ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿರುವ ಎಲ್ಲ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸುವುದು ಅವಶ್ಯಕವಾಗಿರುತ್ತದೆ ಎಂದು ಉಲ್ಲೇಖಿಸಲಾಗಿದೆ.

Also read: ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು
ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರ ಸ್ಥಾಪಿಸಿ, ಸೂಕ್ತ ಸಹಕಾರಕ್ಕೆ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.











Discussion about this post