ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಲ್ಪಸಂಖ್ಯಾತರ ಮತಕ್ಕಾಗಿ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಮಂಗಳೂರು ಸ್ಫೋಟ ಪ್ರಕರಣಕ್ಕೂ ಮತದಾರರ ಪಟ್ಟಿ ಪ್ರಕರಣಕ್ಕೂ ಯಾವ ಸಂಬಂಧವೂ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿ ತುಂಬಾ ನೋವಾಯಿತು. ಜವಾಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಗಳು ಆಡುವ ಮಾತಲ್ಲ ಇದು. ಇದನ್ನು ನಾನು ಖಂಡಿಸುತ್ತೇನೆ. ದೇಶದ ಆಂತರಿಕ ಭದ್ರತೆಯ ವಿಚಾರ ಇದು. ನಾವೆಲ್ಲಾ ರಾಜಕಾರಣವನ್ನು ಮೀರಿ ಇದರ ಬಗ್ಗೆ ಹೇಳಿಕೆ ನೀಡಬೇಕು ಎಂದು ಹೇಳಿದರು.
ಮತಪಟ್ಟಿ ಅಕ್ರಮದಲ್ಲಿ ಯಾರನ್ನು ಬಂಧನ ಮಾಡಬೇಕಿತ್ತು ಅದನ್ನು ಮಾಡಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಯಾವುದನ್ನೂ ರಾಜ್ಯ ಸರ್ಕಾರ ಮುಚ್ಚಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post