ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಕೊರೋನಾ ರೂಪಾಂತರಿ ಜೆಎನ್ 1 Corona JN-1 ಉಪತಳಿ ಉಲ್ಬಣಗೊಳ್ಳುತ್ತಿದ್ದು, ಈವರೆಗೂ ಮೂವರು ಬಲಿಯಾಗಿದ್ದಾರೆ.
ಕೇರಳದಲ್ಲಿ ಆರ್ಭಟ ಮೆರೆಯುತ್ತಿರುವ ಸೋಂಕು, ರಾಜ್ಯದಲ್ಲೂ ಆತಂಕ ಸೃಷ್ಠಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಡಿ.20ರ ನಿನ್ನೆಯವರೆಗಿನ ಮಾಹಿತಿಯಂತೆ, ಕೇರಳದ ನಂತರ ಕರ್ನಾಟಕ ದೇಶದಲ್ಲೇ 2ನೆಯ ಸ್ಥಾನದಲ್ಲಿದೆ. ದೇಶದಲ್ಲಿ ಈವರೆಗೂ 2,305 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಕೇರಳದಲ್ಲಿ 2,041 ಪ್ರಕರಣಗಳು ದಾಖಲಾಗಿದ್ದರೆ, ಕರ್ನಾಟಕದಲ್ಲಿ 79 ಪ್ರಕರಣಗಳು ದಾಖಲಾಗಿವೆ.
Also read: ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
ಇನ್ನು, ರಾಜ್ಯದಲ್ಲಿ ದಿನಕ್ಕೆ 1,000 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿದ್ದು, ಶನಿವಾರದ ವೇಳೆಗೆ ಇದು 5,000ಕ್ಕೆ ತಲುಪಲಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 Covid-19 ಪ್ರಕರಣಗಳನ್ನು ನಿಭಾಯಿಸಲು ಪೂರ್ವಭಾವಿ ಸಿದ್ಧತೆಗಳ ಅಗತ್ಯವನ್ನು ಕೈಗೊಳ್ಳಲಾಗುತ್ತಿದೆ.
ರಾಜ್ಯದ ಆಸ್ಪತ್ರೆಗಳಲ್ಲಿ ಆಮ್ಲಜನಕ, ಔಷಧಗಳು ಮತ್ತು ಸುಧಾರಿತ ಶೇಖರಣಾ ಸೌಲಭ್ಯಗಳ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.
ಪ್ರಮುಖವಾಗಿ ರಾಜ್ಯದ ಆಸ್ಪತ್ರೆಗಳಲ್ಲಿ ಐಸಿಯು ಹಾಗೂ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post