ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು.

Also read: ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ ಅವರೂ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post