ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ Chamarajapete Edgha maidana ಯಾವುದೇ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದ್ದು, ಗಣೇಶೋತ್ಸವ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಹೆಗಲಿಗೆ ಹಾಕಿದೆ.
ಈ ಕುರಿತಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ವಿಭಾಗೀಯ ಪೀಠ ಈ ಸ್ಥಳದಲ್ಲಿ ಯಾವುದೇ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಬಹುದು. ಗಣೇಶೋತ್ಸವ ಕುರಿತಂತೆ ಅರ್ಜಿಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ ಅನುಮತಿ ನೀಡಬಹುದಾಗಿದೆ ಎಂದು ಸರ್ಕಾರದ ಅಂಗಳಕ್ಕೆ ಗಣೇಶೋತ್ಸವ ಚೆಂಡನ್ನು ಹಾಕಿದೆ.
ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ಸ್ಥಳೀಯರು ಈ ಬಾರಿ ಈದ್ಗಾ ಮೈದಾನದಲ್ಲೇ ಗಣೇಶೋತ್ಸವ ಆಚರಿಸಲು ಸರ್ಕಾರಕ್ಕೆ ಬಹಳಷ್ಟು ಅರ್ಜಿಗಳನ್ನು ಸಲ್ಲಿಸಿದೆ. ಇದಕ್ಕೆ ನ್ಯಾಯಾಲವೂ ಸಹ ಅನುಮತಿ ನೀಡಿದ್ದು, ರಾಜ್ಯಸರ್ಕಾರ ಗಣೇಶೋತ್ಸವಕ್ಕೆ ಅನುಮತಿ ನೀಡುತ್ತದೆಯೇ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post