No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳ ಸಾಮರ್ಥ್ಯ ಹೆಚ್ಚಿಸಿ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2023
in ಬೆಂಗಳೂರು ನಗರ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವಿ ವಿಜ್ಞಾನ ಮೇಳ – 2023ರ ಉದ್ಘಾಟಿಸಿ ಮಾತನಾಡಿದರು.
ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ರೂ. ಗಳನ್ನು ಖರ್ಚು ಮಾಡುತ್ತೇವೆ. ನಾವು ಕಟ್ಟಡ, ಕಾಂಪೌಂಡ್ ಗೋಡೆಗಳಿಗೆ ಬಹಳ ಖರ್ಚು ಮಾಡುತ್ತಿದ್ದೇವೆ. ಈಗಾಗಲೇ ಸಚಿವ ಸಂಪುಟ, ಸಭೆಗಳಲ್ಲಿ ಹೇಳಿರುವಂತೆ ಮಕ್ಕಳಿಗೆ ಮಾಡಬೇಕಿರುವ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಮಾಡಲೇಬೇಕಾದ ಬದಲಾವಣೆಗಳನ್ನು ತನ್ನಿ ನಂತರ ಉಳಿದ ವಿಷಯಗಳಿಗೆ ಗಮನ ನೀಡಿ
ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಯೊಂದಕ್ಕೆ 30 ಕೋಟಿ ರೂ.ಗಳ ವೆಚ್ಚ
ಒಂದು ಶಾಲೆಗೆ 30 ಕೋಟಿ ರೂ.ಗಳ ವೆಚ್ಚವಾಗುತ್ತದೆ. ಆದರೇ 30 ಕೋಟಿ ರೂ.ಗಳನ್ನು ಖರ್ಚು ಮಾಡಿದರೂ ಮಕ್ಕಳಿಗೆ ಯಾವ ವ್ಯವಸ್ಥೆ ಯಾಗಬೇಕೋ ಅದು ಆಗುತ್ತಿಲ್ಲ. ಇದು ಹಿಂದಿನ ಸರ್ಕಾರಗಳಿಂದ ಬಂದಿರುವ ಬಳುವಳಿ. ಗುತ್ತಿಗೆದಾರ ಆಧರಿತ ಗುತ್ತಿಗೆ ನೀಡುವುದರಿಂದ ಪರಿಸ್ಥಿತಿ ಹೀಗಾಗಿದೆ. ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗ ವಿಶೇಷ ಅನುದಾನವನ್ನು ಮಕ್ಕಳಿಗೆ ಡೆಸ್ಕ್, ಮಲಗುವ ಸ್ಥಳ, ಪುಸ್ತಕ ಸೇರಿದಂತೆ ಉಳಿದ ವಿಚಾರಗಳಿಗೆ ಹೆಚ್ಚಿನ ಗಮನ ನೀಡಲು ಕಳೆದ ಮೂರು ವರ್ಷಗಳಿಂದ ಪ್ರಾರಂಭಿಸಿದ್ದೇವೆ. ಸಾಕಷ್ಟು ಸುಧಾರಣೆಯೂ ಆಗಿದೆ ಎಂದರು.
ಇನ್ನಷ್ಟು ಬಲಪಡಿಸಬೇಕು
ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಜ್ಞಾನ ಮೇಳ ಆಯೋಜಿಸಿರುವುದು ಸಂತೋಷದ ಸಂಗತಿ. ಈ ವಸತಿ ಶಾಲೆಗಳು ಪ್ರಾರಂಭವಾಗಿರುವುದೇ ಎಸ್.ಸಿ/ ಎಸ್.ಟಿ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ, ಎಲ್ಲಾ ವ್ಯವಸ್ಥೆಗಳಿರುವ ವಸತಿ ಶಾಲೆಗಳನ್ನು ನೀಡಬೇಕೆನ್ನುವ ಉದ್ದೇಶದಿಂದ. ಸಾವಿರಕ್ಕೂ ಹೆಚ್ಚು ಶಾಲೆಗಳು ಇಲ್ಲಿ ಭಾಗವಹಿಸಿವೆ. ಈ ಶಾಲೆಗಳ ಮೌಲ್ಯ ಮಾಪನ ಮಾಡಿದಾಗ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಗುಣಮಟ್ಟವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬೇರೆಯವರಿಗಿಂತ ಉತ್ತಮ ಅಂಕಗಳನ್ನು ಪಡೆಯುತ್ತಿದ್ದಾರೆ. ಮಕ್ಕಳಲ್ಲಿ ಕೀಳರಿಮೆ ಹೋಗಿ ಆತ್ಮವಿಶ್ವಾಸ ಜಾಗೃತವಾಗಿವೆ. ಹೀಗಾಗಿ ಈ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಬೇಕಾಗಿದೆ. ಇನ್ನಷ್ಟು ಗುಣಾತ್ಮಕ ಶಿಕ್ಷಣ, ವ್ಯಕ್ತಿ ವಿಕಸನವಾಗಬೇಕಿದೆ ಮತ್ತು ವಿಪುಲವಾದ ಅವಕಾಶಗಳನ್ನು ಈ ಮಕ್ಕಳಿಗೆ ಮಾಡಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ನಮ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಮಕ್ಕಳ ಭವಿಷ್ಯ ನಿರ್ಮಿಸಿ
ಒಂದು ಸಾವಿರ ಶಾಲೆಗಳಿರುವ ದೊಡ್ಡ ವ್ಯವಸ್ಥೆಯಾಗಿದ್ದು, ತಾಂದೆತಾಯಿಗಳು ಇಲ್ಲಿಗೆ ಕಳುಹಿಸಿದ್ದಾರೆ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಅದು ನಮ್ಮ ಕರ್ತವ್ಯ. ಅವರಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡಿ ಅತ್ಯಂತ ಯಶಸ್ವಿಯಾಗಿ ಮಾಡಿ ಅವರಿಗೆ ಒಳ್ಳೆಯ ಭವಿಷ್ಯ ನಿರ್ಮಿಸುವ ಕೆಲಸವಾದಾಗ ಸಮಾಜದಲ್ಲಿ ಪರಿವರ್ತನೆಯಾಗುತ್ತದೆ. ಇದು ನಿಜಕ್ಕೂ ಆಗಬೇಕಿರುವ ಕೆಲಸ ಎಂದರು.
ಕೊರತೆಗಳ ಪಟ್ಟಿ ನೀಡಿ
ಯಾವ ಶಾಲೆಗಳಲ್ಲಿ ಏನು ಕೊರತೆ, ಎಷ್ಟು ಅನುದಾನ ಇದೆ ಎಂದು ಪಟ್ಟಿ ನೀಡಿದರೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು. ಎಲ್ಲಾ ಅಧಿಕಾರಿಗಳು ಶಾಲೆಗಳಿಗೆ ಭೇಟಿ ಮಾಡಲು ಸೂಚಿಸಿದರಲ್ಲದೇ ಹತ್ತು ವರ್ಷಗಳಾಗಿರುವ ಶಾಲೆಗಳಲ್ಲಿ, ಎಲ್ಲಾ ವ್ಯವಸ್ಥೆಗಳಿರುವ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಕಡ್ಡಾಯವಾಗಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದರು.

Also read: ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

ಮಕ್ಕಳ ಸಾಮರ್ಥ್ಯ ಬೆಳೆಸಿ
ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಮಕ್ಕಳ ನಡುವೆಯೇ ನಡೆಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಇಲ್ಲಿ ಮಕ್ಕಳಿಗೆ ಸಮಾನ ಅವಕಾಶ ನೀಡಲಾಗಿದೆ. ಯಾವ ಶಾಲೆಗಳಲ್ಲಿ ಏನು ಕೊರತೆಯಿದೆ, ಏನ್ನನ್ನು ಸರಿಪಡಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಹೇಗೆ ತಯಾರು ಮಾಡಬೇಕೆನ್ನುವ ಸಲುವಾಗಿ ಸ್ಪರ್ಧೆ, ಪರೀಕ್ಷೆಗಳನ್ನು ನೀಡಿ, ಸಾಮರ್ಥ್ಯ ಬೆಳೆಸಿ ಎಂದರು.
ಮಕ್ಕಳೆಲ್ಲಾ ಬಹಳ ಕಷ್ಟ ಪಟ್ಟು ಈ ಶಾಲೆಗೆ ಬಂದಿದ್ದಾರೆ. ಅವರು ಶೇ 50, 60, 70 ರಷ್ಟು ಅಂಕಪಡೆದಿರುವ ಮಕ್ಕಳು. ಹೊರಗೆ ಹೋಗುವಾಗ ಶೇ 90 ರಷ್ಟು ಅಂಕ ಪಡೆದು ಹೊರಗೆ ಹೋಗಬೇಕು. ಇದು ನಮ್ಮ ಗುರಿ. ಸಚಿವ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸಗಳಾಗಿವೆ. ಮೂರು ಲಕ್ಷ ಶಾಲಾ ಹೆಣ್ಣು ಮಕ್ಕಳಿಗೆ ಕರಾಟೆ ಕಲಿಸುತ್ತಿರುವುದು ದೊಡ್ಡ ಸಾಧನೆ. ಸಮಾಜಸಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಬಹಳ ದೊಡ್ಡ ಕಾರ್ಯಕ್ರಮವನ್ನು ಸಚಿವರು ಕೈಗೊಂಡಿದ್ದಾರೆ. ಎಸ್.ಸಿ/ ಎಸ್.ಟಿ ಜನಾಂಗಕ್ಕೆ ಸೌಲಭ್ಯ ಗಳನ್ನು ನೀಡಲು ಒತ್ತಾಸೆಯಾಗಿ ಕೆಲಸ ಮಾಡಿದ್ದಾರೆ. ಅವರು ಬಂದ ನಂತರ ಪ್ರತಿ ಮನೆಗೆ 1.75 ಲಕ್ಷ ರೂ.ಗಳಿಗೆ ಹೆಚ್ಚಳ, 75 ಯೂನಿಟ್ ಉಚಿತ ವಿದ್ಯುತ್, ಜಮೀನು ಖರೀದಿಗೆ 20.ಲಕ್ಷ ರೂ.ಗಳ ಯೋಜನೆ, ಮೀಸಲಾತಿಯನ್ನು ಎಸ್.ಸಿಗೆ ಶೇ 15 ರಿಂದ.17ಕ್ಕೆ ಹಾಗೂ ಎಸ್.ಟಿ ಗೆ ಶೇ 3 ರಿಂದ 7 ಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ವಿಷಯಗಳಲ್ಲಿ ದೀನದಲಿತರಿಗೆ ಆತ್ಮಸ್ಥೈರ್ಯ, ಸ್ವಾಭಿಮಾನ, ಕೀಳರಿಮೆಯಿಂದ ದೂರಾಗಿ, ಅವರೂ ಮುಖ್ಯ ವಾಹಿನಿಯಲ್ಲಿ ಸೇರಲು ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ 100 ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಾರ್ಯಕ್ರಮ ರೂಪಿಸಿದೆ. ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ ಎಂಬ ಮೂರನ್ನೂ ದೊಡ್ಡ ಪ್ರಮಾಣದಲ್ಲಿ ಇಲಾಖೆ ಮಾಡುತ್ತಿದೆ. ಈ ಪ್ರಯಾಣವನ್ನು ಬದುಕಿನಲ್ಲಿ. ಮುಂದುವರೆಸಿ ಸಾಧಕರಾಗಬೇಕು. ತಮ್ಮ ಕುಟುಂಬ, ಊರು, ಸಮುದಾಯಕ್ಕೆ ಹಿಂದಿರುಗಿ ಸಹಾಯ ಮಾಡಬೇಕು. ಆಗ ಸಮಾಜ ಪರಿವರ್ತನೆಯಾಗುತ್ತದೆ. ಇದರಿಂದ ನಾಡು ಮತ್ತು ದೇಶ ಶಕ್ತಿಶಾಲಿಯಾಗಿ ಬೆಳೆಯುತ್ತದೆ. ಇದೇ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಬ್ ಕೆ ಸಾಥ್, ಸಬ್, ಕಾ ವಿಕಾಸ್, ಸಬ್ ಕ ಪ್ರಯಾಸ್ ಎಂಬ ಧ್ಯೇಯ ಎಂದರು.
ಉತ್ತಮ ಪ್ರಯೋಗ
ವಿಜ್ಞಾನ ಮೇಳ ಆಯೋಜಿಸಿದ್ದು, ಮಕ್ಕಳಲ್ಲಿರುವ ವೈಜ್ಞಾನಿಕ ಮನೋಭಾವವನ್ನು, ಪ್ರತಿಭೆ ಪ್ರದರ್ಶಿಸಲು ಅನುಕೂಲವಾಗಿದೆ. ವಿಜ್ಞಾನ ಮತ್ತು ಅವಕಾಶವಂಚಿತ ವರ್ಗ ಬಹಳ ದೂರವಾಗಿತ್ತು. ವಿಜ್ಞಾನ ಕಲಿಯುವುದೇ ಕಷ್ಟ ಎನ್ನುವ ಕಾಲವಿತ್ತು. ಕೇವಲ ಅಕ್ಷರ ಜ್ಞಾನ ಪಡೆದರೆ ಸಾಕೆನ್ನುವ ಕಾಲವಿತ್ತು. ಈಗ ಬದಲಾವಣೆ ಆಗಿದೆ. ವಿಜ್ಞಾನವನ್ನು ಅವಕಾಶ ವಂಚಿತ ವರ್ಗದವರಿಗೆ ಸೇರಿಸಿ, ಮುನ್ನಡೆಸುತ್ತಿರುವುದು ಬಹಳ ದೊಡ್ಡ ಬದಲಾವಣೆ ತರಲಿದೆ. ಶ್ರೇಷ್ಠ ವಿಚಾರ ಮತ್ತು ಕಾರ್ಯಕ್ರಮ ಆಯೋಜಿಸಿದ ಕ್ರೈಸ್ ಸಂಸ್ಥೆಗೆ ಅಭಿನಂದಿಸಿದರು. ಮಕ್ಕಳು ವಿಜ್ಞಾನ, ಗಣಿತ ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಆ ನಿಟ್ಟಿನಲ್ಲಿ ಇದೊಂದು ಉತ್ತಮ ಪ್ರಯೋಗ ಎಂದು ತಿಳಿಸಿದರು. ಇತರೆ ಊರುಗಳಲ್ಲಿಯೂ ಈ ರೀತಿಯ ವಿಜ್ಞಾನ ಮೇಳ ಏರ್ಪಡಿಸಲು ಸೂಚಿಸಿದರು.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಸಚಿವ ಗೋವಿಂದ ಕಾರಜೋಳ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವನ್ನನ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

Next Post

ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL