ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಭರತನಾಟ್ಯ ಗುರು ಡಾ.ಎಂ. ಆರ್. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಅವರ ರಂಗಪ್ರವೇಶ ಕಾರ್ಯಕ್ರಮ ಜಯನಗರದ ಜೆಎಸ್ಎಸ್ ಸಭಾಂಗಣದಲ್ಲಿ ನಡೆಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್ ಹಿಸ್ಟೋರಿಯನ್ ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂದರಾ ಸಂಪತ್ ಕುಮಾರ್, ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಜಾಜಿ ರಾಜು, ಸುನಿತಾ ಮತ್ತು ಮೋಹನ್ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post