No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತ್ಯುತ್ತಮ ಅಂತರರಾಷ್ಟ್ರೀಯ ನಗರವಾಗಿ ಬೆಂಗಳೂರು ಅಭಿವೃದ್ಧಿ: ಸಿಎಂ ಬೊಮ್ಮಾಯಿ

kalpa News by kalpa News
January 7, 2023
in ಬೆಂಗಳೂರು ನಗರ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಉತ್ತಮ ಬೆಂಗಳೂರು ಹಾಗೂ ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಜನವರಿ 07: ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ನಮ್ಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಜೆಡಬ್ಲ್ಯೂ ಮ್ಯಾರಿಯಟ್ ಹೊಟೇಲ್ ನಲ್ಲಿ ಆಯೋಜಿಸಿರುವ ಡೆಕ್ಕನ್ ಹೆರಾಲ್ಡ್ ಬೆಂಗಳೂರು – 2040ರ ಸಮ್ಮಿಟ್ ನಲ್ಲಿ ಪಾಲ್ಗೊಂಡು ಮಾತನಾಡಿದರು

ಭವಿಷ್ಯದ ಬೆಂಗಳೂರು ನಿರ್ಮಿಸಲು ಹಾಗೂ ಹಳೆಯದನ್ನು ಸರಿಪಡಿಸಲು ಎರಡು ಯೋಜನೆಗಳು ಅಗತ್ಯವಿದೆ. ಇದಕ್ಕಾಗಿ ಅಗಾಧ ಹೂಡಿಕೆಯ ಅಗತ್ಯವಿದೆ. ತ್ಯಾಜ್ಯ ನಿರ್ವಹಣೆ, ಒಳಚರಂಡಿ, ರಾಜಕಾಲುವೆ, ರಸ್ತೆ ನಿರ್ವಹಣೆಯ ಸುಧಾರಣೆಯೂ ಆಗಬೇಕು. ಸಂಚಾರ ನಿರ್ವಹಣೆ ಸೇರಿದಂತೆ ಸಾರಿಗೆ, ಉಪನಗರ ರೈಲು, ರಸ್ತೆ, ಸಿಗ್ನಲ್ ಮುಂತಾದವನ್ನು ಇದು ಒಳಗೊಂಡಿದೆ ಎಂದರು.
ಸಂಚಾರ ವ್ಯವಸ್ಥೆ ನಿರ್ವಹಣೆ
ಸಂಚಾರ ವ್ಯವಸ್ಥೆ ನಿರ್ವಹಣೆಗೆ ಪ್ರತ್ಯೇಕ ಆಯುಕ್ತಾಲಯವನ್ನು ರಚಿಸಲಾಯಿತು. ಇದರಿಂದಾಗಿ ಸಾಕಷ್ಟು ಬದಲಾವಣೆ ತರಲು ಸಾಧ್ಯವಾಗಿದೆ. ಸಿಗ್ನಲ್ ವ್ಯವಸ್ಥೆ ಸುಧಾರಣೆ, ಹೆಚ್ಚುವರಿ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.ಇಂಧನ ವಲಯದಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದರು.

ತ್ಯಾಜ್ಯ ನಿರ್ವಹಣೆಗೆ ತಂತ್ರಜ್ಞಾನ ಬಳಕೆ
ತ್ಯಾಜ್ಯ ನಿರ್ವಹಣೆಗೆ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಒಂದು ವಾರ್ಡಿನ ತ್ಯಾಜ್ಯವನ್ನು ಅಲ್ಲಿಯೇ ಸಂಸ್ಕರಿಸಲು ಸಾಧ್ಯವಾಗುವುದು. ಸಾರಿಗೆ, ಸ್ಥಳ ಉಳಿತಾಯವಾಗುವುದಲ್ಲದೆ ಪರಿಸರ ಮಾಲಿನ್ಯ ವನ್ನು ಕಡಿಮೆ ಮಾಡಬಹುದಾಗಿದೆ. ಈ ಯಂತ್ರಗಳನ್ನು ವಾಣಿಜ್ಯ ಸಂಸ್ಥೆಗಳಿಗೆ ಕಡ್ಡಾಯ ಮಾಡಲಾಗುವುದು. ಮಾಲ್ , ಆಸ್ಪತ್ರೆ, ಮಾರುಕಟ್ಟೆ, ಹೋಟೆಲ್ ಗಳಲ್ಲಿ ತ್ಯಾಜ್ಯ ನಿರ್ವಹಣೆಯ ಯಂತ್ರಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗುವುದು. ಒಳಚರಂಡಿ ವ್ಯವಸ್ಥೆ , ರಾಜಕಾಲುವೆಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುತ್ತಿದೆ. 26000 ಕೋಟಿ ರೂ.ಗಳನ್ನು ಮೆಟ್ರೋ ಮೂರನೇ ಹಂತದ ವಿಸ್ತರಣೆ ಗೆ ಒದಾಗಿಸಲಾಗಿದೆ. ಉಪನಗರ ರೈಲು ಯೋಜನೆಯ ಕಾಮಗಾರಿ ಪ್ರಾರಂಭ ವಾಗಿದೆ. ಪಿ.ಆರ್.ಆರ್ , ಮೆಟ್ರೋ, ರಸ್ತೆ ಅಗಲೀಕರಣದಿಂದಾಗಿ ಸಂಚಾರ ವ್ಯವಸ್ಥೆ ಸುಧಾರಿಸಲಿದೆ. 4 ಸ್ಥಳಗಳಲ್ಲಿ ಉಪನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಅತ್ಯುತ್ತಮ ಅಂತರರಾಷ್ಟ್ರೀಯ ನಗರವಾಗಿ ಬೆಂಗಳೂರಿನ ಅಭಿವೃದ್ಧಿ
ಬೆಳಗಾವಿ, ಕಲಬುರಗಿ, ಬಳ್ಳಾರಿ, ದಾವಣಗೆರೆ ನಗರಗಳು ಅತ್ಯುತ್ತಮ ರಸ್ತೆ ಹಾಗೂ ಸೌಲಭ್ಯಗಳನ್ನು ಹೊಂದಿವೆ. ಬಿಜಾಪುರ, ರಾಯಚೂರು, ಶಿವಮೊಗ್ಗ, ಹಾಸನ ಧಾರವಾಡ ಗಳಲ್ಲಿ ವಿಮಾನ ನಿಲ್ದಾಣ ಗಳು ಶೀಘ್ರವಾಗಿ ಬರಲಿದೆ. ಈ ನಗರಗಳು ಇದನ್ನು ಸಾಧಿಸಲು ಸಾಧ್ಯವಾಗಿದ್ದರೆ, ಬೆಂಗಳೂರಿನಲ್ಲಿಯೂ ಸಹ ಸಾಧ್ಯವಾಗಿಸಬಹುದು. ಇದಲ್ಲದೆ ಬೆಂಗಳೂರು ಅತ್ಯುತ್ತಮ ಅಂತರರಾಷ್ಟ್ರೀಯ ನಗರವಾಗಿ ಬೆಳೆಯುವ ಎಲ್ಲಾ ಲಕ್ಷಣಗಳಿವೆ. ವಿಶ್ವದಲ್ಲಿಯೇ ಅತಿ ಹೆಚ್ಚು ಅಂದರೆ 400 ಆರ್.ಅಂಡ್ ಡಿ ಕೇಂದ್ರಗಳು ಇಲ್ಲಿವೆ. ಜಾಗತಿಕ ಹೂಡಿಕೆದಾರರ ಸಮಾವೇಶಸಲ್ಲಿ 8 ಲಕ್ಷ ಕೋಟಿ ಹೂಡಿಕೆಯಾಗುತ್ತಿದೆ. ಮೂರೂವರೆ ಲಕ್ಷ ಕೋಟಿ ರೂ. ಗಳ ಯೋಜನೆಗಳಿಗೆ ಉನ್ನತ ಮಟ್ಟದ ಸಮಿತಿಯಲ್ಲಿ ಮಂಜೂರಾತಿ ನೀಡಲಾಗಿದೆ. ಬೆಂಗಳೂರು ಟೆಕ್ ಸಮ್ಮಿಟ್ ಅತ್ಯಂತ ಯಶಸ್ವಿಯಾಗಿ ನೆರವೇರಿದೆ. ಇವಿ ಆರ್.ಅಂಡ್ ಡಿ ಕರ್ನಾಟಕದಲ್ಲಿವೆ ಆದರೆ ಉತ್ಪಾದನೆ ಇತರ ರಾಜ್ಯಗಳಲ್ಲಿವೆ. ನಮ ಶಕ್ತಿ ಗಳನ್ನು ನಾವು ಬಳಸಿಕೊಳ್ಳಬೇಕು. ಮುಂದಿನ ತಿಂಗಳು ಏರೋ ಶೋ ನಡೆಯಲಿದೆ. ಬೆಂಗಳೂರು ಐ.ಟಿ ಬಿಟಿ ಸ್ಟಾರ್ಟ್ ಅಪ್ ಹಾಗೂ ಏರೋಸ್ಪೇಸ್ ನಗರ. ಏರೋಸ್ಪೇಸ್ ಬಿಡಿ ಭಾಗಗಳನ್ನು ಇಲ್ಲಿ ತಯಾರಿಸಲಾಗುತ್ತಿದೆ. ವಿಮಾನಗಳನ್ನು ಉತ್ಪಾದನೆ ಮಾಡುವ ಮಟ್ಟಕ್ಕೆ ಬೆಂಗಳೂರು ಬೆಳೆಯಬೇಕಿದೆ ಎಂದರು.

Also read: ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೆ ಸಿದ್ಧತೆ: ಲೋಗೋ, ಮಸ್ಕಟ್ ಬಿಡುಗಡೆ

ಕಾಲಮಿತಿಯಲ್ಲಿ ಮೂಲಭೂತ ಸಮಸ್ಯೆಗಳ ಇತ್ಯರ್ಥ
ಮೂಲ ಬೆಂಗಳೂರನ್ನು ಉತ್ತಮ ವಾಗಿ ಯೋಜಿಸಲಾಗಿತ್ತು. ಜನಸಂಖ್ಯೆ ಹೆಚ್ಚಿದ್ದರೂ, ಉತ್ತಮ ವಸತಿ, ರಸ್ತೆ, ಕೆರೆ ಹಾಗೂ ತ್ಯಾಜ್ಯ ನಿರ್ವಹಣೆ ಉತ್ತಮವಾಗಿತ್ತು. ಆದರೆ ಕೆಲವು ನೀತಿಗಳ ತಪ್ಪಾಗಿದೆ. ಬೆಂಗಳೂರಿನಡಿ 8 ಮುನಿಸಿಪಾಲಿಟಿಗಳನ್ನು ಅಭಿವೃದ್ಧಿಪಡಿಸದೇ ಸೇರ್ಪಡೆಗೊಳಿಸಲಾಯಿತು. 110 ಗ್ರಾಮಗಳನ್ನು ಬೆಂಗಳೂರಿಗೆ ಸೇರಿಸಲಾಗಿದೆ. ಈಗ ಕಾರ್ಪೊರೇಷನ್, ಮುನಿಸಿಪಾಲಿಟಿ ಹಾಗೂ ಗ್ರಾಮ ಪಂಚಾಯಿತಿಗಳು ಇವೆ. ಗ್ರಾಮ ಪಂಚಾಯತಿಗಳನ್ನು ಕಾರ್ಪೊರೇಷನ್ ಮಟ್ಟಕ್ಕೆ ಅಭಿವೃದ್ಧಿ ಪಡಿಸಬೇಕಿದೆ. ಇದೊಂದು ದೊಡ್ಡ ಸವಾಲು. ಇಂದಿನ ಸಮಸ್ಯೆ ಹಿಂದಿನ ನೀತಿಗಳ ತಪ್ಪಿನಿಂದಾಗಿದೆ. ನಾವೂ ಅದೇ ತಪ್ಪು ಮಾಡಿದರೆ ಮುಂದಿನ ವರ್ಷಗಳಲ್ಲಿ ಸಮಸ್ಯೆಯಾಗುತ್ತದೆ. ಯೋಜನಾಬದ್ದ ಅಭಿವೃದ್ಧಿ, ಯೋಜಿತ ಸಂಚಾರ ನಿರ್ವಹಣೆ ಯೋಜನಾಬದ್ದ ನಿರ್ವಹಣೆ ಮಾಡಿದರೆ ಬೆಂಗಳೂರಿನ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಬಹುದು. ತ್ಯಾಜ್ಯ ನಿರ್ವಹಣೆಯು ಪ್ರವಾಹ ನಿರ್ವಹಣೆಯನ್ನೂ ಒಳಗೊಂಡಿದೆ. ಮೂಲಭೂತ ಸಮಸ್ಯೆಗಳನ್ನು ಮನಗಂಡು ಪ್ರತಿ ಸಮಸ್ಯೆ ಯನ್ನು ಸಮಗ್ರವಾಗಿ, ಕಾಲಮಿತಿಯಲ್ಲಿ , ನಿರ್ದಿಷ್ಟವಾಗಿ ಬಗೆಹರಿಸಲು ತೀರ್ಮಾನಿಸಲಾಗಿದೆ ಎಂದರು.
ಬ್ರಾಂಡ್ ಬೆಂಗಳೂರು ಅಭಿವೃದ್ಧಿ
ಬೆಂಗಳೂರು ಅವಕಾಶಗಳ ನಗರಿ. ಬೆಂಗಳೂರು 2 ಲಕ್ಷ ಉದ್ಯೋಗಗಳನ್ನು ಪ್ರತಿ ವರ್ಷ ಸೃಜಿಸುತ್ತಿದೆ. ಮೂಲ ಸಮಸ್ಯೆಗಳನ್ನು ಸರಿಪಡಿಸುತ್ತಲೇ, ಸಕಾರಾತ್ಮಕ ಅಂಶಗಳನ್ನು ಬಳಸಿಕೊಂಡು ಬ್ರಾಂಡ್ ಬೆಂಗಳೂರು ಅಭಿವೃದ್ಧಿ ಪಡಿಸಬೇಕು. ಫಾಸ್ಟ್ ಫಾರ್ವರ್ಡ್ ಆಗಿ ಕೆಲಸ ಮಾಡಬೇಕು. ಈ ಕಾರ್ಯದಲ್ಲಿ ಸರ್ಕಾರ, ಖಾಸಗಿ ವಲಯ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿ ನಗರದಲ್ಲಿ ನಾಗರಿಕ ಸಂಸ್ಥೆಗಳಿವೆ. ಲಭ್ಯವಿರುವ ಅಗಾಧ ಪ್ರತಿಭೆಯನ್ನು ಬಳಸಿಕೊಂಡು ಹೊಂದಿರುವ ಬೆಂಗಳೂರನ್ನು ಉತ್ತಮಗೊಳಿಸುವ ಪ್ರಯತ್ನಗಳಾಗಬೇಕು. ಕಠಿಣ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಆಡಳಿತ, ಮತ್ತು ಸಾರ್ವಜನಿಕರ ಮನೋಭಾವ ಬದಲಾಗಬೇಕು. ಸಾವಲುಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಳ್ಳಬೇಕು ಎಂದರು.

ಡೆಕ್ಕನ್ ಹೆರಾಲ್ಡ್ ಕೊಡುಗೆ
ರಾಜ್ಯದ ಬೆಳವಣಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಸಾರ್ವಜನಿಕರು ಹಾಗೂ ನೀತಿ ನಿರೂಪಕರ ಮೇಲೆ ನಿರಂತರವಾಗಿ ಪ್ರಭಾವವನ್ನು ಬೀರಿದೆ.
ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಭಿವೃದ್ಧಿ
ಬೆಂಗಳೂರು ಪ್ರಕೃತಿ, ನೈಸರ್ಗಿಕ ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲಗಳಿಂದ ಕೂಡಿದೆ. ಮೈಸೂರು ಒಡೆಯರು ಹಾಗೂ ಬ್ರಿಟಿಷರ ಆಳ್ವಿಕೆಯಲ್ಲಿ ಯಾವುದೇ ಅರಸರ ರಾಜಧಾನಿಯಾಗಿರದಿದ್ದರೂ ಶಿಕ್ಷಣ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಉದ್ಯಮಗಳನ್ನು ಬೆಂಗಳೂರು ಆಕರ್ಷಿಸಿದೆ. ವಿಶ್ವದೆಲ್ಲೆಡೆ ನಿರಂತರ ಬೆಳವಣಿಗೆಯನ್ನು ಅನೇಕ ನಗರ ಗಳು ಕಂಡರೂ ಮುಂದಿನ ಹಂತಕ್ಕೆ ಅಭಿವೃದ್ಧಿ ಕಂಡಿಲ್ಲ. ಆದರೆ ಬೆಂಗಳೂರಿನಲ್ಲಿ ಹಾಗಿಲ್ಲ. ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ಬೆಳವಣಿಗೆ, ಅಭಿವೃದ್ಧಿ ಉನ್ನತ ಮಟ್ಟದಲ್ಲಿ ಆಗಿದೆ. ಮೈಸೂರು ಒಡೆಯರ ಕಾಲದಲ್ಲಿ ಪ್ರಾರಂಭವಾದ ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ, ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರದ ನಂತರದಲ್ಲಿ ಕೈಗಾರೀಕರಣ ಇನ್ನಷ್ಟು ಅಭಿವೃದ್ಧಿ ಕಂಡಿತು. ಆರ್.ಅಂಡ್ ಡಿ , ಉತ್ಪಾದನಾ ವಲಯದಲ್ಲಿ ಕೌಶಲ್ಯ ವುಳ್ಳ ಮಾನವ ಸಂಪನ್ಮೂಲವನ್ನು ನೀಡಿದೆ. ಐ.ಟಿ ಬಿಟಿ ವಲಯವು ಬೆಂಗಳೂರಿನಲ್ಲಿ ಹೊಸ ಪ್ರಪಂಚವನ್ನೇ ಸೃಷ್ಟಿಸಿತು. ಮೈಸೂರು ಒಡೆಯರು, ಬ್ರಿಟಿಷರು ಹಾಗೂ ಐ.ಟಿ ಬಿ.ಟಿ ವಲಯವನ್ನು ಬ್ರಾಂಡ್ ಬೆಂಗಳೂರು ಕಟ್ಟಿದ್ದಕ್ಕಾಗಿ ಅಭಿನಂದಿಸಬೇಕು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೆ ಸಿದ್ಧತೆ: ಲೋಗೋ, ಮಸ್ಕಟ್ ಬಿಡುಗಡೆ

Next Post

ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

kalpa News

kalpa News

Next Post
ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL