No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆರೋಗ್ಯ ಇಲಾಖೆಯಲ್ಲಿನ ಅನಿಯಮಿತ ವರ್ಗಾವಣೆಗೆ ಬ್ರೇಕ್…!

ಸಚಿವ ಸುಧಾಕರ್ ಕೈಗೊಂಡಿರುವ ನಿಯಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2021
in ಬೆಂಗಳೂರು ನಗರ
0
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನಾಂದಿ ಹಾಡಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಈ ಮೂಲಕ ಇಲಾಖೆಯಲ್ಲಿ ಅನಿಯಮಿತ ವರ್ಗಾವಣೆಗೆ ತಡೆ ಹಾಕಿ, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ದಕ್ಷತೆ ತರಲಾಗಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರಿಗೆ ಯಾವುದೇ ಅಡ್ಡಿ ಇಲ್ಲದೆ ಸಮರ್ಪಕ ಆರೋಗ್ಯ ಸೇವೆ ಲಭ್ಯವಾಗಲಿದೆ.

ಆರೋಗ್ಯ ಇಲಾಖೆಯ ಆಡಳಿತದಲ್ಲಿ ದಕ್ಷತೆ ತಂದು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿದ್ದು, ಪಾರದರ್ಶಕ ಹಾಗೂ ನಿಗದಿತ ಕಾಲಮಿತಿಯಲ್ಲಿ ಸಕ್ಷಮ ಪ್ರಾಧಿಕಾರಗಳ ಮೂಲಕವೇ ವರ್ಗಾವಣೆ ಮಾಡುವ ಕಾನೂನನ್ನು ಕಡ್ಡಾಯವಾಗಿ ಜಾರಿಗೊಳಿಸಲು ಉನ್ನತಾಧಿಕಾರಿಗಳ ಸಭೆಯಲ್ಲಿ ಸೂಚಿಸಲಾಗಿದೆ. ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಶಿಫಾರಸು, ಲಾಬಿಗಳಿಗೆ ತಡೆ ಬಿದ್ದಿದೆ.

ಸಚಿವರಿಂದ ಸೂಚನೆ:
ಇಲಾಖೆಯ ವ್ಯಾಪ್ತಿಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011 ರ ಅನ್ವಯ ಕೌನ್ಸಿಲಿಂಗ್ ಮೂಲಕ ಮಾತ್ರ ಕೈಗೊಳ್ಳುವಂತೆ ಸ್ಪಷ್ಟ ಆದೇಶವಿದೆ. ಈ ಕಾಯ್ದೆಯ ಕಲಂ 5ರಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಕೌನ್ಸಿಲಿಂಗ್ ನಿಂದ ವಿನಾಯಿತಿ ನೀಡಲಾಗಿದೆ. ಅಂತಹ ಪ್ರಸ್ತಾವಗಳನ್ನು ಸಚಿವರಿಗೆ ಕಳುಹಿಸಲಾಗುತ್ತದೆ. ಆದರೆ ಇತರೆ ವರ್ಗಾವಣೆ ಪ್ರಸ್ತಾವಗಳನ್ನು ಕಳುಹಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಕಡತ ನಿರ್ವಹಿಸುವ ವಿಷಯ ನಿರ್ವಹಕರು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಬೇಕೆಂದು ಸಚಿವ ಡಾ.ಕೆ. ಸುಧಾಕರ್ ಸೂಚಿಸಿದ್ದಾರೆ.


ಗಂಭೀರ ಹಾಗೂ ಮಾರಣಾಂತಿಕ ರೋಗದಿಂದ ಬಳಲುತ್ತಿರುವವರು, ವಯೋ ನಿವೃತ್ತಿ ಅಂಚಿನಲ್ಲಿದ್ದು, ಇನ್ನು ಎರಡು ವರ್ಷ ಮಾತ್ರ ಸೇವೆ ಬಾಕಿ, ಶೇ.40 ಕ್ಕೂ ಹೆಚ್ಚು ಅಂಗವೈಕಲ್ಯ ಹೊಂದಿರುವವರು, ವಿಧವೆಯರು, ಪತಿ-ಪತ್ನಿ ಪ್ರಕರಣಕ್ಕೆ ಮಾತ್ರ ಕೌನ್ಸಿಲಿಂಗ್ ನಿಂದ ವಿನಾಯಿತಿ ನೀಡಬೇಕು. ಇಂತಹ ಪ್ರಸ್ತಾವಗಳನ್ನು ಅಪರ ಮುಖ್ಯ ಕಾರ್ಯದರ್ಶಿಯವರ ಸ್ಪಷ್ಟ ಶಿಫಾರಸಿನೊಂದಿಗೆ ಕಡತವನ್ನು ಎರಡು ತಿಂಗಳಿಗೊಮ್ಮೆ ಮಾತ್ರ ಸಚಿವರ ಅನುಮೋದನೆಗೆ ಸಲ್ಲಿಸಬೇಕು. ಈ ಕುರಿತು ಕಾಯ್ದೆಯಲ್ಲಿ ಅವಶ್ಯ ತಿದ್ದುಪಡಿ ತರಲು ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.

ವರ್ಗಾವಣೆ ಸಂಬಂಧ 2011ರಲ್ಲಿ ಕಾನೂನು ರೂಪಿಸಿ, ನಿಯಮ ರಚಿಸಲಾಗಿದೆ. 2017 ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗಿದೆ. ಇನ್ನು ಮುಂದೆ ಈ ಕಾನೂನು ಅನ್ವಯ ವರ್ಗಾವಣೆ ನಡೆಯಲಿದೆ. “ನಿಯಮ ಉಲ್ಲಂಘಿಸಿ ವರ್ಗಾವಣೆ ಪ್ರಸ್ತಾವನೆ, ಶಿಫಾರಸು ತಂದರೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ನಿರ್ಧಾರದ ಮೂಲಕ ಅನಿಯಮಿತ ವರ್ಗಾವಣೆ, ಭ್ರಷ್ಟಾಚಾರಕ್ಕೆ ತಡೆ ಬೀಳಲಿದ್ದು, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು ಹಾಗೂ ಆರೋಗ್ಯ ಸೇವೆ ಒದಗಿಸುವಲ್ಲಿ ದಕ್ಷತೆ ಬರಲಿದೆ” ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಿಯಮದಲ್ಲೇನಿದೆ?
ಹಿರಿಯ ತಜ್ಞರು, ತಜ್ಞರು, ಉಪಮುಖ್ಯ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಮುಖ್ಯ ದಂತ ವೈದ್ಯಾಧಿಕಾರಿ, ಹಿರಿಯ ದಂತ ವೈದ್ಯಾಧಿಕಾರಿ, ದಂತ ವೈದ್ಯಾಧಿಕಾರಿಗಳ ವರ್ಗಾವಣೆಯನ್ನು ಇಲಾಖೆಯ ಆಯುಕ್ತರು ಮಾಡಬಹುದು. ಗ್ರೂಪ್ ಬಿ, ಸಿ, ಡಿ ನೌಕರರನ್ನು ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಆಯುಷ್ ಇಲಾಖೆಯಡಿಯ ಫಿಸಿಶಿಯನ್ ಗ್ರೇಡ್ 1, ಗೇಡ್ 2 ಗೆ ಆಯುಷ್ ಇಲಾಖೆಯ ನಿರ್ದೇಶಕರು, ಆಯುಷ್ ಇಲಾಖೆಯ ಗ್ರೂಪ್ ಬಿ, ಸಿ, ಡಿ, ನೌಕರರಿಗೆ ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು.

ಗ್ರೂಪ್-ಎಗೆ ಮೂರು ವರ್ಷ, ಗ್ರೂಪ್-ಬಿಗೆ ನಾಲ್ಕು ವರ್ಷ, ಗ್ರೂಪ್-ಸಿಗೆ ಐದು ವರ್ಷ, ಗ್ರೂಪ್-ಡಿಗೆ ಏಳು ವರ್ಷ ಒಂದು ಕಡೆ ಕಡ್ಡಾಯವಾಗಿ ಸೇವೆ ಸಲ್ಲಿಸಲು ನಿಯಮದಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHealth DepartmentKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState Newsಆರೋಗ್ಯ ಇಲಾಖೆಬೆಂಗಳೂರುಸಚಿವ ಸುಧಾಕರ್
Share210Tweet123Send
Previous Post

ಸುಪ್ರೀಂ ಕೋರ್ಟ್ ಮೊದಲ ಮಹಿಳಾ ನ್ಯಾಯಮೂರ್ತಿಯಾಗುತ್ತಾರಾ ಕರ್ನಾಟಕದ ನಾಗರತ್ನ?

Next Post

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ: ಕಾರ್ಯಾರಂಭ ಮಾಡುವಂತೆ ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ: ಕಾರ್ಯಾರಂಭ ಮಾಡುವಂತೆ ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL