ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನಸಾಮಾನ್ಯರ ರಕ್ಷಣೆಗಾಗಿ ಸೇವೆ ಮಾಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ-ನ್ಯಾಮತಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಯುವನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಿಧನರಾದ ಸಂದರ್ಭದಲ್ಲಿ ತಮ್ಮ ಕಣ್ಣುಗಳನ್ನು ಬೇರೊಬ್ಬರಿಗೆ ದಾನ ಮಾಡಿ ಬೆಳುಕು ನೀಡುವ ಮೂಲಕ ಸಾವಿನಲ್ಲಿ ಸಾರ್ಥಕ ಮೆರೆದಿದ್ದರು. ಈಗ ಇದರಿಂದ ಪ್ರೇರಣೆಗೊಂಡಿರುವ ಎಂ.ಪಿ. ರೇಣುಕಚಾರ್ಯ ಮತ್ತು ಅವರ ಕುಟುಂಬದವರು ಮರಣೋತ್ತರ ನಂತರ ತಮ್ಮ ನೇತ್ರಗಳನ್ನು ದಾನ ಮಾಡುವ ಮಹತ್ವದ ನಿರ್ಧಾರವನ್ನು ನಾಳೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ನಾಳೆ ಸಂಜೆ 5 ಗಂಟೆಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರೇಣುಕಾಚಾರ್ಯ ಅವರ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ದಾಂಜಲಿ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವರನಟ ಡಾ. ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ನೂರಾರು ಅಭಿಮಾನಿಗಳು ತಮ್ಮ ನೇತ್ರಗಳನ್ನು ದಾನ ಮಾಡಲು ತಮ್ಮ ಹೆಸರುಗಳನ್ನು ನೋಂದಾಯಿಸುವ ಮಹತ್ವದ ನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ.
ನಾಳೆ ಸಂಜೆ ನಡೆಯುವ ಶ್ರದ್ದಾಂಜಲಿ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ನಟರಾಜ್ ಎಂಟ್ರನೈರ್ಸ್ ಸಾರಥ್ಯದಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಕಲಾವಿದರಾದ ಹೊನ್ನಾವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post