No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಯಾರ ಪರ ಇದೆ? ಪ್ರತಿಪಕ್ಷ ನಾಯಕ ಆರ್. ಅಶೋಕ ಟೀಕೆ

kalpa News by kalpa News
May 8, 2025
in ಬೆಂಗಳೂರು ನಗರ
0
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಪಕ್ಷ ಯಾರ ಪರ ಇದೆ? ಯುದ್ಧದ ಸಮಯದಲ್ಲಿ ಶಾಂತಿಯ ಮಂತ್ರ ಹೇಳುವ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣ ದಾರಿ ತಪ್ಪಿ ಹೋಗಿದೆ. ಇದು ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಯೋಧರು #Indian Soldier ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಪಾಕಿಸ್ತಾನಕ್ಕೆ #Pakistan ದೊಡ್ಡ ಆಘಾತ ನೀಡಿದ್ದಾರೆ. ಪಾಕಿಸ್ತಾನದ ನೆಲದಲ್ಲೂ ದಾಳಿ ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಮುಂಬೈಯಲ್ಲಿ ಉಗ್ರರ ದಾಳಿ ನಡೆಸಿದಾಗಲೇ ಇಂತಹ ಪ್ರತಿದಾಳಿ ಮಾಡಿದ್ದರೆ ಸಮಸ್ಯೆ ಅಂದೇ ಪರಿಹಾರವಾಗುತ್ತಿತ್ತು ಎಂದರು.
ಇಂತಹ ಸಂದರ್ಭದಲ್ಲೂ ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ. ಉತ್ತರ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಯುದ್ಧ ವಿಮಾನಕ್ಕೆ ನಿಂಬೆ ಹಣ್ಣು ಕಟ್ಟಿ ವೀಡಿಯೋ ಮಾಡಿದ್ದಾರೆ. ಆದರೂ ಸಚಿವ ಜಮೀರ್‌ ಅಹ್ಮದ್‌ ಬಾಂಬ್‌ ಕಟ್ಟಿಕೊಂಡು ಹೋಗುತ್ತೇನೆ ಎನ್ನುತ್ತಾರೆ. ಕಳೆದ ಸಲ ಸರ್ಜಿಕಲ್‌ ಸ್ಟ್ರೈಕ್‌ ಆದಾಗ ಕಾಂಗ್ರೆಸ್‌ ನಾಯಕರು ದಾಖಲೆ ಕೇಳಿದ್ದರು. ಈಗ ಸಾಕ್ಷಿ ಕೇಳುವ ಮುನ್ನ ಎಲ್ಲ ಮಾಧ್ಯಮಗಳಲ್ಲಿ ಸಾಕ್ಷಿ ಬಂದಿದೆ. ಇನ್ನೂ ಕಾಂಗ್ರೆಸ್‌ ನಾಯಕರು ಸಾಕ್ಷಿ ಹುಡುಕುತ್ತಾರಾ? ಶಾಂತಿ ಮಂತ್ರ ಪಠಿಸುತ್ತಾರಾ ಎಂದು ಗೊತ್ತಿಲ್ಲ ಎಂದರು.

ಕಾಂಗ್ರೆಸ್‌ ದಾರಿ ತಪ್ಪಿದೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಬೆಂಬಲಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಾರೆ. ಕರ್ನಾಟಕ ಕಾಂಗ್ರೆಸ್ಸೇ ಬೇರೆ, ರಾಷ್ಟ್ರೀಯ ಕಾಂಗ್ರೆಸ್ಸೇ ಬೇರೆಯಾಗಿದೆ. ಜೈರಾಮ್‌ ರಮೇಶ್‌ ಅವರ ಎಚ್ಚರಿಕೆಗೆ ನಯಾ ಪೈಸೆ ಬೆಲೆ ನೀಡುತ್ತಿಲ್ಲ. ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಯಾರ ಪರ ಇದೆ? ಇದು ದೇಶಕ್ಕೆ ಅಪಮಾನ. ಇನ್ನಾದರೂ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್‌ ಮುಖಂಡರ ವಿರುದ್ಧ ಕ್ರಮ ವಹಿಸಲಿ ಎಂದರು.
ಪಾಕಿಸ್ತಾನದ ವಿರುದ್ಧ ಯುದ್ಧವಾದರೆ ಮುಸ್ಲಿಮರ ಮತ ಹೊರಟುಹೋಗುತ್ತದೆ ಎಂಬ ಚಿಂತೆ ಕಾಂಗ್ರೆಸ್‌ಗಿದೆ. ಪಾಕಿಸ್ತಾನಿ ಪ್ರಜೆಗಳನ್ನು ಎಲ್ಲ ರಾಜ್ಯಗಳು ಹೊರಗೆ ಕಳುಹಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಇನ್ನೂ ಹೊರಗೆ ಕಳುಹಿಸಿಲ್ಲ. ಕಾಂಗ್ರೆಸ್‌ನ ಟ್ವೀಟ್‌ನಲ್ಲಿ ಯೋಧರಿಗಾದರೂ ಅಭಿನಂದನೆ ಸಲ್ಲಿಸಬಹುದಿತ್ತು. ಎಲ್ಲಿಯವರೆಗೆ ಶಾಂತಿ ಮಂತ್ರವನ್ನು ಹೇಳಬೇಕು ಎಂದು ಕಾಂಗ್ರೆಸ್‌ ನಾಯಕರು ಸರಿಯಾಗಿ ತಿಳಿಸಲಿ ಎಂದರು.

ಕೊನೆಯ ಆಯ್ಕೆ ಯುದ್ಧ ಎನ್ನುತ್ತಾರೆ. ಅಂದರೆ ಎಲ್ಲರೂ ಸತ್ತುಹೋದ ಬಳಿಕ ಸಚಿವ ದಿನೇಶ್‌ ಗುಂಡೂರಾವ್‌ ಅವರ ಕೈಗೆ ಬಂದೂಕು ಕೊಟ್ಟು ಕಳುಹಿಸಬೇಕು. ಸಚಿವ ಜಮೀರ್‌ ಅವರು ಬಾಂಬ್‌ ಇಟ್ಟುಕೊಂಡೂ ಹೋದರೂ ಅವರನ್ನು ಉಗ್ರರು ಸಾಯಿಸುವುದಿಲ್ಲ. ಭಾರತದೊಳಗೆ ಇರುವ ಪಾಕಿಸ್ತಾನಿಗಳನ್ನು ಸಚಿವ ಜಮೀರ್‌ ಮೊದಲು ಹೊಡೆಯಲಿ. ಕಾಂಗ್ರೆಸ್‌ ಕಚೇರಿಯಲ್ಲಿರುವ ಸ್ಲೀಪರ್‌ ಸೆಲ್‌ ಬಳಿ ಸಚಿವ ಜಮೀರ್‌ ಬಾಂಬ್‌ ಕಟ್ಟಿಕೊಂಡು ಹೋಗಲಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಆದರೆ ಈಗ ತಂತ್ರಗಾರಿಕೆಗಾಗಿ ಕುಂಕುಮ ಇಟ್ಟುಕೊಂಡಿದ್ದಾರೆ. ಅವರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆಯೇ ಇಲ್ಲ ಎಂದರು.

http://kalpa.news/wp-content/uploads/2025/03/PES-Video.mp4

ಶಾಸಕರ ಅಮಾನತು

ಕಾಂಗ್ರೆಸ್‌ ಸರ್ಕಾರ ವಿಧಾಮಸಭೆಯಲ್ಲಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿ ಅನ್ಯಾಯ ಮಾಡಿದೆ. ಇದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಿರಬೇಕು. ಸ್ಪೀಕರ್‌ ಯು.ಟಿ.ಖಾದರ್‌ ಹೇಗೆ ಸದನ ನಡೆಸುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ನಾನು ಎಂಟು ಬಾರಿ ಫೋನ್‌ ಕರೆ ಮಾಡಿದರೂ ಆಮೇಲೆ ಬಾ ಎನ್ನುತ್ತಾರೆ. ಹಬ್ಬ ಇದೆ, ನಮಾಜ್‌ ಇದೆ ಎಂದು ಹೇಳುತ್ತಾರೆ. ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆಂದು ನನಗೆ ಅನ್ನಿಸುತ್ತಿಲ್ಲ ಎಂದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ, ಫಾಜಿಲ್‌ ಕುಟುಂಬವೇ ಭಾಗಿಯಾಗಿದೆ ಎಂದು ಪೊಲೀಸರು ಹೇಳಿದ್ದರೆ, ಸ್ಪೀಕರ್‌ ಯು.ಟಿ.ಖಾದರ್‌ ಮಾಧ್ಯಮದೊಂದಿಗೆ ಮಾತನಾಡಿ ಕುಟುಂಬ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಒಂದು ಕೊಲೆಯ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸ್ಪೀಕರ್‌ ಅನ್ನು ನಾನು ನೋಡಿದ್ದು ಇದೇ ಮೊದಲು. ಈ ಕೊಲೆಗೂ ಯು.ಟಿ.ಖಾದರ್‌ ಅವರಿಗೂ ಏನು ಸಂಬಂಧ? ಇವರೇನು ಗೃಹ ಸಚಿವರಾ? ಇವರಿನ್ನೂ ಕಾಂಗ್ರೆಸ್‌ ಪಕ್ಷದೊಳಗೆ ಇದ್ದಾರೆ ಎಂದು ಟೀಕಿಸಿದರು.

ನಾಳೆ ರಾಜ್ಯಪಾಲರನ್ನು ಭೇಟಿ ಮಾಡಿ ಈ ಕುರಿತು ಸರಿಯಾದ ತನಿಖೆ ನಡೆಸಲು ಮನವಿ ಮಾಡಲಾಗುವುದು. ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕುವ ಕುರಿತು ಪೊಲೀಸರಿಗೆ ನಿರ್ದೇಶನ ನೀಡುವಂತೆಯೂ ಕೋರಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreIndian SoldierKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPakistanPM Narendra ModiR Ashokಆರ್. ಅಶೋಕಪಾಕಿಸ್ತಾನಪ್ರಧಾನಿ ನರೇಂದ್ರ ಮೋದಿಬೆಂಗಳೂರುಭಾರತೀಯ ಯೋಧರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಪರೇಷನ್ ಸಿಂಧೂರ | ಮುಗ್ದ ಹೆಣ್ಣು ಮಕ್ಕಳ ಪ್ರತೀಕಾರ | ಬಸವರಾಜ ಬೊಮ್ಮಾಯಿ

Next Post

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

kalpa News

kalpa News

Next Post
ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL