ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಕೋವಿಡ್ 19 Covid-19 ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ 19 ಪರಿಸ್ಥಿತಿಯ ಕುರಿತಾಗಿ ಇಂದು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯಲ್ಲಿ ಚರ್ಚಿಸಿದ ಅವರು, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್’ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆ ನೀಡಿದರು.
ಕೋವಿಡ್ 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಅದರಲ್ಲೂ ಜೆಎನ್ 1 ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ ಎಂದರು.
ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟçದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 ಸಕ್ರಿಯ ಪ್ರಕರಣಗಳಿವೆ ಎಂದರು.
ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿದ್ದು, ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿ ಹೋಂ ಐಸೋಲೇಶನ್ ಆಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದು, ಏಳು ಜನರು ಐಸಿಯುನಲ್ಲಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 ರ್ಯಾಪಿಡ್ ಟೆಸ್ಟ್ ಹಾಗೂ 3500 ಆರ್’ಟಿಪಿಸಿಆರ್ ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಡಿ.15 ರಂದು ಒಂದು ಹಾಗೂ ಡಿ.20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಆದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್ 19 ಈಗ ಪ್ಯಾಂಡಮಿಕ್ ಆಗಿ ಉಳಿದಿಲ್ಲ. ಎಪಿಡಮಿಕ್ ಆಗಿದೆ ಎಂದರು.
ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಕೋವಿಡ್ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು. ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ ಎಂದರು.
Also read: ಪತಿಯನ್ನೇ ಇರಿದುಕೊಂದ ಪತ್ನಿ | ಈ ಘೋರ ಕೃತ್ಯಕ್ಕೆ ಕಾರಣವೇನು?
ಸಭೆಯಲ್ಲಿ ಚರ್ಚಿತ ವಿಷಯಗಳು:
- ಹಿಂದಿನ ಕೋವಿಡ್ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು.
- ಆಕ್ಸಿಜನ್, ವೆಂಟಿಲೇಟರ್, ಬೆಡ್’ಗಳು ಯಾವುದಕ್ಕೂ ತೊಂದರೆ ಆಗಬಾರದು.
- ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್ ಲಭ್ಯತೆಯನ್ನು ಖಾತರಿ ಪಡಿಸಬೇಕು.
- ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿP್ಷÀಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.
- ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.
- ಎಲ್ಲ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗಿದ್ದು, ಎಲ್ಲ ಆಸ್ಪತ್ರೆಗಳೂ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಬೇಕು.
ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು, ಮಾರ್ಗಸೂಚಿಗಳು
- 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು
- ಮಾಸ್ಕ್ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಬಾರದು.
- ಉಸಿರಾಟದ ಸಮಸ್ಯೆಯ ಲP್ಷÀಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್ ಧರಿಸಬೇಕು.
- ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯ¯್ಲೆÃ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
- ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಉತ್ತಮ.
- ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















