No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 18, 2025
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ #Chinnaswamy Stadium ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದಿದ್ದಾರೆ.

ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.

ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.

2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ.

ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?

ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?

ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು.

ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Bangalorechinnaswamy stadiumCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಚಿನ್ನಸ್ವಾಮಿ ಸ್ಟೇಡಿಯಂಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share196Tweet123Send
Previous Post

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

Next Post

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

'ಆಪರೇಷನ್ ಸಿಂಧು' | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL