Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

ರೋಗ ಲಕ್ಷಣಗಳಿದ್ದರೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ, ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

April 14, 2021
in ಬೆಂಗಳೂರು ನಗರ
0 0
0
File photo

File photo

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಈಗಿನ ಸಂದರ್ಭದಕ್ಕೆ ಅದು ಸರಿ ಹೊಂದುವುದೂ ಇಲ್ಲ. ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೆ ಒಳಗಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ʼಡಾ.ಅಂಬೇಡ್ಕರ್‌ ಜಯಂತಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಗಾರರ ಜತೆ ಅವರು ಮಾತನಾಡಿದರು.

ವೈಯಕ್ತಿಕವಾಗಿ ಲಾಕ್‌ಡೌನ್‌ ಬೇಡ ಎಂತಲೇ ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದರು.

ಎಲ್ಲ ಕಡೆ ಕೋವಿಡ್‌ ಉಚಿತ ತಪಾಸಣೆ ನಡೆಯುತ್ತಿದೆ. ಒಂದು ನಯಾಪೈಸೆಯನ್ನೂ ಖರ್ಚು ಮಾಡಬೇಕಾಗಿಲ್ಲ. ಹೊರಗಿನಿಂದ ನಗರಕ್ಕೆ ಯಾರಾದರೂ ಬಂದರೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾರೂ ಉಪೇಕ್ಷೆ ಮಾಡಬಾರದು. ಕೋವಿಡ್‌ ಲಕ್ಷಣಗಳೇನಾದರೂ ಕಂಡು ಬಂದರೆ ಅದನ್ನು ಕಡೆಗಣಿಸೋದು ಬೇಡ ಎಂದು ಅವರು ತಿಳಿಸಿದರು.

ಜತೆಗೆ, ಕೋವಿಡ್‌ ವಿಷಯದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುವ ಬದಲು ಸಂಕಷ್ಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರಲ್ಲದೆ, ಜನರು ಕೂಡ ಕಟ್ಟುನಿಟ್ಟಾಗಿ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು. ಆ ಬಗ್ಗೆ ಅಸಡ್ಡೆ ತೋರಿಸುವುದು ಸರಿಯಲ್ಲ ಎಂದರು.

ಯಾರೂ ಸೂಪರ್‌ಮ್ಯಾನ್‌ ಅಲ್ಲ
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದ ಅಶ್ವತ್ಥನಾರಾಯಣ, “ನನಗೇನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ. ಗಟ್ಟಿಮುಟ್ಟಾಗಿದ್ದೇನೆ ಎಂಬ ಅತಿ ಆತ್ಮವಿಶ್ವಾಸ ಯಾರಿಗೂ ಬೇಡ. ಯಾರೂ ಕೂಡ ಸೂಪರ್‌ಮ್ಯಾನ್‌ ಅಲ್ಲ. ಇದನ್ನು ಎಲ್ಲರೂ ನೆನಪಲ್ಲಿ ಇಟ್ಟುಕೊಳ್ಳಬೇಕು. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು” ಎಂದು ಡಿಸಿಎಂ ಕಿವಿಮಾತು ಹೇಳಿದರು.

ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಆ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ದಿನಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಜನರಿಗೆ ಉಚಿತ ಟೆಸ್ಟ್‌ ಮಾಡಲಾಗುತ್ತಿದೆ. ಯಾರಿಗೇ ಲಕ್ಷಣಗಳು ಇದ್ದರೆ ಅಂಥವರೆಲ್ಲ ತಕ್ಷಣ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಔಷಧ ಇದೆ, ಲಸಿಕೆಯೂ ಲಭ್ಯವಿದೆ. ಆಸ್ಪತ್ರೆಯಷ್ಟೇ ಅಲ್ಲದೆ ಮನೆಯಲ್ಲೂ ಹೋಮ್‌ ಐಸೋಲೇಷನ್‌ ಆಗಿ ಚಿಕಿತ್ಸೆ ಪಡೆಯಬಹುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು

ಲಸಿಕೆ ಅಭಿಯಾನ ಉತ್ತಮ
ಲಸಿಕೆ ತಯಾರಿಕೆ ಹಾಗೂ ಅಸಿಕೆ ಅಭಿಯಾನವು ಇಡೀ ಜಗತ್ತಿನಲ್ಲಿಯೇ ನಮ್ಮ ದೇಶದಲ್ಲಿ ಉತ್ತಮವಾಗಿ ನಡೆಯುತ್ತಿದೆ. ಹೆಚ್ಚು ಜನರಿಗೆ ಕ್ಷಿಪ್ರವಾಗಿ ವ್ಯಾಕ್ಷಿನ್‌ ಕೊಟ್ಟಿರುವ ಏಕೈಕ ದೇಶ ನಮ್ಮದು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.

ಕೋವಿಡ್‌ ಎರಡನೇ ಅಲೆಯ ಅಪಾಯದ ತೀವ್ರತೆ ಕಡಿಮೆ. ಆದರೆ, ವೇಗವಾಗಿ ಹರಡುತ್ತಿದೆ. ಯುವಜನರು, ಮಧ್ಯವಯಸ್ಕರಿಗೆ ಹೆಚ್ಚು ಅಪಾಯ ಕಾಣುತ್ತಿದೆ. ಕೆಲವರು ರೋಗ ಲಕ್ಷಣಗಳಿದ್ದರೂ ಸೂಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿಲ್ಲ. ಇವರಿಂದಲೇ ಹೆಚ್ಚು ಸಮಸ್ಯೆಯಾಗುತ್ತಿದೆ. ಕೋವಿಡ್‌ ಟೆಸ್ಟ್‌ ನೆಗೆಟೀವ್‌ ಬಂದರೂ ಯಾರೂ ಎಚ್ಚರ ತಪ್ಪಬಾರದು ಎಂದು ಅವರು ಎಚ್ಚರಿಕೆ ನೀಡಿದರು.
ಲಸಿಕೆ ಕೊರತೆ ಇಲ್ಲ
ಕೋವಿಡ್‌ ಲಸಿಕೆಯನ್ನು ರಫ್ತು ಮಾಡಿದ್ದರಿಂದಲೇ ದೇಶದಲ್ಲಿ ಕೊರತೆ ಉಂಟಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಾ.ಅಶ್ವತ್ಥನಾರಾಯಣ ತಳ್ಳಿಹಾಕಿದರು.

ಕುಮಾರಸ್ವಾಮಿ ಅವರು ಸರಿಯಾದ ಮಾಹಿತಿ ಇಲ್ಲದೆ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದ ಅವರು, ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಸಕಾಲಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಗ್ಧ ಜನರಿಗೆ ತಪ್ಪು ಮಾಹಿತಿ ಕೊಟ್ಟು ದಾರಿ ತಪ್ಪಿಸೋದು ಬೇಡ. ದೊಡ್ಡ ಸ್ಥಾನದಲ್ಲಿದ್ದವರು, ರಾಜ್ಯದ ಜವಾಬ್ದಾರಿ ಹೊತ್ತಿದ್ದವರು ಇಂಥ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದರು.

ಕೋವಿಡ್‌ ವಿಷಯದಲ್ಲಿ ಸರಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಲ ಕಾಲಕ್ಕೆ ಅವರ ಸಲಹೆಗಳನ್ನು ಪಡೆದಿದ್ದಾರೆ ಎಂದು ಅವರು ಹೇಳಿದರು.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಡಿರುವ ಆರೋಪ ಸುಳ್ಳು. ಅವರು ಪೂರ್ವಗ್ರಹಪೀಡಿತರಾಗಿ ದೂರುತ್ತಿದ್ದಾರೆ. ಪ್ರತಿಯೊಂದರಲ್ಲೂ ತಪ್ಪು ಹುಡುಕುವ ಅವರು, ಸಮಸ್ಯೆಗೆ ಪರಿಹಾರ ಹೇಳುವ ಕೆಲಸ ಮಾಡಿಲ್ಲ ಎಂದರು.‌

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreD K ShivakumarDCM Ashwath NarayanKannada News WebsiteLatest News KannadaLockdownState NewsVaccinationಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಬೆಂಗಳೂರುಲಸಿಕೆ ಅಭಿಯಾನಲಾಕ್‍ಡೌನ್
Previous Post

ಕಠಿಣ ಪರಿಶ್ರಮದಿಂದ ಸಾಧಿಸಿ ಮಾನ್ಯಳಾದ ಮಾನ್ಯತಾ ಜೈಕುಮಾರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

Next Post

ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!