No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅನ್ನಕ್ಕಾಗಿ ಯಾರೊಬ್ಬರ ಮುಂದೂ ಕೈಚಾಚಬಾರದು: ಸಿಎಂ ಸಿದ್ಧರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2023
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯದ ಯಾರೊಬ್ಬರೂ ಮತ್ತೊಬ್ಬರ ಮನೆಯ ಮುಂದೆ ಅನ್ನಕ್ಕಾಗಿ ಹೋಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.

ಈ ಕುರಿತಂತೆ ಸದನದಲ್ಲಿ ಮಾತನಾಡಿದ ಅವರು, ಜುಲೈ 1 ರಿಂದ ಪ್ರಾರಂಭ ಮಾಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಯಿತು. ಒಂದು ತಿಂಗಳಿಗೆ 2,29,000 ಮೆಟ್ರಿಕ್ ಟನ್ ಅಕ್ಕಿ ಬೇಕು. ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯ ಜೊತೆ ರಾಜ್ಯ 5 ಕೆಜಿ ಅಕ್ಕಿ ನೀಡುತ್ತೇವೆ ಎಂದೆವು. 2017ರ ಎಪ್ರಿಲ್ 1ರಿಂದ ನಾವು 7 ಕೆಜಿ ಉಚಿತ ಅಕ್ಕಿ ನೀಡುತ್ತಿದ್ದೇವು. ಆದರೆ ನಂತರ ಬಿಜೆಪಿಯವರು ಅದನ್ನು 5 ಕೆಜಿಗೆ ಇಳಿಸಿದರು ಎಂದು ಟೀಕಿಸಿದರು.
ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ನೀಡುವ ಕಾರ್ಯಕ್ರಮವನ್ನು ನಾನು 2013ರಲ್ಲಿ ಪ್ರಾರಂಭಿಸಿದೆ. ಆದರೆ ನೆಹರೂ ಅವರ ಕಾಲದಲ್ಲಿ ಪಡಿತರ ವ್ಯವಸ್ಥೆ ಜಾರಿಯಾಯಿತು. ಒಂದು ಕೆಜಿಗೆ 1 ರೂ.ನಲ್ಲಿ ನೀಡುವ ತೀರ್ಮಾನವನ್ನು ಕೈಗೊಂಡೆವು ಎಂದರು.

ಆಹಾರ ಭದ್ರತೆ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು. ಹಿಂದಿನ ಕಾಲದಲ್ಲಿ, ಹಬ್ಬ ಹರಿದಿನಗಳಲ್ಲಿ ಅಥವಾ ಆರೋಗ್ಯ ಹದಗೆಟ್ಟಾಗ ಮಾತ್ರ ಅನ್ನ ಮಾಡುತ್ತಿದ್ದರು. ಇದನ್ನು ಕಣ್ಣಾರೆ ಕಂಡವನು ನಾನು. ಆದ್ದರಿಂದ ಮುಖ್ಯಮಂತ್ರಿಯಾದ ತಕ್ಷಣ, ಅನ್ನಕ್ಕಾಗಿ ಒಬ್ಬರು ಮತ್ತೊಬ್ಬರ ಮನೆಗೆ ಹೋಗಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದರು.

ಎಫ್’ಸಿಐನಲ್ಲಿ 400 ಲಕ್ಷ ಮೆಟ್ರಿಕ್ ಟನ್’ಗೂ ಹೆಚ್ಚು ದಾಸ್ತಾನು ಇದೆ. ಎಫ್ ಸಿ ಐ ಡೆಪ್ಯೂಟಿ ಮ್ಯಾನೇಜರ್ ಜೊತೆಗೆ ಮಾತನಾಡಿದ್ದಾಗ, 7 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಇರುವುದಾಗಿ ಒಪ್ಪಿಕೊಂಡಿದ್ದರು. ನಂತರ ಆಗಲ್ಲ ಎಂದರು.
ಬಿಜೆಪಿಯವರು ಬಡವರ ಪರ ಇರುವವರೇ ? ಅಕ್ಕಿ, ಗೋಧಿ, ಹಾಲು ಇತ್ಯಾದಿಗಳ ಮೇಲೆ ಜಿಎಸ್’ಟಿ ಹಾಕಿದವರು ಮೋದಿ. 34 ರೂ. ಕೆಜಿ ಅಕ್ಕಿಗೆ ನೀಡುತ್ತೇವೆ ಎಂದರೂ, ದಾಸ್ತಾನು ಇದ್ದರೂ ಕೇಂದ್ರ ಅಕ್ಕಿ ನೀಡಲು ಒಪ್ಪಲಿಲ್ಲ. ಈಶಾನ್ಯ ರಾಜ್ಯಗಳಿಗೆ ಅಕ್ಕಿ ನೀಡುತ್ತಿದ್ದಾರೆ. ರಾಜ್ಯಕ್ಕೆ ಅಕ್ಕಿ ಇಲ್ಲವೆಂದ ಕೇಂದ್ರ ಸರ್ಕಾರ, ಎಥೆನಾಲ್ ತಯಾರಿಕೆಗೆ 29.5 ಮೆಟ್ರಿಕ್ ಟನ್ ಅಕ್ಕಿ ನೀಡಿದ್ದಾರೆ. ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಎಫ್ ಸಿ ಐ , ಇ – ಹರಾಜಿನಲ್ಲಿ ಅಕ್ಕಿ ತೆಗೆದುಕೊಳ್ಳಲು ಯಾರೂ ಮುಂದೆ ಬಂದಿಲ್ಲ ಎಂದಿದ್ದಾರೆ. ಒಂದು ಕ್ವಿಂಟಾಲ್’ಗೆ 3400 ರೂ. ನೀಡುತ್ತೇವೆಂದರೂ, ಕೇಂದ್ರ ಒಪ್ಪಲಿಲ್ಲ. ಆದ್ದರಿಂದ 5 ಕೆಜಿ ಬದಲು ಒಟ್ಟು 170 ರೂ. ಪ್ರತಿ ಫಲಾನುಭಾವಿಯ ಖಾತೆಗೆ ನೀಡಲಾಗಿದೆ ಎಂದರು.

ಯುವನಿಧಿ
2022-23 ರಲ್ಲಿ ಪಾಸಾಗಿರುವವರು 6 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಅಂತಹವರಿಗೆ ಮುಂದಿನ 24 ತಿಂಗಳು ಯುವನಿಧಿ ನೀಡಲಾಗುವುದು. ಈ ಮಧ್ಯೆ ಅವರಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಯುವಕರಿಗೆ ತಮಗೆ ಕೆಲಸ ಸಿಕ್ಕಿದ ತಕ್ಷಣ ಯುವನಿಧಿ ನಿಲ್ಲಿಸಲಾಗುತ್ತದೆ . ಈ ರೀತಿ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸರ್ಕಾರ ನಿವಾರಿಸಲಿದೆ ಎಂದರು.
ಜನರು ಆತಂಕದಿಂದ ಬದುಕಬೇಕಿಲ್ಲ
ವಿದ್ಯಾಸಿರಿ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ಈಗ ಮತ್ತೆ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಹೆಚ್ಚು ಒಣಭೂಮಿ ಇದ್ದಿದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆ ಈಗ ಮತ್ತೆ ಪ್ರಾರಂಭಿಸಲಾಗಿದೆ. ಜಿಎಸ್’ಟಿ ತೆರಿಗೆ ಸಂಗ್ರಹ , ಅಬಕಾರಿ ಸುಂಕ ಹೆಚ್ಚಳ , ಮೋಟಾರ್ ವೆಹಿಕಲ್ ತೆರಿಗೆ , ಮುದ್ರಾಂಕ ಶುಲ್ಕ ಗಳನ್ನು ಹೆಚ್ಚಿಸಿ 13500 ಕೋಟಿ ರೂ.ಗೂ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ. 8000 ಕೋಟಿ ಸಾಲ ಪಡೆಯುತ್ತಿದ್ದೇವೆ ಎಂದರು.

Also read: ಶಕ್ತಿ ಯೋಜನೆಯಿಂದ ಕೆಎಸ್’ಆರ್’ಟಿಸಿ ಸುಧಾರಣೆ: ಸಿದ್ದರಾಮಯ್ಯ

ನಾವು ನುಡಿದಂತೆ ನಡೆಯುತ್ತಿದ್ದು, ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರು 600 ಭರವಸೆಗಳಲ್ಲಿ ಶೇ. 10 ರಷ್ಟೂ ಈಡೇರಿಸಿಲ್ಲ. ರೈತ ಸಾಲ ಮನ್ನಾ ಎಂದರು. ಆದರೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುದಾನ ನಿಗದಿಪಡಿಸಲಾಗಿದೆ. ಅನುಷ್ಠಾನ ಮಾಡುತ್ತಿದ್ದೇವೆ. 35,410 ಕೋಟಿ ಈ ವರ್ಷ ಉಳಿದ ಅವಧಿಗೆ ಬೇಕಾಗುತ್ತಿದ್ದು , ಅನುದಾನ ನಿಗದಿಪಡಿಸಲಾಗಿದೆ. ಎಲ್ಲ ಐದು ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಜಾರಿ ಮಾಡಿಯೇ ಮಾಡುತ್ತೇವೆ. ಜನರು ಯಾರೂ ಆತಂಕದಿಂದ ಬದುಕುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಊಟ , ಕಾನೂನು ರಕ್ಷಣೆ, ಕೈಗೆ ಹಣ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.
ಶಕ್ತಿ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮೆಚ್ಚುಗೆ
ಧರ್ಮಸ್ಥಳದ ಧರ್ಮಾಧಿಕಾರಿಯವರು ಪತ್ರ ಮುಖೇನ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್ ನವರು. ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share196Tweet123Send
Previous Post

ಶಕ್ತಿ ಯೋಜನೆಯಿಂದ ಕೆಎಸ್’ಆರ್’ಟಿಸಿ ಸುಧಾರಣೆ: ಸಿದ್ದರಾಮಯ್ಯ

Next Post

ಐಫೋನ್ ತಯಾರಿಸುವ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಶೀಘ್ರ ಹಸ್ತಾಂತರ: ಸಚಿವ ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್

ಐಫೋನ್ ತಯಾರಿಸುವ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಶೀಘ್ರ ಹಸ್ತಾಂತರ: ಸಚಿವ ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL