No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ:

ವೈಮಾನಿಕ-ರಕ್ಷಣೆ ಸೇರಿ ೫ ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 3, 2021
in ಬೆಂಗಳೂರು ನಗರ
0
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ:
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅನಾವರಣಗೊಳಿಸಿದರು.

ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರುವ ಈ ನೀತಿಯನ್ನು ಇಡೀ ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಮೊತ್ತ ಮೊದಲ ಬಾರಿಗೆ ರೂಪಿಸಿ ಅಳವಡಿಸಿಕೊಳ್ಳುತ್ತಿದೆ ಎಂದು ನೀತಿಯನ್ನು ಅನಾವರಣಗೊಳಿಸಿದ ನಂತರ ಉಪ ಮುಖ್ಯಮಂತ್ರಿಗಳು ಹೇಳಿದರು.


ನಮ್ಮ ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು 2018ರಿಂದ ವಾರ್ಷಿಕವಾಗಿ ಸರಾಸರಿ ಶೇ.12.8ರಷ್ಟು ಬೆಳವಣಿಗೆ ಸಾಧಿಸುತ್ತಿದೆ. ಇದೇ ವೇಳೆ ಈ ವಲಯದ ಮೇಲಿನ ಜಾಗತಿಕ ವೆಚ್ಚವು 2025ರ ಹೊತ್ತಿಗೆ 2 ಟ್ರಿಲಿಯನ್ ಡಾಲರ್‌ಗಳಷ್ಟಾಗುವ ಅಂದಾಜಿದ್ದು, ಈ ವಹಿವಾಟು ಅವಕಾಶಗಳಿಗೆ ಅನುಗುಣವಾಗಿ ರಾಜ್ಯವನ್ನು ಸಜ್ಜುಗೊಳಿಸುವ ಉದ್ದೇಶವನ್ನು ಈ ಕಾರ್ಯನೀತಿ ಹೊಂದಿದೆ ಎಂದು ಅವರು ಹೇಳಿದರು.

ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಂಸ್ಥೆ (ಕಿಟ್ಸ್), ನ್ಯಾಸ್‌ಕಾಂನ ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ರೂಪಿಸಿರುವ ಕಾರ್ಯನೀತಿ ಇದಾಗಿದೆ ಎಂದ ಡಿಸಿಎಂ; ಇದರ ವ್ಯಾಪ್ತಿಯಲ್ಲಿ ಅನೇಕ ವಲಯಗಳನ್ನು ಸೇರಿಸಿಕೊಂಡು ಮುನ್ನಡೆಯಲಾಗುವುದು ಎಂದರು.


ಕ್ಷೇತ್ರಗಳು ಯಾವುವು?:
ವೈಮಾಂತರಿಕ್ಷ ಮತ್ತು ರಕ್ಷಣೆ, ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನಗಳು, ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣಗಳು/ಸಾಧನಗಳು, ಅರೆವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.), ಸಾಫ್ಟ್‌ವೇರ್ ಉತ್ಪನಗಳು ಇವು ಈ ಕಾರ್ಯನೀತಿಯ ಐದು ಆದ್ಯತಾ ವಲಯಗಳಾಗಿವೆ. ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಅನುಷ್ಟಾನದ ನಂತರ ಮೇಲಿನ ಎಲ್ಲ ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶಗಳನ್ನು ಹಾಗೂ ಮುನ್ನಡೆಯನ್ನು ಕಾಣಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಜ್ಞಾನಕಾಶಿಯಾಗಿಸಲು ಸಹಕಾರಿ:
400ಕ್ಕೂ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳು/ಜಿಸಿಸಿಗಳು ರಾಜ್ಯದಲ್ಲಿದ್ದು ದೇಶದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಉದ್ಯಮದಲ್ಲಿ ಅತ್ಯಂತ ಹೆಚ್ಚಿನ ಕೊಡುಗೆ ನೀಡುತ್ತಿದೆ. ಈ ಅಗ್ರ ಶ್ರೇಯಾಂಕವನ್ನು ಕಾಯ್ದುಕೊಳ್ಳುವ ಗುರಿ ನಮಗಿದ್ದು, ಬೌದ್ಧಿಕ ಸ್ವತ್ತುಗಳ ಸೃಷ್ಟಿ ಹಾಗೂ ರಾಜ್ಯವನ್ನು ಕೌಶಲಯುಕ್ತ ಜ್ಞಾನಕಾಶಿಯಾಗಿಸಲು ಇದು ಸಹಕಾರಿ ಆಗುತ್ತದೆ ಎಂದು ಡಿಸಿಎಂ ವಿವರಿಸಿದರು.

ಅತ್ಯಂತ ಪರಿಣಾಮಕಾರಿ ಒಳನೋಟದಿಂದ ಕೂಡಿದ ನೀತಿ ಇದಾಗಿದೆ. ಉದ್ಯಮ ಪ್ರಚಲಿತ ಸ್ಥಿತಿಗತಿಗಳನ್ನು ಅವಲೋಕನ ಮಾಡಿ, ಅದಕ್ಕೆ ತಕ್ಕಂತೆ ಇದನ್ನು ರೂಪಿಸಲಾಗಿದೆ. ರಾಜ್ಯವು ಬಹುರಾಷ್ಟ್ರೀಯ ಕಂಪನಿಗಳ ಪ್ರಶಸ್ತ ಆದ್ಯತೆಯ ತಾಣವನ್ನಾಗಿಸಲು ಈ ನೀತಿ ಅನುವು ಮಾಡಿಕೊಡಲಿದೆ. ಜಾಗತಿಕ ಮುಂಚೂಣಿ ಇ.ಆರ್.&ಡಿ ಕಂಪನಿಗಳು, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಎಂಜಿನಿಯರಿಂಗ್ ಸೇವಾದಾತರು ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೂಡಿಕೆ ಮಾಡುವಂತೆ ಮಾಡುವುದು ಹಾಗೂ ಹಾಗೆ ಬರುವ ಘಟಕಗಳಿಗೆ ರಾಜ್ಯದಲ್ಲಿ ಸೂಕ್ತ ವಾತಾವರಣ ನಿರ್ಮಿಸಬೇಕು ಎಂಬುದು ಈ ನೀತಿ ಗುರಿ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021: ಏನು? ಎತ್ತ?
ಈಗ ಅನಾವರಣಗೊಂಡಿರುವ ಈ ನೀತಿಯ ಕಾರ್ಯಸೂಚಿ, ಉದ್ದೇಶಗಳು, ಉಪಯೋಗ, ಇನ್ನಿತರೆ ಅಂಶಗಳ ಬಗ್ಗೆ ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿ, ಈ ನೀತಿಯ ಉದ್ದೇಶ-ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವೆ ಸಂಪರ್ಕಗಳನ್ನು ಸೃಷ್ಟಿಸುವುದು. ಕೌಶಲಯುಕ್ತ ಎಂಜಿನಿಯರಿಂಗ್ ಮಾನವ ಸಂಪನ್ಮೂಲ ಸೃಷ್ಟಿಸುವುದು. ಪರೀಕ್ಷೆ, ಪ್ರಾಯೋಗಿಕ ಮಾದರಿ ಹಾಗೂ ಇತರ ನಾವೀನ್ಯತಾ ಮೂಲಸೌಕರ್ಯಗಳ ಸೃಷ್ಟಿ. ಬೆಂಗಳೂರು ವ್ಯಾಪ್ತಿಯಾಚೆ ಎಂಜಿನಿಯರಿಂಗ್ ಆರ್&ಡಿ ಉದ್ಯಮ ಬೆಳೆಸುವುದು ನೀತಿಯ ಉಪಯೋಗ ದೇಶದ ಎಂಜಿನಿಯರಿಂಗ್ ಮತ್ತು ಅಭಿವೃದ್ಧಿ ವಹಿವಾಟನಲ್ಲಿ ಕರ್ನಾಟಕದ ಶೇ.45ರಷ್ಟು ಕೊಡುಗೆಗೆ ಅನುವು ಮಾಡಿಕೊಡುವುದು. ೫೦,೦೦೦ ಕೌಶಲಯುಕ್ತ ಉದ್ಯೋಗಗಳನ್ನು (ಪ್ರತ್ಯಕ್ ಹಾಗೂ ಪರೋಕ್ಷ) ಸೃಷ್ಟಿಸುವುದು. ಎಂಜಿನಿಯರಿಂಗ್ ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಆಕರ್ಷಿಸುವುದು. ಎಂಜಿನಿಯರಿಂಗ್/ಸಂಶೋಧನಾ ಪ್ರತಿಭಾ ಸಂಪನ್ಮೂಲ ಹಾಗೂ ಉದ್ಯಮದ ಅಗತ್ಯಗಳ ಅಂತರ ತುಂಬುವುದು ಎಂದರು.

ಪ್ರೋತ್ಸಾಹಕ ಕ್ರಮ:
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಬಾಡಿಗೆ ಮರುಪಾವತಿ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ನೇಮಕಾತಿಗೆ ನೆರವು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಹೂಡಿಕೆಗೆ ಸಬ್ಸಿಡಿ. ನಾವೀನ್ಯತಾ ಪ್ರಯೋಗಾಲಯಗಳ ಸ್ಥಾಪನೆಗೆ ಹಣಕಾಸು ನೆರವು. ಡಿಜಿಟಲ್ ನಾವೀನ್ಯತಾ ಕಾರ್ಯಯೋಜನೆಗಳಿಗೆ 3 ಕೋಟಿರೂ. ವರೆಗೆ ನೆರವು ನೀಡಲಾಗುವುದು ಎಂದರು.

ಶೈಕ್ಷಣಿಕ ವಲಯದ ಸಂಶೋಧನೆಗಳನ್ನು ಔದ್ಯಮಿಕ ಆನ್ವಯಿಕತೆಯಾಗಿ ಪರಿವರ್ತಿಸಲು ಅನುದಾನ. ಭವಿಷ್ಯದ ಇ.ಆರ್. ಮತ್ತು ಡಿ ಕೋರ್ಸುಗಳನ್ನು ರೂಪಿಸಲು ನೆರವು. ಶೈಕ್ಷಣಿಕ ಕೌಶಲಗಳು ಹಾಗೂ ಉದ್ಯಮಗಳ ನಡುವಿನ ಅಂತರ ತುಂಬಲು ಇಂಟರ್ನಶಿಪ್ ಉತ್ತೇಜಿಸಲು ಸ್ಟೈಪೆಂಡ್ ನೀಡುವುದು ಇತ್ಯಾದಿ. ಇ.ಆರ್.ಅಂಡ್ ಡಿ ವಲಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಉತ್ತೇಜನ. ಪಿಎಚ್.ಡಿ. ಮಾಡುವವರಿಗೆ ಮುಖ್ಯಮಂತ್ರಿಯವರ ಸಂಶೋಧನಾ ಅನುದಾನ ನೀಡಲಾಗುವು ಎಂದರು.

ರಾಜ್ಯದ ಮಾಜಿ ಮುಖ್ಯಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗ-೨ರ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್, ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನ್ಯಾಸ್‌ಕಾಂ ಅಧ್ಯಕ್ಷೆ ದೇಬ್‌ಜಾನಿ ಘೋಷ್ ಅವರುಗಳ ನೀತಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಪ್ರಸಕ್ತ ನೀತಿಯಿಂದ ರಾಜ್ಯಕ್ಕೆ-ದೇಶಕ್ಕೆ ಆಗಲಿರುವ ಪ್ರಯೋಜನಗಳ ಬಗ್ಗೆ ಬೆಳಕು ಚೆಲ್ಲಿದರು

ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು ನೀತಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯದ ನ್ಯಾಸ್‌ಕಾಂ ಮುಖ್ಯಸ್ಥ ವಿಶ್ವನಾಥನ್, ಕ್ವೆಸ್ಟ್ ಗ್ಲೋಬಲ್ ಅಧ್ಯಕ್ಷ ಡಾ.ಅಜಯ್ ಪ್ರಭು, ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreDCM Ashwath NarayanKannada News WebsiteKarnatakaKarnataka State Engineering Research And DevelopmentLatest News KannadaState Newsಬೆಂಗಳೂರು
Share197Tweet123Send
Previous Post

ಶಿವಮೊಗ್ಗ ಪತ್ರಿಕೋದ್ಯಮದಲ್ಲಿ ಹೊಸ ಪರ್ವ: ಒಂದಾದ ಎರಡು ಸಂಘಗಳು

Next Post

ಬಿಸಿಯೂಟ ಕಾರ್ಯಕರ್ತರಿಗೆ ವಿವಿಧ ಸೌಲಭ್ಯದ ಭರವಸೆ: ಶಾಸಕ ಟಿ.ರಘುಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಸಿಯೂಟ ಕಾರ್ಯಕರ್ತರಿಗೆ ವಿವಿಧ ಸೌಲಭ್ಯದ ಭರವಸೆ: ಶಾಸಕ ಟಿ.ರಘುಮೂರ್ತಿ

ಬಿಸಿಯೂಟ ಕಾರ್ಯಕರ್ತರಿಗೆ ವಿವಿಧ ಸೌಲಭ್ಯದ ಭರವಸೆ: ಶಾಸಕ ಟಿ.ರಘುಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL