Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜನರ ದಾರಿ ತಪ್ಪಿಸಿದ ಪಕ್ಷಗಳೇ ಕೋವಿಡ್ ಸಾವಿನ ಹೆಚ್ಚಳಕ್ಕೆ ಕಾರಣ: ನಳಿನ್‍ಕುಮಾರ್ ಕಟೀಲ್

May 14, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲಿ ಲಸಿಕೆ ಬಗ್ಗೆ “ಅದು ಬಿಜೆಪಿ ಲಸಿಕೆ” ಎಂದು ಆಕ್ಷೇಪಿಸಿವರು ಈಗ ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಲಸಿಕೆ ಬಂದಾಗ ಜನರ ದಾರಿ ತಪ್ಪಿಸಿದವರು ಇವತ್ತು ಕೋವಿಶೀಲ್ಡ್, ಕೋವ್ಯಾಕ್ಸಿನ್ ಇಲ್ಲ ಎಂದು ಟೀಕಿಸುತ್ತಿದ್ದಾರೆ. ಜನರ ದಾರಿ ತಪ್ಪಿಸಿದ ಪಕ್ಷಗಳೇ ರಾಜ್ಯದಲ್ಲಿ ಅತಿಹೆಚ್ಚು ಕೋವಿಡ್ ಸಾವಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2 ಕೋಟಿ ಕೋವಿಶೀಲ್ಡ್, ಒಂದು ಕೋಟಿ ಕೋವ್ಯಾಕ್ಸಿನ್ ಲಸಿಕೆ ಖರೀದಿಗೆ ರಾಜ್ಯ ಸರಕಾರ ಈಗಾಗಲೇ ಆದೇಶ ನೀಡಿದೆ. ಕೆಲವೇ ದಿನಗಳಲ್ಲಿ ಅದು ಬರಲಿದೆ ಎಂದರು. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಚಿವರ ತಂಡವು ಒಂದಾಗಿ ಕೆಲಸ ಮಾಡುತ್ತಿದೆ. ಲಾಕ್‍ಡೌನ್ ಬಳಿಕ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಕೊರೋನಾ ನಿರ್ವಹಣೆಯಲ್ಲಿ ವಿರೋಧ ಪಕ್ಷದವರು ರಾಜಕೀಯ ಮಾಡದಿರಿ. ಎಲ್ಲರೂ ಒಂದಾಗಿ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಜನರಲ್ಲಿ ವಿಶ್ವಾಸ, ಆತ್ಮವಿಶ್ವಾಸ ತುಂಬುವ ಕೆಲಸ ಎಲ್ಲರ ಜವಾಬ್ದಾರಿ. ಕೋವಿಡ್ ಒಂದು ಮತ್ತು ಎರಡನೇ ಅಲೆಯ ಭೀಕರತೆಯ ಕಲ್ಪನೆಯೇ ಇರಲಿಲ್ಲ ಎಂದು ಅವರು ತಿಳಿಸಿದರು.

ಕೋವಿಡ್‍ಗೆ ಬಿಜೆಪಿಯವರು ಅಥವಾ ಕಾಂಗ್ರೆಸ್‍ನವರು ಎಂಬ ಭೇದಭಾವ ಇಲ್ಲ. ಅದನ್ನು ಎಲ್ಲಾ ಜನಪ್ರತಿನಿಧಿಗಳೂ ಅರ್ಥ ಮಾಡಿಕೊಂಡು ಜನರ ಪ್ರಾಣರಕ್ಷಣೆಗೆ ಸಹಕರಿಸಬೇಕು ಎಂದರು.

2020ರಲ್ಲಿ ರಾಜ್ಯದಲ್ಲಿ 1,970 ಆಕ್ಸಿಜನ್ ಬೆಡ್ ಇತ್ತು. ಅದನ್ನು ಈಗ 24,000ಕ್ಕೆ ಏರಿದೆ. ಆಗ 444 ಐಸಿಯು ಇತ್ತು. ಈಗ 1,135 ಇದೆ. ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕ ತೆರೆಯಲು ಶೇ 70 ಸಬ್ಸಿಡಿಯನ್ನು ರಾಜ್ಯ ಸರಕಾರವು ಕೊಡುತ್ತಿದೆ. ಆಕ್ಸಿಜನ್ ಹಂಚಿಕೆಯನ್ನೂ ಕೇಂದ್ರ ಸರಕಾರ ಹೆಚ್ಚಿಸಿದೆ ಎಂದು ವಿವರ ನೀಡಿದರು. ಅಗತ್ಯ ಆಸಕ್ಸಿಜನ್ ಅನ್ನು ಖರೀದಿಸಲಾಗುತ್ತಿದೆ ಅಲ್ಲದೆ ರೆಮಿಡಿಸಿವಿರ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಒಂದನೇ ಅಲೆ ಪ್ರವೇಶ ಆದಾಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ  ಜೆ.ಪಿ,ನಡ್ಡಾ ಅªರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಆಶಯದಂತೆ “ಸೇವಾ ಹೀ ಸಂಘಟನ್” ಅಡಿ ಪಕ್ಷವು ಕಾರ್ಯ ನಿರ್ವಹಿಸಿತ್ತು. 1.68 ಕೋಟಿ ಜನರಿಗೆ ಆಹಾರವನ್ನು 60 ಲಕ್ಷ ಕುಟುಂಬಗಳಿಗೆ ಆಹಾರ ಪೊಟ್ಟಣ, ವೈದ್ಯಕೀಯ ಕಿಟ್ ಒದಗಿಸಲಾಗಿತ್ತು. ಈ ಬಾರಿಯೂ ಎರಡನೇ ಅಲೆಯ ಸಂದರ್ಭದಲ್ಲೂ ಪಕ್ಷವು ಸೇವಾ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರ್ ರೂಂ ತೆರೆಯಲಾಗಿದೆ. ಇಲ್ಲಿಗೆ ಎರಡು ಸಾವಿರ ಕರೆಗಳು ಬಂದಿವೆ. 100 ಜನರಿಗೆ ಆಂಬುಲೆನ್ಸ್ ಸೇವೆ ನೀಡಿದ್ದು, 70 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 34 ಜನರ ಶವಸಂಸ್ಕಾರ ಮಾಡಲಾಗಿದೆ ಎಂದರು.

ಮೊದಲನೇ ಅಲೆ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿಯನ್ನು ನನ್ನ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕೊಟ್ಟಿದ್ದೇನೆ. ಈ ವರ್ಷ ಎರಡೂವರೆ ಕೋಟಿ ಅನುದಾನ ಬಂದಿದ್ದು, ಅದನ್ನು ಜಿಲ್ಲಾಡಳಿತಕ್ಕೆ ಕೊಟ್ಡಿದ್ದೇನೆ. ಇದೇ ಮಾದರಿಯಲ್ಲಿ ಎಲ್ಲಾ ಬಿಜೆಪಿ ಸಂಸದರೂ ತಮ್ಮ ಅನುದಾನವನ್ನು ಕೋವಿಡ್‍ಗೇ ಬಳಸಲು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್ ಕೊಡಲು ಮುಖ್ಯಮಂತ್ರಿಗಳ ಭೇಟಿ ವೇಳೆ ಕೇಳಿದ್ದೆ. ಕೊಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರು ಈಗಾಗಲೇ 40 ವೆಂಟಿಲೇಟರ್ ನೀಡಿದ್ದಾರೆ ಎಂದರು.

ಮೂರು ಏಜೆನ್ಸಿಗಳಿಂದ ಬಳ್ಳಾರಿ, ಪಾಲಕ್ಕಾಡ್‍ನಿಂದ ಆಕ್ಸಿಜನ್ ಬರಬೇಕು. ಸ್ಟಾಕ್, ಸಾರಿಗೆ ನಿರ್ವಹಣೆಗೆ ಎಂಆರ್‍ಪಿಎಲ್‍ನಿಂದ ಮಂಗಳೂರಿನ ವೆನ್ಲಾಕ್‍ಗೆ ಸರಬರಾಜು ಮಾಡಲಾಗುತ್ತಿದೆ. ಇಎಸ್‍ಐ ಮತ್ತು ಬಂಟ್ವಾಳ ತಾಲ್ಲೂಕಿಗೆ ಎಂಸಿಎಫ್ ಮೂಲಕ ಆಮ್ಲಜನಕ ನೀಡಲಾಗುತ್ತಿದೆ. ಪುತ್ತೂರು ಮತ್ತು ಬೆಳ್ತಂಗಡಿ ತಾಲ್ಲೂಕುಗಳಿಗೆ ಗೇಲ್ ಇಂಡಿಯಾದಿಂದ, ಉಪ್ಪಿನಂಗಡಿ ಮತ್ತು ಮೂಡಬಿದಿರೆಗೆ ಕುದುರೆಮುಖ ಕಂಪೆನಿ ಮೂಲಕ ಸರಬರಾಜು ನಡೆದಿದೆ. ಉಳ್ಳಾಲದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲು ಇನ್‍ಫೋಸಿಸ್ ಮುಂದೆ ಬಂದಿದೆ ಎಂದು ವಿವರಿಸಿದರು.

ಮಂಗಳೂರಿನ ವೆನ್ಲಾಕ್‍ನಲ್ಲ್ಲಿ 6 ಸಾವಿರ ಲೀ. ನ ಎರಡು ಟ್ಯಾಂಕ್‍ಗಳು ದಾಸ್ತಾನಿವೆ.ಕ್ರೆಡೈ, ಬಿಎಎಎಸ್‍ಎಫ್, ಎನ್‍ಎಂಪಿಟಿಗಳೂ ಸಹಾಯಹಸ್ತ ಚಾಚಿವೆ. ಎಸ್‍ಇಜೆಡ್ ಆಂಬುಲೆನ್ಸ್‍ಗಳ ಬಾಡಿಗೆ ಭರಿಸಲು ಮುಂದಾಗಿದೆ ಎಂದು ತಿಳಿಸಿದರು. ಸಚಿವ ಶ್ರೀ ಮುರುಗೇಶ್ ನಿರಾಣಿ ಅವರೂ ಈ ವಿಚಾರದಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆ ಆಮ್ಲಜನಕ ಸರಬರಾಜು ಮತ್ತು ವಿತರಣೆಯ ಸಮಸ್ಯೆ ಉಂಟಾಗುವುದಿಲ್ಲ ಎಂದರು.

ಕೆನರಾ ಬ್ಯಾಂಕ್ ಕೊಟ್ಟಿರುವ 25 ಲಕ್ಷ ದೇಣಿಗೆಯನ್ನು ಉಪ್ಪಿನಂಗಡಿಗೆ ನೀಡಲಾಗಿದೆ. ಮೂಡಬಿದಿರೆ, ಬೆಳ್ತಂಗಡಿಗೆ ತಲಾ 50 ಆಕ್ಸಿಜನ್ ಬೆಡ್‍ಗಳನ್ನು ಕುದುರೆಮುಖ ಕಂಪೆನಿಯು ನೀಡುತ್ತಿದೆ ಎಂದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ವೇದವ್ಯಾಸ ಕಾಮತ್, ಪಕ್ಷದ ಜಿಲ್ಲಾಧ್ಯಕ್ಷ  ಸುದರ್ಶನ ಎಂ. ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #annadaNewsBangaloreCovidKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaMP Nalin Kumar KateelNewsinKannadaNewsKannadaState Newsಕೋವಿಡ್ನಳಿನ್‍ಕುಮಾರ್ ಕಟೀಲ್ಬೆಂಗಳೂರು
Previous Post

ರಾಜ್ಯದಲ್ಲಿ ಕೋವ್ಯಾಕ್ಸಿನ್ ತಯಾರಿಕಾ ಘಟಕ ಸ್ಥಾಪನೆ ಎಲ್ಲಿ ಗೊತ್ತಾ? ಇಲ್ಲಿದೆ ಮಾಹಿತಿ!

Next Post

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಸಂಸದ ರಾಘವೇಂದ್ರ ವಿರೋಧ ಪಕ್ಷಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇಕೆ? ಇಲ್ಲಿದೆ ವಿವರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!