ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಸಿನಿಪ್ರೇಮಿಗಳಿಗೆ ಗೋಲ್ಡನ್ ಆಪರ್ಚುನಿಟಿ. “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಚಿತ್ರದ ನಿರ್ಮಾಪಕರಾದ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು, ಮಾಗಡಿ ರಸ್ತೆಯ ವೀರೇಶ್ ಚಿತ್ರ ಮಂದಿರದಲ್ಲಿ ಚಡ್ಡಿದೋಸ್ತ್ ಚಿತ್ರ ವೀಕ್ಷಿಸಿದವರಿಗೆ ಉಚಿತವಾಗಿ ಬಂಗಾರದ ನಾಣ್ಯವನ್ನು ಕೊಡುವುದಾಗಿ ಘೋಷಿಸಿದ್ದಾರೆ.
ಈ ಕೊಡುಗೆ ಪ್ರತಿ ಪ್ರದರ್ಶನಕ್ಕೂ ಅನ್ವಯಿಸಲಿದೆ. ಒಂದು ಪ್ರದರ್ಶನದಲ್ಲಿ ಎಷ್ಟು ಜನ ಸಿನಿಮಾ ನೋಡುತ್ತಾರೋ ಅವರಲ್ಲಿ ಒಬ್ಬರನ್ನು ಲಕ್ಕಿ ಡಿಪ್ ಮೂಲಕ ಆರಿಸಿ ಅವರಿಗೆ ಅರ್ಧ ಗ್ರಾಂ ಚಿನ್ನದ ನಾಣ್ಯವನ್ನು ಬಹುಮಾನವಾಗಿ ಕೊಡಲಿದ್ದಾರೆ.
ಇಂದು ನಡೆದ ಚಿತ್ರದ ಯಶಸ್ಸಿನ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆಸ್ಕರ್ ಕೃಷ್ಣ ನಿರ್ದೇಶಿಸಿ, ಅವರೊಂದಿಗೆ ಲೋಕೇಂದ್ರ ಸೂರ್ಯ ನಾಯಕ ನಟರಾಗಿ ಅಭಿನಯಿಸಿರುವ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಚಿತ್ರವು ಎಲ್ಲಾ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಯಶಸ್ಸಿನ ಖುಷಿಯಲ್ಲಿ ನಿರ್ಮಾಪಕ ಸೆವೆನ್ ರಾಜ್ ರವರು ಈ ಕೊಡುಗೆಯನ್ನು ನೀಡಲು ಮುಂದಾಗಿದ್ದಾರೆ.
ಈ ಕೊಡುಗೆಯು ಸೆ. 21ರಿಂದ ವೀರೇಶ್ ಚಿತ್ರಮಂದಿರದಲ್ಲಿ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಮಾತ್ರ ಅನ್ವಯಿಸಲಿದ್ದು, ನಾಳೆಯಿಂದ ‘ಚಡ್ಡಿ ದೋಸ್ತ್’ ಸಿನಿಮಾ ನೋಡಿ, ಬಂಗಾರದ ನಾಣ್ಯ ನಿಮ್ಮದಾಗಿಸಿಕೊಳ್ಳಿ…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post