಳಿಸೋ ಕಾರ್ಯಕ್ಕೆನಾದ್ರೂ ಕೈ ಹಾಕಿದ್ರೆ ನಮ್ಮ ಸಮಾಜ ತಿರುಗಿ ಬೀಳುತ್ತದೆ. ಇಂತಹದ್ದೇನಾದ್ರೂ ಆದರೆ ಎಲ್ಲರೂ ಸೇರಿ ಕ್ರಾಂತಿ ಮಾಡಬೇಕಾಗತ್ತೆ. ಸಿಎಂ ವಿರುದ್ಧ ಏನಾದ್ರೂ ಕುತಂತ್ರ ನಡೆ ಪ್ರದರ್ಶಿಸಿದ್ರೆ ಎಚ್ಚರಿಕೆ. ವಿಜಯೇಂದ್ರ,ಆರ್ ಅಶೋಕ್ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post