ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದರು.
ಕೋವಿಡ್ 19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.
ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಸೂಚಿಸಿದರು.
ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿದೆ. ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕೊರೋನಾ ಟೆಸ್ಟ್ ಗೆ ಒಳಪಡಿಸುವಂತೆ ಸೂಚಿಸಿದರು.
ಹೊರ ರಾಜ್ಯಗಳಲ್ಲಿ ಎರಡನೇ ಅಲೆಯ ತೀವ್ರತೆ ಕಡಿಮೆಯಾಗದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಗೊಳಿಸಿದರೂ ಎಚ್ಚರಿಕೆಯಿಂದ ಇರುವಂತೆ ರಾಜ್ಯದ ಜನರಿಗೆ ಮನವಿ ಮಾಡಿದರು.

ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನ ಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರ ದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಯಿತು.
ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿಸಿ ವೈದ್ಯಕೀಯ ನಿಗಾ ವಹಿಸಲು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















