ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜೈಲಿನಲ್ಲೇ ಕುಳಿತು ಪಾತಕಿಗಳು ಅಕ್ರಮ ವ್ಯವಹಾರ ನಡೆಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಚಟುವಟಿಕೆಗಳ ಬಗ್ಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ಸಿಸಿಬಿ ತಂಡ ದಾಳಿ ನಡೆಸಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ, ಮೊಬೈಲ್, ಗಾಂಜಾ ಹಾಗೂ ಇತರೆ ವಸ್ತುಗಳು ಜೈಲಿನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಜೈಲನ್ನು ತಡಕಾಡುತ್ತಿರುವ ಸಿಸಿಬಿ ಅಧಿಕಾರಿಗಳು, ಅನಿರೀಕ್ಷಿತ ದಾಳಿಯಿಂದ ಜೈಲಿನಲ್ಲಿರುವ ಸಿಬ್ಬಂದಿ ಹಾಗೂ ಕೈದಿಗಳು ಶಾಕ್ಗೆ ಒಳಗಾಗಿದ್ದಾರೆ. ಇಬ್ಬರು ಡಿಸಿಪಿ ನೇತೃತ್ವದಲ್ಲಿ ಸಿಸಿಬಿ ತಂಡ ಈ ದಾಳಿ ನಡೆಸಿದ್ದು, ಕಾರ್ಯಾಚರಣೆ ಇನ್ನು ಮುಂದುವರಿದಿದೆ.
ಸಿಸಿಬಿ ಪೂರ್ಣ ತಂಡದಿಂದ ನಡೆದ ಈ ದಾಳಿ ಸದ್ಯ ಮುಂದುವರಿಸಿದ್ದು, ಪರಿಶೀಲನೆ ಕಾರ್ಯ ಕೈಗೊಂಡಿದ್ದಾರೆ. ಸಂಪೂರ್ಣ ಮಾಹಿತಿ ಇನ್ನು ಹೊರಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post