ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಮಿತ್ ಶಾ ಅವರನ್ನು ಕರೆಯಿಸಿ, ಲಕ್ಷಾಂತರ ಜನರನ್ನು ಸೇರಿಸಿ ಬೆಂಗಳೂರಿನಲ್ಲಿ ದೊಡ್ಡ ಸಮಾರಂಭ ಮಾಡಬೇಕು ಎಂಬ ಅಪೇಕ್ಷೆಯಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ BYVijayendra ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ, PMNarendraModi ಅಮಿತ್ ಶಾ, AmithShah ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ JPNadda ಅವರ ಆದರ್ಶ ಮತ್ತು ಆಶೀರ್ವಾದದಂತೆ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಎಂದರು.
Also read: ಉಡುಪಿ | ನಾಲ್ವರ ಬರ್ಬರ ಹತ್ಯೆ ಪ್ರಕರಣ | ಶಂಕಿತ ಆರೋಪಿ ಅರುಣ್ ಬೆಳಗಾವಿಯಲ್ಲಿ ಬಂಧನ
ನಾಯಕರು ಒಟ್ಟಾಗಿ ಸೇರಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದ ಮೇಲೆ ಅದ್ಧೂರಿ ಸ್ವಾಗತ, ಎಲ್ಲೆಡೆ ಉತ್ಸಾಹ ಕಂಡು ಬರುತ್ತಿದೆ ಎಂದರು.
ಶುಭ ಸಮಾರಂಭದಲ್ಲಿ ನಮ್ಮೆಲ್ಲಾ ನಾಯಕರು ವಿಜಯೇಂದ್ರ ಅವರಿಗೆ ಆಶೀರ್ವಾದ ಮಾಡಿರುವುದು ಸಂತೋಷ ತಂದಿದೆ. ದೊಡ್ಡ ಸಂಖ್ಯೆಯಲ್ಲಿ ಬಂದಿರುವ ಪಕ್ಷದ ಹಿರಿಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕೆಲವರಿಗೆ ತೊಂದರೆಯಾಗಿದೆ. ಮಾಧ್ಯಮದವರಿಗೂ ಸಮಸ್ಯೆ ಆಗಿದೆ. ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post